Andolana originals

ಸಫಾರಿ ನಿರ್ಬಂಧ: ಮೈಸೂರಿನತ್ತ ಪ್ರವಾಸಿಗರ ದಂಡು

ಕೆ.ಬಿ.ರಮೇಶನಾಯಕ

ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆಗಾಗಿಪ್ರವಾಸಿಗರು ಅರಮನೆ ನಗರಿಯತ್ತ ಆಗಮಿಸುತ್ತಿದ್ದಾರೆ.

ಸಫಾರಿ ಬಂದ್ ಮಾಡಿದ್ದರಿಂದಾಗಿ ಬಂಡೀ ಪುರ, ನಾಗರಹೊಳೆ ವ್ಯಾಪ್ತಿಯ ಜೆಎಲ್‌ಆರ್, ರೆಸಾರ್ಟ್‌ಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸಿಗರು ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಲು ನಿರುತ್ಸಾಹ ತೋರಿದರೆ, ಸಾಂಸ್ಕೃತಿಕ ನಗರಿಯತ್ತ ಪ್ರವಾಸಿಗರ ದಂಡು ಆಗ ಮಿಸುತ್ತಿರುವು ದರಿಂದ ಮೈಸೂರಿನ ಬಹುತೇಕ ಹೋಟೆಲ್‌, ಲಾಡ್ಜ್‌ಗಳ ಕೊಠಡಿಗಳು ಮೂರ ದಿನಗಳ ಮಟ್ಟಿಗೆ ಬಹುತೇಕ ಭರ್ತಿಯಾಗಿವೆ.

ಕಳೆದ ಅಕ್ಟೋ ಬರ್-ನವೆಂಬರ್ ತಿಂಗಳಲ್ಲಿ ಹುಲಿ ದಾಳಿಗೆ ನಾಲ್ವರು ಬಲಿಯಾಗಿದ್ದ ಕಾರಣ ಬಂಡೀಪುರ, ನಾಗರ ಹೊಳೆ ರಾಷ್ಟ್ರೀಯ ಉದ್ಯಾನವನ  ವ್ಯಾಪ್ತಿಯಲ್ಲಿ  ಸರ್ಕಾರ ಸಫಾರಿ ಬಂದ್ ಮಾಡಿದೆ.

ಇದರಿಂದಾಗಿ ಹೊರ ರಾಜ್ಯ ಗಳ, ವಿದೇಶಿ ಪ್ರವಾಸಿಗರು ಮೈಸೂರಿಗೆ ಬಂದರೂ ಸ-ರಿ ಇಲ್ಲದ ಕಾರಣ ಬೇರೆ ಕಡೆಗೆ ಪಯಣ ಬೆಳೆಸುತ್ತಿದ್ದಾರೆ. ಆದರೆ, ಇದೀಗ ಹೊಸ ವರ್ಷದ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ನಡುವೆ ಪ್ರವಾಸಿಗರು ಒಂದೆರಡು ದಿನಗಳ ಮಟ್ಟಿಗೆ ಕೊಠಡಿಗಳನ್ನು ಕಾಯ್ದಿರಿಸುತ್ತಿರುವ ಪರಿಣಾಮ ಡಿಸೆಂಬರ್ ತಿಂಗಳಲ್ಲಿ ದೊಡ್ಡ ನಷ್ಟವಾಗಿದೆ. ಬಂಡೀಪುರ ಜೆಎಲ್‌ಆರ್‌ನಲ್ಲಿ ಅತಿ ಹೆಚ್ಚು ಸಫಾರಿ ವೀಕ್ಷಣೆಗೆ ಬರುವ ಕಾರಣ ಕಳೆದ ವರ್ಷ ಶೇ.೧೦೦ರಷ್ಟು ಭರ್ತಿಯಾಗಿದ್ದರೆ, ಈ ಬಾರಿ ಶೇ.೨೦ರಷ್ಟು ಕಾಯ್ದಿರಿಸಲಾಗಿದೆ. ಕಳೆದ ವರ್ಷ ಎಲ್ಲ ಖರ್ಚುಗಳೂ ಕಳೆದು ಒಂದೂವರೆ ಕೋಟಿ ರೂ.ಗಳಷ್ಟು ಆದಾಯ ಬಂದಿದ್ದರೆ, ಈ ಬಾರಿ ೧೦ ಲಕ್ಷ ರೂ. ದಾಟುವುದೂ ಅನುಮಾನವಾಗಿದೆ.

ಕಬಿನಿ ಜೆಎಲ್‌ಆರ್, ಕಿಂಗ್ ಸ್ಯಾಂಚುರಿಯಲ್ಲಿ ಡಿಸೆಂಬರ್ ೨೯, ೩೦ ಮತ್ತು ೩೧ಕ್ಕೆ ಮಾತ್ರ ಶೇ.೭೦ರಷ್ಟು ಬುಕ್ಕಿಂಗ್ ಆಗಿದ್ದು, ಜ.೧ರಂದು ಕೊಠಡಿಗಳು ಬುಕ್ಕಿಂಗ್ ಆಗಿಯೇ ಇಲ್ಲ. ಈ ತಿಂಗಳು ಪೂರ್ಣ ಬಿಸಿನೆಸ್ ಇಲ್ಲದ ಕಾರಣ ಅಂದಾಜು ೫ ಕೋಟಿ ರೂ. ನಷ್ಟವಾಗಿದೆ. ಹೊಸ ವರ್ಷಕ್ಕೆ ಕೊಠಡಿಗಳನ್ನು ಕಾಯ್ದಿರಿಸಿದ್ದ ವಿದೇಶಿ ಪ್ರವಾಸಿಗರು ಈಗಾಗಲೇ ರದ್ದುಪಡಿಸಿಕೊಂಡಿದ್ದಾರೆ. ಇಲ್ಲಿಗೆ ಬಹುತೇಕ ಎಲ್ಲ ವಿದೇಶಿಗರೂ ಸಫಾರಿಗಾಗಿ ಮಾತ್ರ ಬರುತ್ತಿದ್ದರು.

ಇದೀಗ ತಮಿಳುನಾಡು, ಮಧ್ಯ ಪ್ರದೇಶ ದತ್ತ ಮುಖ ಮಾಡಿದ್ದಾರೆ. ಈ ಬೆಳವಣಿಗೆಯು ಮುಂದಿನ ವರ್ಷದ ಮುಂಗಡ ಕಾಯ್ದಿರಿಸು ವಿಕೆಯ ಮೇಲೂ ಪರಿಣಾಮ ಬೀರಲಿದೆ ಎನ್ನುವ ಆತಂಕ ಅಧಿಕಾರಿಗಳಲ್ಲಿ ಮನೆ ಮಾಡಿದೆ. ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಸಫಾರಿ ಬಂದ್ ಮಾಡಿದ್ದರೂ ಜೆಎಲ್‌ಆರ್‌ನಲ್ಲಿ ಸ್ವಿಮ್ಮಿಂಗ್, ಬರ್ಡ್‌ವಾಚ್, ಸೈಕ್ಲಿಂಗ್ ವ್ಯವಸ್ಥೆ ಇರುವ ಕಾರಣಕ್ಕಾಗಿ ಅಲ್ಪ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಆದರೆ, ತಂಗುವುದಕ್ಕೆ ಒಲವು ತೋರದ ಕಾರಣ ಆದಾಯ ಬರುತ್ತಿಲ್ಲ. ಹೊಸ ವರ್ಷದ ಹಿಂದಿನ ಎರಡು ದಿನಗಳು ಮಾತ್ರ ಬುಕ್ಕಿಂಗ್ ಆಗಿವೆ. ನಂತರದಲ್ಲಿ ಬುಕ್ಕಿಂಗ್ ಮಾಡುವುದಕ್ಕೆ ಕರೆಯೇ ಬರುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಶೇ.೩೦ರಷ್ಟು ಆದಾಯ ಬರುವುದಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಕೊಠಡಿಗಳ ಬುಕ್ಕಿಂಗ್‌ಗೆ ಮುಗಿಬಿದ್ದ ಜನತೆ: 

ಹೊಸ ವರ್ಷಾಚರಣೆಯನ್ನು ಮೈಸೂರಿನಲ್ಲೇ ಆಚರಿಸಬೇಕೆಂಬ ಆಸೆ ಹೊತ್ತವರು ಬುಕ್ಕಿಂಗ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ತಾರಾ ಹೋಟೆಲ್‌ಗಳು, ರೆಸಾರ್ಟ್‌ಗಳಲ್ಲಿ ಹೊಸ ವರ್ಷದ ಸಂಭ್ರಮ ಕಳೆಯಲು ಹಲವು ಬಗೆಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇದರಿಂದಾಗಿಯೇ ಬಹುತೇಕರು ದೂರವಾಣಿ, ಆನ್‌ಲೈನ್ ಮೂಲಕ ಬುಕ್ಕಿಂಗ್ ಮಾಡುವ ಕೆಲಸ ಪ್ರಾರಂಭಿಸಿದ್ದಾರೆ. ಈಗಾಗಲೇ ನಗರದಲ್ಲಿರುವ ಹೋಟೆಲ್‌ಗಳಲ್ಲಿ ಮೂರು ದಿನಗಳ ಮಟ್ಟಿಗೆ ಶೇ.೯೦ರಷ್ಟು ಮುಂಗಡ ಬುಕ್ಕಿಂಗ್ ಆಗಿದೆ ಎಂದು ಖಾಸಗಿ ಹೋಟೆಲ್ ಮ್ಯಾನೇಜರ್ ಒಬ್ಬರು ಹೇಳಿದರು.

ವಾಹನಗಳ ದಟ್ಟಣೆ: 

ರಾಜ್ಯಾದ್ಯಂತ ವಿವಿಧೆಡೆಯಿಂದ ಮೈಸೂರಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ನೆರೆಯ ರಾಜ್ಯಗಳಿಂದಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ನಗರದ ಎಲ್ಲೆಂದರಲ್ಲಿ ಪ್ರವಾಸಿಗರನ್ನು ಹೊತ್ತ ವಾಹನಗಳ ಓಡಾಟವು ಜೋರಾಗಿದೆ. ನಗರಕ್ಕೆ ಒಮ್ಮೆಲೇ ಆಗಮಿಸುತ್ತಿರುವ ನೂರಾರು ವಾಹನಗಳಿಂದ ಕೆಲವು ಕಡೆ ಸಂಚಾರ ದಟ್ಟಣೆ ಆಗುತ್ತಿದೆ. ಅರಮನೆ ಪೂರ್ವದ್ವಾರ (ದೊಡ್ಡಕೆರೆ ಮೈದಾನದ ಕಡೆ)ದ ರಸ್ತೆಯಲ್ಲಿ ವಾಹನಗಳ ದಟ್ಟಣೆಯಿಂದ ವಾಹನ ಸಂಚಾರ ಅಸ್ತವ್ಯಸ್ತವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

12 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

12 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

23 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

23 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

23 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

23 hours ago