ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ
ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಗ್ರಾಮೀಣ ಕಲೆಗಳ ಪ್ರದರ್ಶನ ನಮ್ಮ ಜಾನಪದ ಕಲೆಯನ್ನು ಅನಾವರಣಗೊಳಿಸಿತು.
ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದ ಶ್ರೀ ದೊಡ್ಡಮ್ಮ, ಕರಿಯಮ್ಮ ಸಿಡಿ ಮತ್ತು ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವರ ಓಕುಳಿ ಹಬ್ಬ ನಡೆದ ಮಾರನೇ ದಿನ ಮಂಗಳವಾರ ವಿವಿಧ ಜನಪದ ಗ್ರಾಮೀಣ ಕಲೆಗಳನ್ನು ವಿಭಿನ್ನವಾಗಿ ಪ್ರದರ್ಶಿಸಲಾಯಿತು.
ಗ್ರಾಮೀಣ ಕಲೆಗಳಾದ ಹುಲಿ ವೇಷ, ಪಾಳೆಗಾರಿಕೆ, ಕೀಲು ಕುದುರೆ, ಮಹಿಷಿ, ಮರಿ ಹುಲಿಗಳು, ಯಮಕಿಂಕರರ ವೇಷ ಸೇರಿದಂತೆ ಅನೇಕ ವಿಭಿನ್ನ ರೀತಿಯ ಜನಪದ ಕಲೆಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ನಾಡಿನ ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಕಲಾ ಪ್ರಕಾರಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರದರ್ಶನಗೊಳ್ಳುತ್ತಿದ್ದು, ಜನರಿಗೆ ಉತ್ತಮ ಸಂದೇಶ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ನಾನು ನನ್ನ ಹತ್ತನೇ ವಯಸ್ಸಿನಿಂದ ಗ್ರಾಮದ ಹಬ್ಬಗಳಲ್ಲಿ ಹುಲಿ ವೇಷ ಹಾಕುತ್ತಿದ್ದೇನೆ. ನಾನು ವೇಷ ಹಾಕಿ ಕುಣಿಯುವಾಗ ಜನರು ಪ್ರತಿ ಬಾರಿ ನನಗೆ ಬೆಂಬಲ ನೀಡಿ ಸೂರ್ತಿ ತುಂಬುತ್ತಾರೆ. ನನಗೆ ೫೮ ವರ್ಷ ತುಂಬಿದೆ. ಆದರೂ ಇನ್ನೂ ಕುಣಿತ ಹಾಕಬೇಕು ಎನ್ನುವ ಆಸೆ ಹೊಂದಿದ್ದೇನೆ ಎಂದು ಹುಲಿ ವೇಷ ಪಾತ್ರಧಾರಿ ಸತ್ಯನಾರಾಯಣ ಹೇಳಿದರು.
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…
ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…