Andolana originals

ಚಾವಣಿ ಸೋರಿಕೆ, ಗಬ್ಬು ನಾರುತ್ತಿರುವ ಆವರಣ…

ದೊಡ್ಡ ಕವಲಂದೆ ನಾಡಕಚೇರಿಯಲ್ಲಿ ಸಾರ್ವಜನಿಕರಿಗೆ ಕಿರಿಕಿರಿ; ಸಮಸ್ಯೆ ಬಗೆಹರಿಸಲು ಆಗ್ರಹ

ಪಿ.ಶಿವಕುಮಾರ್

ದೊಡ್ಡ ಕವಲಂದೆ: ನಂಜನಗೂಡು ವಿಧಾನಸಭಾ ಕ್ಷೇತ್ರದ ದೊಡ್ಡ ಕವಲಂದೆ ಗ್ರಾಮದಲ್ಲಿರುವ ನಾಡಕಚೇರಿ ಅವ್ಯವಸ್ಥೆಯಿಂದ ಕೂಡಿದೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿಬಂದಿದೆ.

ಮುಖ್ಯವಾಗಿ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲ. ೧೫ ವರ್ಷಗಳಿಂದಲೂ ಆಸ್ಪತ್ರೆಗೆ ಸೇರಿದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡವನ್ನು ನಾಡಕಚೇರಿಗೆ ಹಸ್ತಾಂತರಿಸಿಲ್ಲ. ಈಗಲೂ ಆಸ್ಪತ್ರೆ ಹೆಸರಿನಲ್ಲಿ ನಮೂದಾಗಿದೆ.

ಕಟ್ಟಡ ನಿರ್ಮಿಸಿ ಹಲವಾರು ವರ್ಷಗಳು ಕಳೆದಿರುವ ಕಾರಣ ಕಟ್ಟಡ ದುಸ್ಥಿತಿಗೆ ತಲುಪಿದೆ. ಕಟ್ಟಡದ ಗೋಡೆಗಳು ಮತ್ತು ಚಾವಣಿ ಶಿಥಿಲಾವಸ್ಥೆಗೆ ತಲುಪಿದೆ. ಚಾವಣಿಯ ಹೆಂಚುಗಳು ಕಳಚಿ ಬೀಳುತ್ತಿದ್ದು, ಮಳೆಗಾಲದಲ್ಲಿ ಕಟ್ಟಡ ಸೋರುತ್ತಿದೆ.

ಹೋಬಳಿ ವ್ಯಾಪ್ತಿಯ ರೈತರಿಗೆ ಸಂಬಂಧಪಟ್ಟ ಸಾಕಷ್ಟು ದಾಖಲೆಗಳು ಲಭ್ಯವಿದ್ದು, ಅಭದ್ರತೆ ಕಾಡುತ್ತಿದೆ. ಒಂದು ವೇಳೆ ದಾಖಲಾತಿ ಹಾಳಾದರೆ ಯಾರು ಹೊಣೆ ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಗಬ್ಬು ನಾರುತ್ತಿರುವ ಆವರಣ: ನಾಡಕಚೇರಿ ಆವರಣ ಗಬ್ಬುನಾರುತ್ತಿದೆ. ಮಳೆಗಾಲದಲ್ಲಿ ಕೆಸರುಗದ್ದೆ ಆಗುವ ಜೊತೆಗೆ ಕಸ-ಕಡ್ಡಿಗಳ ರಾಶಿ ಎಲ್ಲೆಡೆ ಕಂಡು ಬರುತ್ತದೆ. ಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಗೃಹ, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲವಾಗಿದೆ. ದೊಡ್ಡ ಕವಲಂದೆ ಗ್ರಾಮ ಹೋಬಳಿ ಕೇಂದ್ರವಾಗಿದ್ದು, ಅಭಿವೃದ್ಧಿ ಮಾತ್ರ ಮರೀಚಿಕೆ ಯಾಗಿದೆ.

ಕವಲಂದೆ ಸಮೀಪದ ಹೊಸೂರು ಗ್ರಾಮದ ಗೇಟ್ ಬಳಿ ವಿದ್ಯಾರ್ಥಿ ನಿಲಯಕ್ಕೆ ಸೇರಿದ ಸುಸಜ್ಜಿತವಾದ ಕಟ್ಟಡ ಖಾಲಿ ಇದೆ. ಈ ವಿದ್ಯಾರ್ಥಿನಿಲಯವು ಸ್ಥಗಿತಗೊಂಡು ಹಲವಾರು ವರ್ಷಗಳು ಕಳೆದಿದ್ದು, ಪಾಳು ಬಿದ್ದಿದೆ. ಈ ಖಾಲಿ ಕಟ್ಟಡವನ್ನಾದರೂ ನಾಡ ಕಚೇರಿಗೆ ಅಥವಾ ಬೇರೆ ಯಾವುದಾದರೂ ಸರ್ಕಾರಿ ಕಚೇರಿಗೆ ಬಳಸಿಕೊಳ್ಳಬಹುದು ಎಂಬುದು ಸ್ಥಳೀಯರ ಸಲಹೆಯಾಗಿದೆ. ಸ್ಥಳೀಯ ಶಾಸಕರು, ಸಂಸದರು ಇತ್ತ ಗಮನ ಹರಿಸಿ ದೊಡ್ಡ ಕವಲಂದೆ ನಾಡಕಚೇರಿಗೆ ನೂತನ ಕಟ್ಟಡ ಒದಗಿಸುವ ಜೊತೆಗೆ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂಬುದು ಸಾರ್ವಜನಿಕರ ಒತ್ತಾಯವಾಗಿದೆ.

” ದೊಡ್ಡ ಕವಲಂದೆ ನಾಡಕಚೇರಿಗೆ ಸ್ವಂತ ಕಟ್ಟಡ ಇಲ್ಲದಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳುತ್ತೇನೆ.”

-ಶಿವಕುಮಾರ್ ಕಾಸನೂರು, ತಹಸಿಲ್ದಾರ್

” ದೊಡ್ಡ ಕವಲಂದೆ ನಾಡಕಚೇರಿಗೆ ಬರುವ ರೈತರು ಮತ್ತು ಸಾರ್ವಜನಿಕರಿಗೆ ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕೂರಲು ಆಸನಗಳ ವ್ಯವಸ್ಥೆ ಇಲ್ಲ. ಶೌಚಗೃಹ ಇಲ್ಲ. ಕುಡಿಯಲು ನೀರು ಇಲ್ಲ. ಮೇಲಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೌಲಭ್ಯ ಒದಗಿಸಬೇಕು.”

-ಸಿದ್ದಲಿಂಗಪ್ಪ, ಕವಲಂದೆ ಗ್ರಾಪಂ ಸದಸ್ಯರು, ಹರಗನಪುರ

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

28 mins ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

1 hour ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

10 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

10 hours ago