Andolana originals

ಕಾವೇರಿ ನೀರಾವರಿ ನಿಗಮದಲ್ಲಿ ಸಂಬಳದ ಸಂಕಷ್ಟ

ಶ್ರೀಧರ್ ಆರ್ ಭಟ್

೧,೫೦೦ ಕ್ಕೂ ಹೆಚ್ಚು ಸಿಬ್ಬಂದಿಗೆ ೩ ತಿಂಗಳಿಂದ ವೇತನವಿಲ್ಲ 

ಸಂಸಾರ ನಿರ್ವಹಣೆಯ ದಾರಿ ತೋರದೆ ಕಂಗಾಲು

ರಾಜ್ಯ ಸರ್ಕಾರದತ್ತ ಚಾತಕ ಪಕ್ಷಿಯಂತೆ ನೋಡುತ್ತಿರುವ ಸಿಬ್ಬಂದಿ

ಮೈಸೂರು: ಸಂಬಳಕ್ಕಾಗಿ ಕಾಯುತ್ತಿರುವ ಕಾವೇರಿ ನೀರಾವರಿ ನಿಗಮದ ೧,೫೦೦ಕ್ಕೂ ಹೆಚ್ಚು ಸಿಬ್ಬಂದಿ… ಕಟ್ಟಡ ದುರಸ್ತಿಗೆ ಸುಣ್ಣ ಬಣ್ಣಕ್ಕೆ ಹಣವಿದೆ, ಆದರೆ ಸಿಬ್ಬಂದಿ ಸಂಬಳಕ್ಕೆ ಮಾತ್ರ ದುಡ್ಡಿಲ್ಲ! ರೈತರ ಜಮೀನುಗಳಿಗೆ ನೀರು ಹರಿಸುವ ಇವರಿಗೆ ವೇತನ ಇಲ್ಲದೆ ಗುಟುಕು ನೀರು ಕುಡಿಯಬೇಕಾದ ದುಸ್ಥಿತಿ ಎದುರಾಗಿದೆ.

ರಾಜ್ಯದ ಅತ್ಯಂತ ಪ್ರಮುಖ ನೀರಾವರಿ ನಿಗಮಗಳಲ್ಲಿ ಒಂದಾಗಿರುವ ಹತ್ತು ಜಿಲ್ಲೆಗಳ ವ್ಯಾಪ್ತಿಯ ಕಾವೇರಿ ನೀರಾವರಿ ನಿಗಮದ ಶೋಚನೀಯ ಸ್ಥಿತಿ ಇದು.

ಹಳೇ ಮೈಸೂರು ಭಾಗದ ಹತ್ತು ಜಿಲ್ಲೆಗಳನ್ನೊಳಗೊಂಡ ಕಾವೇರಿ ನೀರಾವರಿ ನಿಗಮದ ಅಧಿಕಾರಿ ಗಳು, ಸಾವಿರಾರು ಸಿಬ್ಬಂದಿ ತಿಂಗಳ ಸಂಬಳ ಇಂದು ಬರುತ್ತದೆ… ನಾಳೆ ಬರುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಲೇ ಇದ್ದಾರೆ.

ಮಾರ್ಚ್ ತಿಂಗಳಲ್ಲಿ ದಿನ ಕಳೆದುಹೋದರೂ ಅವರ ಸಂಬಳ ಇನ್ನೂ ಬಂದೇ ಇಲ್ಲ. ಭತ್ತ ಬೆಳೆಯಲು ಅನ್ನದಾತನ ಭೂಮಿಗೆ ನಾಲೆಗಳಿಂದ ನೀರು ಹರಿಸುವ ಜವಾಬ್ದಾರಿಯುತ ಕಾರ್ಯದಲ್ಲಿ ತೊಡಗಿಕೊಂಡಿರುವ ನಿಗಮದ ಪ್ರಧಾನ ನಿರ್ದೇಶಕರಿಂದ ಹಿಡಿದು ಸ್ವಚ್ಛತಾ ಸಿಬ್ಬಂದಿಗಳವರೆಗೂ ಕಳೆದ ಮೂರು ತಿಂಗಳುಗಳಿಂದಲೂ ಸಂಬಳ ಬಂದಿಲ್ಲ. ಸರ್ಕಾರಿ ಕೆಲಸ ಆಗಿರುವುದರಿಂದ ತಿಂಗಳಾಯಿತು ಎಂದರೆ ಸಂಬಳವಂತೂ ಗ್ಯಾರಂಟಿ ಎಂದು ಆರಾಮವಾಗಿದ್ದ ನಿಗಮದ ಅಧಿಕಾರಿಗಳು ಸಂಬಳ ಬಾರದೆ ಕಂಗಾಲಾಗಿದ್ದಾರೆ. ದವಸ ಧಾನ್ಯ ಖರೀದಿಸಿರುವ ಅಂಗಡಿಯವರು, ಹಾಲಿನವರು, ಮನೆ ಕೆಲಸದವರು, ತರಕಾರಿಯವರಿಗೆ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಬಾಕಿ ಅಥವಾ ವೇತನ ಪಾವತಿ ಮಾಡುತ್ತಿದ್ದವರು, ಈಗ ಅವರೆಲ್ಲರಿಗೂ ಹಣ ಕೊಡಲು ಆಗದೆ ಪರದಾಡುತ್ತಿದ್ದಾರೆ.

ಇದೇ ಮೊದಲ ಬಾರಿಗೆ ಸಂಬಳ ತಡವಾಗಿದೆ. ಮುಂದಿನ ತಿಂಗಳು ಪಾವತಿ ಗ್ಯಾರಂಟಿ ಎಂದು ಜನವರಿ, ಫೆಬ್ರವರಿಯಲ್ಲಿ ಪ್ರಯಾಸಪಟ್ಟು ಸಮಜಾಯಿಷಿ ನೀಡಿದ ಅವರನ್ನು ಒಪ್ಪಿಸಿ ನಿಟ್ಟುಸಿರುಬಿಟ್ಟಿದ್ದರಂತೆ. ಆದರೆ, ಈ ತಿಂಗಳು ಕೂಡ ಪಗಾರ ಬಾರದೆ ಕಂಗಾಲಾಗಿದ್ದಾರೆ.

ನಮ್ಮ ಮೇಲಾಧಿಕಾರಿಗಳು ಹೇಗೋ ಜೀವನ ನಡೆಸುತ್ತಾರೆ. ಆದರೆ ಸಂಸಾರ ನಿರ್ವಹಣೆಯನ್ನು ಸರಿದೂಗಿಸಲು ತಿಂಗಳ ಸಂಬಳವನ್ನೇ ನಂಬಿಕೊಂಡಿರುವ ನಮ್ಮ ಪಾಡೇನು? ಎಂಬುದಾಗಿ ಸಿಬ್ಬಂದಿ ಅಲವತ್ತುಕೊಳ್ಳುತ್ತಾರೆ.

ನಿಗಮದಲ್ಲಿ ಇದೇ ಮೊದಲ ಬಾರಿಗೆ ಸಂಬಳ ಇಷ್ಟು ತಡವಾಗುತ್ತಿದೆ. ಆದರೆ, ನಮ್ಮ ಗೋಳು ಕೇಳುವವರಾರು ಎಂದು ಸಿಬ್ಬಂದಿ ಪರಿತಪಿಸುತ್ತಿದ್ದಾರೆ. ನಮ್ಮ ನೋವಿನ ಸುದ್ದಿಯನ್ನು ಪ್ರಕಟಿಸಿ, ಅದನ್ನು ನೋಡಿಯಾದರೂ ರಾಜ್ಯ ಸರ್ಕಾರ ನಮಗೆ ಸಂಬಳವನ್ನು ನೀಡಲಿ ಎಂದು ಆಶಿಸುವ ಸಿಬ್ಬಂದಿ, ಆದರೆ ನಮ್ಮ ಹೆಸರನ್ನು ಮಾತ್ರ ಪ್ರಕಟಿಸಬೇಡಿ ಎನ್ನುತ್ತಾರೆ.

ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಮಂಡ್ಯ, ರಾಮನಗರ, ಕನಕಪುರ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹತ್ತು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ಕಾರ್ಯ ನಿರ್ವಹಿಸಬೇಕು. ನೀರಾವರಿ ನಿಗಮದಲ್ಲಿ ಹಾಲಿ ಇರುವ ೧,೫೪೨ ಜನರಿಗೆ ಮಾಸಿಕ ಸಂಬಳದ ಮೊತ್ತ ಅಂದಾಜು ೧೫ ಕೋಟಿ ರೂ.ಗೂ ಹೆಚ್ಚು ಬಿಡುಗಡೆಯಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

13 mins ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

34 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

2 hours ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

3 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

5 hours ago