ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ
ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಗ್ರಾಮೀಣ ಕಲೆಗಳ ಪ್ರದರ್ಶನ ನಮ್ಮ ಜಾನಪದ ಕಲೆಯನ್ನು ಅನಾವರಣಗೊಳಿಸಿತು.
ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದ ಶ್ರೀ ದೊಡ್ಡಮ್ಮ, ಕರಿಯಮ್ಮ ಸಿಡಿ ಮತ್ತು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವರ ಓಕುಳಿ ಹಬ್ಬ ನಡೆದ ಮಾರನೇ ದಿನ ಮಂಗಳವಾರ ವಿವಿಧ ಜನಪದ ಗ್ರಾಮೀಣ ಕಲೆಗಳನ್ನು ವಿಭಿನ್ನವಾಗಿ ಪ್ರದರ್ಶಿಸಲಾಯಿತು.
ಗ್ರಾಮೀಣ ಕಲೆಗಳಾದ ಹುಲಿ ವೇಷ, ಪಾಳೆಗಾರಿಕೆ, ಕೀಲು ಕುದುರೆ, ಮಹಿಷಿ, ಮರಿ ಹುಲಿಗಳು, ಯಮಕಿಂಕರರ ವೇಷ ಸೇರಿದಂತೆ ಅನೇಕ ವಿಭಿನ್ನ ರೀತಿಯ ಜನಪದ ಕಲೆಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ನಾಡಿನ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಕಲಾ ಪ್ರಕಾರಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಜನರಿಗೆ ಉತ್ತಮ ಸಂದೇಶ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ನಾನು ನನ್ನ ಹತ್ತನೇ ವಯಸ್ಸಿನಿಂದ ಗ್ರಾಮದ ಹಬ್ಬಗಳಲ್ಲಿ ಹುಲಿ ವೇಷ ಹಾಕುತ್ತಿದ್ದೇನೆ. ನಾನು ವೇಷ ಹಾಕಿ ಕುಣಿಯುವಾಗ ಜನರು ಪ್ರತಿ ಬಾರಿ ನನಗೆ ಬೆಂಬಲ ನೀಡಿ ಸೂರ್ತಿ ತುಂಬುತ್ತಾರೆ. ನನಗೆ ೫೮ ವರ್ಷ ತುಂಬಿದೆ. ಆದರೂ ಇನ್ನೂ ಕುಣಿತ ಹಾಕಬೇಕು ಎನ್ನುವ ಆಸೆ ಹೊಂದಿದ್ದೇನೆ ಎಂದು ಹುಲಿ ವೇಷ ಪಾತ್ರಧಾರಿ ಸತ್ಯನಾರಾಯಣ ಹೇಳಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…