Andolana originals

ಚಾವಣಿ ಸೋರಿಕೆ, ಗಬ್ಬು ನಾರುತ್ತಿರುವ ಆವರಣ…

ದೊಡ್ಡ ಕವಲಂದೆ ನಾಡಕಚೇರಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ; ಸಮಸ್ಯೆ ಬಗೆಹರಿಸಲು ಆಗ್ರಹ

ಪಿ.ಶಿವಕುಮಾರ್

ದೊಡ್ಡ ಕವಲಂದೆ: ನಂಜನಗೂಡು ವಿಧಾನಸಭಾ ಕ್ಷೇತ್ರದ ದೊಡ್ಡ ಕವಲಂದೆ ಗ್ರಾಮದಲ್ಲಿರುವ ನಾಡಕಚೇರಿ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.

ಮುಖ್ಯವಾಗಿ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲ. ೧೫ ವರ್ಷಗಳಿಂದಲೂ ಆಸ್ಪತ್ರೆಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡವನ್ನು ನಾಡಕಚೇರಿಗೆ ಹಸ್ತಾಂತರಿಸಿಲ್ಲ. ಈಗಲೂ ಆಸ್ಪತ್ರೆ ಹೆಸರಿನಲ್ಲಿ ನಮೂದಾಗಿದೆ.

ಕಟ್ಟಡ ನಿರ್ಮಿಸಿ ಹಲವಾರು ವರ್ಷಗಳು ಕಳೆದಿರುವ ಕಾರಣ ಕಟ್ಟಡ ದುಸ್ಥಿತಿಗೆ ತಲುಪಿದೆ. ಕಟ್ಟಡದ ಗೋಡೆಗಳು ಮತ್ತು ಚಾವಣಿ ಶಿಥಿಲಾವಸ್ಥೆಗೆ ತಲುಪಿದೆ. ಚಾವಣಿಯ ಹೆಂಚುಗಳು ಕಳಚಿ ಬೀಳುತ್ತಿದ್ದು, ಮಳೆಗಾಲದಲ್ಲಿ ಕಟ್ಟಡ ಸೋರುತ್ತಿದೆ.

ಹೋಬಳಿ ವ್ಯಾಪ್ತಿಯ ರೈತರಿಗೆ ಸಂಬಂಧಪಟ್ಟ ಸಾಕಷ್ಟು ದಾಖಲೆಗಳು ಲಭ್ಯವಿದ್ದು, ಅಭದ್ರತೆ ಕಾಡುತ್ತಿದೆ. ಒಂದು ವೇಳೆ ದಾಖಲಾತಿ ಹಾಳಾದರೆ ಯಾರು ಹೊಣೆ ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಗಬ್ಬು ನಾರುತ್ತಿರುವ ಆವರಣ: ನಾಡಕಚೇರಿ ಆವರಣ ಗಬ್ಬುನಾರುತ್ತಿದೆ. ಮಳೆಗಾಲದಲ್ಲಿ ಕೆಸರುಗದ್ದೆ ಆಗುವ ಜೊತೆಗೆ ಕಸ-ಕಡ್ಡಿಗಳ ರಾಶಿ ಎಲ್ಲೆಡೆ ಕಂಡು ಬರುತ್ತದೆ. ಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಗೃಹ, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲವಾಗಿದೆ. ದೊಡ್ಡ ಕವಲಂದೆ ಗ್ರಾಮ ಹೋಬಳಿ ಕೇಂದ್ರವಾಗಿದ್ದು, ಅಭಿವೃದ್ಧಿ ಮಾತ್ರ ಮರೀಚಿಕೆ ಯಾಗಿದೆ.

ಕವಲಂದೆ ಸಮೀಪದ ಹೊಸೂರು ಗ್ರಾಮದ ಗೇಟ್ ಬಳಿ ವಿದ್ಯಾರ್ಥಿ ನಿಲಯಕ್ಕೆ ಸೇರಿದ ಸುಸಜ್ಜಿತವಾದ ಕಟ್ಟಡ ಖಾಲಿ ಇದೆ. ಈ ವಿದ್ಯಾರ್ಥಿನಿಲಯವು ಸ್ಥಗಿತಗೊಂಡು ಹಲವಾರು ವರ್ಷಗಳು ಕಳೆದಿದ್ದು, ಪಾಳು ಬಿದ್ದಿದೆ. ಈ ಖಾಲಿ ಕಟ್ಟಡವನ್ನಾದರೂ ನಾಡ ಕಚೇರಿಗೆ ಅಥವಾ ಬೇರೆ ಯಾವುದಾದರೂ ಸರ್ಕಾರಿ ಕಚೇರಿಗೆ ಬಳಸಿಕೊಳ್ಳಬಹುದು ಎಂಬುದು ಸ್ಥಳೀಯರ ಸಲಹೆಯಾಗಿದೆ. ಸ್ಥಳೀಯ ಶಾಸಕರು, ಸಂಸದರು ಇತ್ತ ಗಮನ ಹರಿಸಿ ದೊಡ್ಡ ಕವಲಂದೆ ನಾಡಕಚೇರಿಗೆ ನೂತನ ಕಟ್ಟಡ ಒದಗಿಸುವ ಜೊತೆಗೆ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

” ದೊಡ್ಡ ಕವಲಂದೆ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲದಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುತ್ತೇನೆ.”

-ಶಿವಕುಮಾರ್ ಕಾಸನೂರು, ತಹಸಿಲ್ದಾರ್

” ದೊಡ್ಡ ಕವಲಂದೆ ನಾಡಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕೂರಲು ಆಸನಗಳ ವ್ಯವಸ್ಥೆ ಇಲ್ಲ. ಶೌಚಗೃಹ ಇಲ್ಲ. ಕುಡಿಯಲು ನೀರು ಇಲ್ಲ. ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೌಲಭ್ಯ ಒದಗಿಸಬೇಕು.”

-ಸಿದ್ದಲಿಂಗಪ್ಪ, ಕವಲಂದೆ ಗ್ರಾಪಂ ಸದಸ್ಯರು, ಹರಗನಪುರ

ಆಂದೋಲನ ಡೆಸ್ಕ್

Recent Posts

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

6 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

4 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

4 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

17 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

18 hours ago