Andolana originals

ಎಂಡಿಸಿಸಿಬಿ ಅಧ್ಯಕ್ಷರಾಗಿ ಸಚ್ಚಿನ್ ಆಯ್ಕೆ ಖಚಿತ

ಬಿ.ಟಿ. ಮೋಹನ್ ಕುಮಾರ್

ಉಪಾಧ್ಯಕ್ಷ ಸ್ಥಾನಕ್ಕೆ ಚಲುವರಾಜು ಅಭ್ಯರ್ಥಿ ಘೋಷಣೆ

ಅಪೆಕ್ಸ್ ಬ್ಯಾಂಕ್‌ಗೆ ಪಿ.ಎಂ.ನರೇಂದ್ರಸ್ವಾಮಿ ಪ್ರತಿನಿಧಿ 

ಮಂಡ್ಯ: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಪುತ್ರ ಸಚ್ಚಿನ್ ಚಲುವರಾಯಸ್ವಾಮಿ, ಉಪಾಧ್ಯಕ್ಷ ಸ್ಥಾನಕ್ಕೆ ಚಲುವರಾಜು ಅವರನ್ನು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಕಳುಹಿಸಲು ತೀರ್ಮಾನಿಸಲಾಗಿದೆ.

ನ.೨೧ರ ಶುಕ್ರವಾರ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಕುಮಾರ ಕೃಪಾದಲ್ಲಿ ನಡೆದ ಸಭೆಯಲ್ಲಿ , ಸಚ್ಚಿನ್ ಚಲುವರಾಯಸ್ವಾಮಿ, ಚಲುವರಾಜು ಅವರನ್ನು ಕ್ರಮವಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಅಭ್ಯರ್ಥಿಗಳನ್ನಾಗಿ ಎಲ್ಲ ೧೧ ಮಂದಿ ನಿರ್ದೇಶಕರು, ಶಾಸಕರು, ಒಮ್ಮತದಿಂದ ಆಯ್ಕೆ ಮಾಡಿದರು. ತಾಂತ್ರಿಕವಾಗಿ ಶುಕ್ರವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಲಿದೆ. ೧೨ ನಿರ್ದೇಶಕರ ಸ್ಥಾನಗಳ ಪೈಕಿ ೧೧ ಮಂದಿ ಕಾಂಗ್ರೆಸ್ ಬೆಂಬಲಿತರೇ ಆಯ್ಕೆಯಾಗಿದ್ದು, ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳನ್ನಾಗಿ ಬೇರೆ ಪಕ್ಷದವರೊಂದಿಗೆ ಪೈಪೋಟಿಯ ಪ್ರಮೇಯವೇ ಇಲ್ಲವಾಗಿದೆ.

ಈ ಬಾರಿ ಎಂಡಿಸಿಸಿ ಬ್ಯಾಂಕ್ ಚುನಾವಣೆಗೂ ಮುನ್ನವೇ ೯ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಪಾರಮ್ಯ ಸಾಧಿಸಿತ್ತು. ಉಳಿದ ಮೂರು ಸ್ಥಾನಗಳಿಗೆನಡೆದ ಚುನಾವಣೆಯಲ್ಲಿ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಒಂದು ಸ್ಥಾನದಲ್ಲಿ ಮಾತ್ರ ಜಾ.ದಳ ಗೆಲುವು ಸಾಧಿಸಿತು.

ಮಳವಳ್ಳಿ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ನಾಗಮಂಗಲ ತಾಲ್ಲೂಕುಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಸಚಿನ್ ಚಲುವರಾಯಸ್ವಾಮಿ, ಜಿಲ್ಲೆಯ ಟಿಎಪಿಸಿಎಂಎಸ್‌ಗಳ ಕ್ಷೇತ್ರದಿಂದ ಕೆ.ವಿ.ದಿನೇಶ್, ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು, ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳ ಕ್ಷೇತ್ರದಿಂದ ಹಾಲಿಅಧ್ಯಕ್ಷ ಕೆ.ಸಿ.ಜೋಗಿಗೌಡ, ಜಿಲ್ಲೆಯಲ್ಲಿನ ಬಳಕೆದಾರರು ಮತ್ತು ಸಂಸ್ಕರಣ ಸಹಕಾರ ಸಂಘಗಳು ಮತ್ತು ನಗರ ಸಹಕಾರಿ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಎಚ್.ಅಶೋಕ್ ಹಾಗೂ ಮದ್ದೂರು ತಾಲ್ಲೂಕು ಪಿಎಸಿಸಿಎಸ್ ಕ್ಷೇತ್ರದಿಂದ ಪಿ.ಸಂದರ್ಶ, ಶ್ರೀರಂಗಪಟ್ಟಣ ತಾಲ್ಲೂಕು ಪಿಎಸಿಸಿಎಸ್ ಕ್ಷೇತ್ರದಿಂದ ಬಿ.ಗಿರೀಶ್, ಪಾಂಡವಪುರ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಎ.ವಿಜೇಂದ್ರಮೂರ್ತಿ, ಮಂಡ್ಯ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಸಿ.ಚಲುವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಮಂಡ್ಯ ತಾಲ್ಲೂಕು ಪಿಎಸಿಸಿಎಸ್‌ಗಳ ಕ್ಷೇತ್ರದಿಂದ ಎಸ್.ಪಿ. ಸತೀಶ್ ಮತ್ತು ಕೆ.ಆರ್.ಪೇಟೆ ತಾಲ್ಲೂಕು ಪಿಎಸಿಸಿಎಸ್‌ಗಳ ಕ್ಷೇತ್ರದಿಂದ ಎಸ್.ಎಸ್.ಅಂಬರೀಶ್ ಕಾಂಗ್ರೆಸ್ ಬೆಂಬಲಿತರಾಗಿ ಹಾಗೂ ಪಾಂಡವಪುರ ತಾಲ್ಲೂಕು ಪಿಎಸಿಸಿಎಸ್‌ಗಳ ಕ್ಷೇತ್ರದಿಂದ ಜಾ.ದಳ ಬೆಂಬಲಿತ ಅಭ್ಯರ್ಥಿ ಎಚ್.ಸಿ.ಪುಟ್ಟಸ್ವಾಮಿಗೌಡ ಚುನಾಯಿತರಾಗಿದ್ದಾರೆ.

” ನನ್ನ ಮಗ ಎನ್ನುವುದಕ್ಕಿಂತ ಹೆಚ್ಚಾಗಿ ನಾಗಮಂಗಲ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಸಚ್ಚಿನ್‌ನನ್ನು ಎಂಡಿಸಿಸಿ ಬ್ಯಾಂಕ್ ಚುನಾವಣೆ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಶಾಸಕರು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಚರ್ಚಿಸಿ, ಸಚ್ಚಿನ್ ಯುವಕನಾಗಿದ್ದು, ಬ್ಯಾಂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಿದ್ದಾರೆ ಎಂದು ತೀರ್ಮಾನಿಸಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಇದರಲ್ಲಿ ನನ್ನ ಪಾತ್ರವೇನಿಲ್ಲ.”

ಎನ್.ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

33 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

34 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

37 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

38 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

46 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

53 mins ago