ಓದುಗರ ಪತ್ರ
ಕನ್ನಡ ಪರ ಹೋರಾಟಗಾರ, ಹಿರಿಯ ಗಾಂಧಿವಾದಿ ಹಾಗೂ ಮೈಸೂರಿನ ನೃಪತುಂಗ ಶಾಲೆಯ ಸಂಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ ಇನ್ನಿಲ್ಲ ಎಂಬುದು ನೋವಿನ ಸಂಗತಿ. ಗೋಕಾಕ್ ಚಳವಳಿ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಪಡೆಯಲು ಆಗ್ರಹಿಸಿ ನಡೆದ ಚಳವಳಿ ಸೇರಿದಂತೆ ಹಲವಾರು ಚಳವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಾಡು, ನುಡಿಗೆ ಧಕ್ಕೆ ಬಂದಾಗ ಸಮಾನ ಮನಸ್ಕ ರೊಂದಿಗೆ ಚಳವಳಿಗೆ ಧುಮುಕುತ್ತಿದ್ದರು. ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯ ದರ್ಶಿಯಾಗಿಯೂ ತಮ್ಮ ಜೀವಿತ ಕಾಲದವರೆಗೂ ಮುಂದುವರಿದಿದ್ದರು. ನಗರದ ಮಹಾರಾಣಿ ಎನ್ ಟಿಎಂ ಮಾದರಿ ಶಾಲೆಯನ್ನು ಉಳಿಸಿಕೊಳ್ಳಲು ಹೋರಾಟ ನಡೆಸಿದ್ದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಇಂಗ್ಲಿಷ್-ಕನ್ನಡ ನಿಘಂಟಿನ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದ ಅವರು ೨೫,೦೦೦ ಪದಗಳಿರುವ ಸಂಕ್ಷಿಪ್ತ ಇಂಗ್ಲಿಷ್- ಕನ್ನಡ ನಿಘಂಟನ್ನು ಸಿದ್ಧಪಡಿಸಿದ್ದರು. ಕನ್ನಡಕ್ಕಾಗಿ ಅವರು ನಡೆಸಿದ ಹೋರಾಟ ಇತರರಿಗೆ ಮಾದರಿ ಯಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…