ಕೆ.ಬಿ.ರಮೇಶನಾಯಕ
ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆಗಾಗಿಪ್ರವಾಸಿಗರು ಅರಮನೆ ನಗರಿಯತ್ತ ಆಗಮಿಸುತ್ತಿದ್ದಾರೆ.
ಸಫಾರಿ ಬಂದ್ ಮಾಡಿದ್ದರಿಂದಾಗಿ ಬಂಡೀ ಪುರ, ನಾಗರಹೊಳೆ ವ್ಯಾಪ್ತಿಯ ಜೆಎಲ್ಆರ್, ರೆಸಾರ್ಟ್ಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸಿಗರು ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಲು ನಿರುತ್ಸಾಹ ತೋರಿದರೆ, ಸಾಂಸ್ಕೃತಿಕ ನಗರಿಯತ್ತ ಪ್ರವಾಸಿಗರ ದಂಡು ಆಗ ಮಿಸುತ್ತಿರುವು ದರಿಂದ ಮೈಸೂರಿನ ಬಹುತೇಕ ಹೋಟೆಲ್, ಲಾಡ್ಜ್ಗಳ ಕೊಠಡಿಗಳು ಮೂರ ದಿನಗಳ ಮಟ್ಟಿಗೆ ಬಹುತೇಕ ಭರ್ತಿಯಾಗಿವೆ.
ಕಳೆದ ಅಕ್ಟೋ ಬರ್-ನವೆಂಬರ್ ತಿಂಗಳಲ್ಲಿ ಹುಲಿ ದಾಳಿಗೆ ನಾಲ್ವರು ಬಲಿಯಾಗಿದ್ದ ಕಾರಣ ಬಂಡೀಪುರ, ನಾಗರ ಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಸರ್ಕಾರ ಸಫಾರಿ ಬಂದ್ ಮಾಡಿದೆ.
ಇದರಿಂದಾಗಿ ಹೊರ ರಾಜ್ಯ ಗಳ, ವಿದೇಶಿ ಪ್ರವಾಸಿಗರು ಮೈಸೂರಿಗೆ ಬಂದರೂ ಸ-ರಿ ಇಲ್ಲದ ಕಾರಣ ಬೇರೆ ಕಡೆಗೆ ಪಯಣ ಬೆಳೆಸುತ್ತಿದ್ದಾರೆ. ಆದರೆ, ಇದೀಗ ಹೊಸ ವರ್ಷದ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ನಡುವೆ ಪ್ರವಾಸಿಗರು ಒಂದೆರಡು ದಿನಗಳ ಮಟ್ಟಿಗೆ ಕೊಠಡಿಗಳನ್ನು ಕಾಯ್ದಿರಿಸುತ್ತಿರುವ ಪರಿಣಾಮ ಡಿಸೆಂಬರ್ ತಿಂಗಳಲ್ಲಿ ದೊಡ್ಡ ನಷ್ಟವಾಗಿದೆ. ಬಂಡೀಪುರ ಜೆಎಲ್ಆರ್ನಲ್ಲಿ ಅತಿ ಹೆಚ್ಚು ಸಫಾರಿ ವೀಕ್ಷಣೆಗೆ ಬರುವ ಕಾರಣ ಕಳೆದ ವರ್ಷ ಶೇ.೧೦೦ರಷ್ಟು ಭರ್ತಿಯಾಗಿದ್ದರೆ, ಈ ಬಾರಿ ಶೇ.೨೦ರಷ್ಟು ಕಾಯ್ದಿರಿಸಲಾಗಿದೆ. ಕಳೆದ ವರ್ಷ ಎಲ್ಲ ಖರ್ಚುಗಳೂ ಕಳೆದು ಒಂದೂವರೆ ಕೋಟಿ ರೂ.ಗಳಷ್ಟು ಆದಾಯ ಬಂದಿದ್ದರೆ, ಈ ಬಾರಿ ೧೦ ಲಕ್ಷ ರೂ. ದಾಟುವುದೂ ಅನುಮಾನವಾಗಿದೆ.
ಕಬಿನಿ ಜೆಎಲ್ಆರ್, ಕಿಂಗ್ ಸ್ಯಾಂಚುರಿಯಲ್ಲಿ ಡಿಸೆಂಬರ್ ೨೯, ೩೦ ಮತ್ತು ೩೧ಕ್ಕೆ ಮಾತ್ರ ಶೇ.೭೦ರಷ್ಟು ಬುಕ್ಕಿಂಗ್ ಆಗಿದ್ದು, ಜ.೧ರಂದು ಕೊಠಡಿಗಳು ಬುಕ್ಕಿಂಗ್ ಆಗಿಯೇ ಇಲ್ಲ. ಈ ತಿಂಗಳು ಪೂರ್ಣ ಬಿಸಿನೆಸ್ ಇಲ್ಲದ ಕಾರಣ ಅಂದಾಜು ೫ ಕೋಟಿ ರೂ. ನಷ್ಟವಾಗಿದೆ. ಹೊಸ ವರ್ಷಕ್ಕೆ ಕೊಠಡಿಗಳನ್ನು ಕಾಯ್ದಿರಿಸಿದ್ದ ವಿದೇಶಿ ಪ್ರವಾಸಿಗರು ಈಗಾಗಲೇ ರದ್ದುಪಡಿಸಿಕೊಂಡಿದ್ದಾರೆ. ಇಲ್ಲಿಗೆ ಬಹುತೇಕ ಎಲ್ಲ ವಿದೇಶಿಗರೂ ಸಫಾರಿಗಾಗಿ ಮಾತ್ರ ಬರುತ್ತಿದ್ದರು.
ಇದೀಗ ತಮಿಳುನಾಡು, ಮಧ್ಯ ಪ್ರದೇಶ ದತ್ತ ಮುಖ ಮಾಡಿದ್ದಾರೆ. ಈ ಬೆಳವಣಿಗೆಯು ಮುಂದಿನ ವರ್ಷದ ಮುಂಗಡ ಕಾಯ್ದಿರಿಸು ವಿಕೆಯ ಮೇಲೂ ಪರಿಣಾಮ ಬೀರಲಿದೆ ಎನ್ನುವ ಆತಂಕ ಅಧಿಕಾರಿಗಳಲ್ಲಿ ಮನೆ ಮಾಡಿದೆ. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸಫಾರಿ ಬಂದ್ ಮಾಡಿದ್ದರೂ ಜೆಎಲ್ಆರ್ನಲ್ಲಿ ಸ್ವಿಮ್ಮಿಂಗ್, ಬರ್ಡ್ವಾಚ್, ಸೈಕ್ಲಿಂಗ್ ವ್ಯವಸ್ಥೆ ಇರುವ ಕಾರಣಕ್ಕಾಗಿ ಅಲ್ಪ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಆದರೆ, ತಂಗುವುದಕ್ಕೆ ಒಲವು ತೋರದ ಕಾರಣ ಆದಾಯ ಬರುತ್ತಿಲ್ಲ. ಹೊಸ ವರ್ಷದ ಹಿಂದಿನ ಎರಡು ದಿನಗಳು ಮಾತ್ರ ಬುಕ್ಕಿಂಗ್ ಆಗಿವೆ. ನಂತರದಲ್ಲಿ ಬುಕ್ಕಿಂಗ್ ಮಾಡುವುದಕ್ಕೆ ಕರೆಯೇ ಬರುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಶೇ.೩೦ರಷ್ಟು ಆದಾಯ ಬರುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಕೊಠಡಿಗಳ ಬುಕ್ಕಿಂಗ್ಗೆ ಮುಗಿಬಿದ್ದ ಜನತೆ:
ಹೊಸ ವರ್ಷಾಚರಣೆಯನ್ನು ಮೈಸೂರಿನಲ್ಲೇ ಆಚರಿಸಬೇಕೆಂಬ ಆಸೆ ಹೊತ್ತವರು ಬುಕ್ಕಿಂಗ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ತಾರಾ ಹೋಟೆಲ್ಗಳು, ರೆಸಾರ್ಟ್ಗಳಲ್ಲಿ ಹೊಸ ವರ್ಷದ ಸಂಭ್ರಮ ಕಳೆಯಲು ಹಲವು ಬಗೆಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇದರಿಂದಾಗಿಯೇ ಬಹುತೇಕರು ದೂರವಾಣಿ, ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡುವ ಕೆಲಸ ಪ್ರಾರಂಭಿಸಿದ್ದಾರೆ. ಈಗಾಗಲೇ ನಗರದಲ್ಲಿರುವ ಹೋಟೆಲ್ಗಳಲ್ಲಿ ಮೂರು ದಿನಗಳ ಮಟ್ಟಿಗೆ ಶೇ.೯೦ರಷ್ಟು ಮುಂಗಡ ಬುಕ್ಕಿಂಗ್ ಆಗಿದೆ ಎಂದು ಖಾಸಗಿ ಹೋಟೆಲ್ ಮ್ಯಾನೇಜರ್ ಒಬ್ಬರು ಹೇಳಿದರು.
ವಾಹನಗಳ ದಟ್ಟಣೆ:
ರಾಜ್ಯಾದ್ಯಂತ ವಿವಿಧೆಡೆಯಿಂದ ಮೈಸೂರಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ನೆರೆಯ ರಾಜ್ಯಗಳಿಂದಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ನಗರದ ಎಲ್ಲೆಂದರಲ್ಲಿ ಪ್ರವಾಸಿಗರನ್ನು ಹೊತ್ತ ವಾಹನಗಳ ಓಡಾಟವು ಜೋರಾಗಿದೆ. ನಗರಕ್ಕೆ ಒಮ್ಮೆಲೇ ಆಗಮಿಸುತ್ತಿರುವ ನೂರಾರು ವಾಹನಗಳಿಂದ ಕೆಲವು ಕಡೆ ಸಂಚಾರ ದಟ್ಟಣೆ ಆಗುತ್ತಿದೆ. ಅರಮನೆ ಪೂರ್ವದ್ವಾರ (ದೊಡ್ಡಕೆರೆ ಮೈದಾನದ ಕಡೆ)ದ ರಸ್ತೆಯಲ್ಲಿ ವಾಹನಗಳ ದಟ್ಟಣೆಯಿಂದ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…