Andolana originals

ದೀಪಾವಳಿ ಜಾತ್ರೆಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹದೇಶ್ವರ ಬೆಟ್ಟದಲ್ಲಿ ೫ ದಿನಗಳ ಕಾಲ ನಡೆದ ಉತ್ಸವ ; ವಿವಿಧ ಸೇವೆಗಳು, ಲಾಡು ಮಾರಾಟದಿಂದ ಹೆಚ್ಚಿನ ಆದಾಯ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ೫ ದಿನಗಳ ಕಾಲ ಜರುಗಿದ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ವಿವಿಧ ಸೇವೆಗಳು, ಉತ್ಸವಗಳು, ಲಾಡು ಮಾರಾಟ, ಇನ್ನಿತರ ಸೇವೆಗಳಿಂದ ಒಟ್ಟು ೨.೧೬ ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಮ.ಬೆಟ್ಟದಲ್ಲಿ ಅ.೧೮ ರಿಂದ ೨೨ರವರೆಗೆ ದೀಪಾವಳಿ ಜಾತ್ರೆ ಜರುಗಿದ್ದು, ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ೫ ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದರು. ೫ ದಿನಗಳ ಅವಧಿಯಲ್ಲಿ ಹುಲಿವಾಹನ, ರುದ್ರಾಕ್ಷಿ ವಾಹನ, ಬಸವ ವಾಹನ, ಚಿನ್ನ ಹಾಗೂ ಬೆಳ್ಳಿ ತೇರಿನ ಉತ್ಸವಗಳು, ಪಂಚಕಳಸ ಸಮೇತ ನವರತ್ನ ಕಿರೀಟ ಧಾರಣೆ, ಏಕವಾರ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಪಂಚಾಮೃತ ಅಭಿಷೇಕ, ಇನ್ನಿತರ ಸೇವೆಗಳು ಜರುಗಿವೆ. ಜತೆಗೆ ಲಾಡು, ತೀರ್ಥ, ಮಿಶ್ರ ಪ್ರಸಾದ, ಕಲ್ಲು ಸಕ್ಕರೆ, ಬ್ಯಾಗ್ ಮಾರಾಟ, ಪಡಿ ಸೇವೆ, ವಿಶೇಷ ಪ್ರವೇಶ ಶುಲ್ಕ, ಪುದುವಟ್ಟು ಠೇವಣಿ, ಇನ್ನಿತರ ಸೇವಾ ಮೂಲಗಳಿಂದ ಒಟ್ಟು ೨,೧೬,೪೫,೦೨೦ ರೂ. ಹಣ ಸಂಗ್ರಹವಾಗಿದೆ.

ಉತ್ಸವಗಳಿಂದ ಹೆಚ್ಚು ಆದಾಯ: ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಲಾಡು ಮಾರಾಟದಿಂದ ೬೩,೭೦,೭೨೫ ರೂ., ವಿಶೇಷ ಪ್ರವೇಶ ಶುಲ್ಕದಿಂದ ೫೨,೧೬,೨೫೦ ರೂ., ಮಿಶ್ರಪ್ರಸಾದದಿಂದ ೬,೭೮,೧೨೫, ಮಾಹಿತಿ ಕೇಂದ್ರದಿಂದ ೨,೭೫,೫೫೦ ವಿಶೇಷ ಪ್ರವೇಶ ಶುಲ್ಕದಿಂದ ೫೨,೧೬,೨೫೦ ಪುದುವಟ್ಟಿನಿಂದ ೧,೯೯.೨೨೬ ರೂ, ಪಡಿ ಸೇವೆಯಿಂದ೧,೯೦,೦೫೦ ರೂ., ಬ್ಯಾಗ್ ಮಾರಾಟದಿಂದ ೧,೦೬,೯೬೫ ರೂ., ಇತರ ಸೇವಾ ಮೂಲದಿಂದ ೧,೦೭,೭೦೦ ರೂ., ದೇಗುಲದಲ್ಲಿ ನಡೆದ ಚಿನ್ನ, ಬೆಳ್ಳಿ ತೇರಿನ ಉತ್ಸವ, ಬಸವ, ರುದ್ರಾಕ್ಷಿ ಹಾಗೂ ಹುಲಿ ಉತ್ಸವಾದಿ ಸೇವೆಗಳಿಂದ ೭೬,೩೫,೯೯೯ ರೂ. ಸಂಗ್ರಹವಾಗಿದೆ. ಕಳೆದ ವರ್ಷ ದೀಪಾವಳಿ ಜಾತ್ರಾ ದಿನಗಳಲ್ಲಿ ವಿಶೇಷ ಪ್ರವೇಶ ಶುಲ್ಕದಿಂದ ೬೫,೩೪,೨೫೦ ರೂ., ಲಾಡು ಮಾರಾಟದಿಂದ ೫೮,೩೩,೯೨೫ ರೂ. ಸೇರಿ ಒಟ್ಟು ೨,೪೩,೫೬,೪೩೬ ರೂ. ಸಂಗ್ರಹವಾಗಿತ್ತು.

ಇದನ್ನು ಓದಿ: ನಾವು ಈಗ ಇರುವುದು ಮೈಸೂರೋ ಅಲ್ಲವೋ!

ಲಾಡು ಮಾರಾಟ ಹೆಚ್ಚಳ: 

ಮ.ಬೆಟ್ಟದಲ್ಲಿ ತಯಾರಿಸುವ ಲಾಡು ಉತ್ಕ ಷ್ಟ ಗುಣಮಟ್ಟದಿಂದ ಕೂಡಿದ್ದು, ಭಕ್ತರು ಮಾದಪ್ಪನ ಮಹಾಪ್ರಸಾದವೆಂದು ಭಾವಿಸಿ ತಪ್ಪದೇ ಪ್ರಸಾದವನ್ನು ತೆಗೆದುಕೊಂಡು ಹೋಗುತ್ತಾರೆ. ೨೦೨೩ರ ದೀಪಾವಳಿಯಲ್ಲಿ ಜಾತ್ರಾ ವೇಳೆ ಲಾಡು ಮಾರಾಟದಿಂದ ೫೪,೬೮,೫೦೦ ರೂ. ಗಳಿಸಿದ್ದರೆ, ೨೦೨೪ರಲ್ಲಿ ೫೮,೩೩,೯೨೫ರೂ. ಬಂದಿತ್ತು. ಈ ಬಾರಿ ಲಾಡು ಮಾರಾಟದಿಂದ ೬೩,೭೦,೭೨೫ ರೂ. ಬಂದಿದೆ. ಹಾಗಾಗಿ ವರ್ಷದಿಂದ ವರ್ಷಕ್ಕೆ ಲಾಡು ಮಾರಾಟ ಹೆಚ್ಚಳವಾಗುತ್ತಿರುವುದು ಕಂಡುಬಂದಿದೆ.

” ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ವಿವಿಧ ಸೇವಾ ಮೂಲಗಳಿಂದ ಪ್ರಾಧಿಕಾರಕ್ಕೆ ೨.೧೬ ಕೋಟಿ ರೂ. ಆದಾಯ ಹರಿದು ಬಂದಿದೆ. ಮಹಾ ರಥೋತ್ಸವದ ದಿನ ನಿರಂತರ ಮಳೆ ಇದ್ದರೂ ಲಾಡು ಮಾರಾಟ ಸ್ವಲ್ಪ ಹೆಚ್ಚಳವಾಗಿದೆ. ಉಳಿದಂತೆ ಜಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಕಾರ್ತಿಕ ಮಾಸ ಪ್ರಾರಂಭವಾಗಿದ್ದು, ಈಗಾಗಲೇ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಿರುಪತಿ ಮಾದರಿಯಲ್ಲಿ ಭಕ್ತಾದಿಗಳಿಗೆ ನೀಡಲಾಗುವ ಲಾಡುವಿನಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲಾಗಿದೆ. ಹಾಗಾಗಿ ಹೆಚ್ಚಿನ ಭಕ್ತರು ಖರೀಸುತ್ತಿದ್ದು, ಮಾರಾಟದಲ್ಲಿ ಹೆಚ್ಚಳ ಕಂಡಿದೆ. ಈ ಬಾರಿಯ ಜಾತ್ರಾ ಮಹೋತ್ಸವದ ಬಗ್ಗೆ ಭಕ್ತಾದಿಗಳು ಪ್ರಶಂಸೆ ವ್ಯಕ್ತಪಡಿಸಿರುವುದು ಸಂತಸ ತಂದಿದೆ.”

-ಎ.ಈ.ರಘು, ಕಾರ್ಯದರ್ಶಿ, ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ

ಮಹಾದೇಶ್ ಎಂ.ಗೌಡ

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

29 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

51 mins ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

1 hour ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

1 hour ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

3 hours ago