Andolana originals

ಗ್ರಾಮೀಣ ಪ್ರತಿಭೆ ನಿತಿಲ್ ಈಗ ಚಲನಚಿತ್ರ ನಾಯಕ ನಟ

ಮಂಜು ಕೋಟೆ

ಕೋಟೆ: ಯುವಕನ ಪ್ರತಿಭೆ ಗುರುತಿಸಿ ಅವಕಾಶ ನೀಡಿರುವ ಕಾಲಘಟ್ಟ ಚಿತ್ರತಂಡ; ಜೂ.೧೯ರಂದು ಚಿತ್ರ ಬಿಡುಗಡೆ 

ಎಚ್.ಡಿ.ಕೋಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಪ್ರತಿಭೆ, ಪಾತ್ರೆ ವ್ಯಾಪಾರಿಯ ಮಗ ನಿತಿಲ್ ಚಲನಚಿತ್ರ ನಾಯಕನಟನಾಗಿ ಅಭಿನಯಿಸಿರುವ ‘ಕಾಲಘಟ್ಟ’ ಚಲನಚಿತ್ರ ಬಿಡುಗಡೆ ಗೊಳ್ಳುತ್ತಿರುವುದು ತಾಲ್ಲೂಕಿನ ಜನತೆಯಲ್ಲಿ ಸಂತಸ ಮೂಡಿಸಿದೆ.

ತಾಲ್ಲೂಕಿನ ಗಿರಿಜನ ಪ್ರತಿಭೆ ರಾಜೇಶ್, ಸುನಾಮಿ ಕಿಟ್ಟಿ, ಗುಳಿಕಟ್ಟೆ ಸೂರ್ಯ ಕುಮಾರ್, ಅಮೃತ್ ಅವರುಗಳು ಈಗಾಗಲೇ ಚಲನಚಿತ್ರ ರಂಗಕ್ಕೆ ಪ್ರವೇಶಿಸಿ ನಾಯಕ ನಟನಾಗಿ ಹಾಗೂ ಖಳನಾಯಕರಾಗಿ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಪಟ್ಟಣದ ಹ್ಯಾಂಡ್‌ಪೋಸ್ಟ್ ಯರಹಳ್ಳಿ ಗ್ರಾಮದ ಪಾತ್ರೆ ವ್ಯಾಪಾರಿ ಬಡ ಕುಟುಂಬದ ಮಂಜುರಾವ್ ಮತ್ತು ದಿವ್ಯ ದಂಪತಿಯ ಪುತ್ರ ಎಚ್.ಎಂ.ನಿತಿಲ್ ‘ಕಾಲಘಟ್ಟ’ ಎಂಬ ಚಲನಚಿತ್ರದಲ್ಲಿ ನಾಯಕ ನಟ ನಾಗಿ ಅಭಿನಯಿಸಿದ್ದಾರೆ. ಅವರ ಜೊತೆ ನಾಯಕ ನಟಿಯಾಗಿ ಮೇಘನ ಖುಷಿ ಅಭಿನಯಿಸಿದ್ದಾರೆ.

೨೦೧೮ರಲ್ಲಿ ಮಲೇಶಿಯಾದ ಕೊಲಾಲಂಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಎರಡನೇ ಸ್ಥಾನ ಪಡೆದು ತಾಲ್ಲೂಕಿನಲ್ಲಿ ಗುರುತಿಸಿಕೊಂಡರು. ನಿತಿಲ್ ಅವರ ಸ್ವಭಾವ, ಗುಣ, ಪ್ರತಿಭೆಯನ್ನು ಗಮ ನಿಸಿದ ಕಾಲಘಟ್ಟ ಸಿನಿಮಾದ ನಿರ್ದೇಶಕ ರಾದ ಕೆ.ಪ್ರಕಾಶ ಅಂಬಳೆ, ಚಿತ್ರದ ನಿರ್ಮಾಪಕ ಚಿಕ್ಕೇಗೌಡ ತಳಗವಾದಿ ಅವರು ನಿತಿಲ್‌ಗೆ ಕಾಲಘಟ್ಟ ಚಲನಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುವ ಅವಕಾಶ ಮಾಡಿಕೊಟ್ಟರು.

ಈ ಚಿತ್ರದಲ್ಲಿ ಹಿರಿಯ, ಕಿರಿಯ ನಟ- ನಟಿಯರು ಅಭಿನಯಿಸಿದ್ದು, ಚಿತ್ರೀಕರಣ ಪೂರ್ಣಗೊಂಡಿದೆ. ಇದೇ ಜೂ.೧೯ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳುತ್ತಿದೆ. ಚಲನಚಿತ್ರ ನಾಯಕನಟನಾಗಿ ತಾಲ್ಲೂಕಿನ ಬಡ ಕುಟುಂಬದ ಯುವಕನಿಗೆ ಅವಕಾಶ ದೊರಕಿದ್ದರಿಂದ ತಾಲ್ಲೂ ಕಿನ ಸಂಘ-ಸಂಸ್ಥೆಗಳವರು, ಶಾಸಕರು, ರಾಜ್ಯದ ಇನ್ನಿತರ ಕಲಾವಿದರು ಸಂತಸ ವ್ಯಕ್ತಪಡಿಸಿ ಶುಭಕೋರಿ ಚಲನಚಿತ್ರದ ಪ್ರಚಾರ ಮಾಡಿದ್ದಾರೆ.

ತಾಲ್ಲೂಕಿನಲ್ಲಿ ಅನೇಕ ಪ್ರತಿಭೆಗಳಿಗೆ ಚಲನಚಿತ್ರ, ಧಾರಾವಾಹಿ, ಕಿರುಚಿತ್ರ,ರಿಯಾಲಿಟಿ ಶೋ ಮುಂತಾದ ಅನೇಕ ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಿವೆ. ಇವುಗಳನ್ನು ಸದುಪಯೋಗಪಡಿಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆದಾಗ ಅವರ ಭವಿಷ್ಯವೂ ಉಜ್ವಲವಾಗುವ ಜತೆಗೆ ತಾಲ್ಲೂಕಿಗೂ ಹೆಮ್ಮೆಯ ಸಂಗತಿಯಾಗಲಿದೆ.

” ನಾನು ಪಾತ್ರೆ ವ್ಯಾಪಾರಿಯಾಗಿದ್ದು, ನನ್ನ ಮಗನಿಗೆ ಉತ್ತಮ ಕಥೆ ಇರುವ ‘ಕಾಲಘಟ್ಟ’ ಚಲನಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುವ ಅವಕಾಶವನ್ನು ಚಿತ್ರತಂಡದವರು ನೀಡಿರುವುದು ನಮಗೆ ಮತ್ತು ತಾಲ್ಲೂಕಿನ ಜನರಿಗೆ ಸಂತೋಷ ತಂದಿದೆ. ನನ್ನ ಮಗನ ಬೆಳವಣಿಗೆಗೆ ಎಲ್ಲರ ಸಹಕಾರ ಮುಖ್ಯವಾಗಿದೆ.”

-ಮಂಜು ರಾವ್, ಪಾತ್ರೆ ವ್ಯಾಪಾರಿ

 

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

17 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

17 hours ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

1 day ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 day ago