Andolana originals

ಸಫಾರಿ ಬಂದ್; ವರ್ಷಾಂತ್ಯದಲ್ಲಿ ರೆಸಾರ್ಟ್‌ಗಳಿಗೆ ನಷ್ಟ

ಮಂಜು ಕೋಟೆ

ಹೊಸ ವರ್ಷದ ಸನಿಹದಲ್ಲಿ ತುಂಬಿ ತುಳುಕುತ್ತಿದ್ದ ರೆಸಾರ್ಟ್‌ಗಳು ಖಾಲಿ ಖಾಲಿ

ಎಚ್.ಡಿ.ಕೋಟೆ: ರೈತರ ಮೇಲೆ ನಿರಂತರ ಹುಲಿ ದಾಳಿ ಹಿನ್ನೆಲೆಯಲ್ಲಿ ತಾಲ್ಲೂಕು ವ್ಯಾಪ್ತಿಯ ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಬಂದ್ ಮಾಡಿರುವುದರಿಂದ ಈ ಹೊಸ ವರ್ಷದ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ರೆಸಾರ್ಟ್‌ಗಳಿಗೆ ಪ್ರವಾಸಿಗರು ಬಾರದೆ ಕೋಟ್ಯಂತರ ರೂ. ನಷ್ಟವಾಗುತ್ತಿರುವುದು ಬೆಳಕಿಗೆ ಬಂದಿದೆ.

ಕ್ಷೇತ್ರದ ಬಂಡಿಪುರ ಅಭಯಾರಣ್ಯ ವ್ಯಾಪ್ತಿಯ ಬಡಗಲಪುರ, ಹಳೇಹೆಗ್ಗುಡಿಲು, ಬೆಣ್ಣೆಗೆರೆ, ಕೂಡಗಿ ಗ್ರಾಮಗಳಲ್ಲಿ ರೈತರ ಮೇಲೆ ಹಾಡಹಗಲೇ ಹುಲಿ ದಾಳಿ ನಡೆಸಿ ಮೂವರನ್ನು ಬಲಿ ಪಡೆದಿದ್ದ ಘಟನೆ ರಾಜ್ಯದಲ್ಲೇ ಆತಂಕ ಸೃಷ್ಟಿಸಿದ್ದವು. ಈ ಘಟನೆ ಹಿನ್ನೆಲೆಯಲ್ಲಿ ಗ್ರಾಮಸ್ಥರು, ರೈತಸಂಘದವರು ತಮ್ಮ ಆಕ್ರೋಶವನ್ನು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಮೇಲೆ ವ್ಯಕ್ತಪಡಿಸಿ, ಸಫಾರಿ ನಿಷೇಧಿಸುವಂತೆ ಒತ್ತಾಯಿಸಿದ್ದ ಹಿನ್ನೆಲೆಯಲ್ಲಿ ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯದ ವ್ಯಾಪ್ತಿಯಲ್ಲಿದ್ದ ಎರಡು ಸಫಾರಿ ಕೇಂದ್ರಗಳನ್ನು ಬಂದ್ ಮಾಡಲು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದರು.

ಆನಂತರ ಹುಲಿಗಳ ಹಾವಳಿಗೆ ಕಡಿವಾಣ ಬಿದ್ದು, ಯಾವುದೇ ರೈತರ ಮೇಲೆ ಹುಲಿ ದಾಳಿ ಪ್ರಕರಣಗಳು ಮರುಕಳಿಸಲಿಲ್ಲ. ಈ ಹಿನ್ನೆಲೆಯಲ್ಲಿ ರೈತ ಸಂಘಗಳವರು, ಜನರು, ಮತ್ತೆ ಸ-ರಿಯನ್ನು ಆರಂಭಿಸಬಾರದು. ಒಂದುವೇಳೆ ಆರಂಭಿಸಿದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.

ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ದಮ್ಮನಕಟ್ಟೆ ಸಫಾರಿ ಕೇಂದ್ರ ಬಂದ್ಆಗಿರುವುದರಿಂದ ಈ ಭಾಗದ ಸರ್ಕಾರದ ಕಾರಾಪುರ ಜಂಗಲ್ ಲಾಡ್ಜ್ ರೆಸಾರ್ಟ್ ಸೇರಿದಂತೆ ೨೦ಕ್ಕೂ ಖಾಸಗಿ ರೆಸಾರ್ಟ್‌ಗಳಿಗೆ ಪ್ರವಾಸಿಗರ ಸಂಖ್ಯೆ ದಿನಗಳಿಂದ ದಿನಕ್ಕೆ ಕಡಿಮೆಯಾಗುತ್ತಿರುವುದರಿಂದ ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಭಾರೀ ನಷ್ಟವಾಗಿ ರೆಸಾರ್ಟ್‌ಗಳು ಮುಚ್ಚುವ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಅನೇಕ ರೆಸಾರ್ಟ್‌ಗಳ ಮಾಲೀಕರು, ಉದ್ಯೋಗಿಗಳು ಮತ್ತೆ ಸಫಾರಿ ಆರಂಭಿಸುವಂತೆ ಸಚಿವರು, ಶಾಸಕರು, ಉನ್ನತ ಅಧಿಕಾರಿಗಳ ಮೊರೆ ಹೋಗುತ್ತಿದ್ದಾರೆ. ಸಫಾರಿಯಿಂದ ಸರ್ಕಾರಕ್ಕೆ ಬರುವ ಆದಾಯ ಹಾಗೂ ರೈತರ ಸಾವು, ನೋವುಗಳ ವಿಚಾರವಾಗಿ ಜ.೪ರಂದು ನಡೆಯುವ ಸಭೆಯಲ್ಲಿ ಸಚಿವರು, ಶಾಸಕರು, ಜನಪ್ರತಿನಿಽಗಳು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

” ಸಫಾರಿ ಬಂದ್ ಆಗಿರುವುದರಿಂದ ಕಾಡಂಚಿನ ಪ್ರದೇಶಗಳಲ್ಲಿ ಹುಲಿಗಳ ಹಾವಳಿ ಕಡಿಮೆಯಾಗಿ, ರೈತರ ಸಾವು ನೋವು ಇಲ್ಲದಂತಾಗಿದೆ. ನಾವು ಈ ಭಾಗದ ಜಮೀನುಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಭೀತಿ ಕಡಿಮೆಯಾಗಿದೆ. ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸಚಿವರು ಮತ್ತು ಶಾಸಕರು, ಉನ್ನತ ಅಽಕಾರಿಗಳು ಯಾವುದೇ ಒತ್ತಡಗಳಿಗೆ ಮಣಿಯದೆ ಕೆಲಸ ನಿರ್ವಹಿಸಬೇಕು.”

-ವೆಂಕಟೇಶ್, ರೈತ, ಬಡಗಲಪುರ 

” ವರ್ಷದ ಕೊನೆಯ ಎರಡು ತಿಂಗಳಿನಿಂದ ಸಫಾರಿ ಬಂದ್ ಆಗಿರುವುದರಿಂದ ಕಾರಾಪುರ ಜಂಗಲ್ ರೆಸಾರ್ಟ್‌ಗೆ ಪ್ರವಾಸಿಗರ ಸಂಖ್ಯೆ ಬಹಳಷ್ಟು ಕಡಿಮೆ ಆಗಿದೆ. ೩೩ ಕಾಟೇಜ್‌ಗಳು ಪೈಕಿ ೨-೩ ಕಾಟೇಜ್‌ಗಳಿಗೆ ಮಾತ್ರ ಪ್ರವಾಸಿಗರು ಬರುತ್ತಿದ್ದಾರೆ. ಇದರಿಂದಾಗಿ ವರ್ಷದ ಕೊನೆಯ ಈ ತಿಂಗಳಿನಲ್ಲಿ ೩ ಕೋಟಿ ರೂ. ನಷ್ಟವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಮತ್ತು ನಿಗಮದ ಅಧ್ಯಕ್ಷರಿಗೆ ವಿಚಾರ ತಿಳಿಸಲಾಗಿದೆ. ಹೀಗೆಯೇ ಮುಂದುವರಿದರೆ ರಾಜ್ಯದ ಜೆಎಲ್‌ಆರ್ ಅನ್ನು ಬಂದ್ ಮಾಡುವ ಪರಿಸ್ಥಿತಿ ಎದುರಾಗಲಿದೆ.”

-ಕಾರ್ತಿಕ್, ವ್ಯವಸ್ಥಾಪಕ, ಕಾರಾಪುರ ಜೆಎಲ್‌ಆರ್ ರೆಸಾರ್ಟ್, ಕಬಿನಿ

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

11 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

11 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

12 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 hours ago