Andolana originals

ಪಿಎಂಶ್ರೀ ಯೋಜನೆಗೆ ಸಾಲಿಗ್ರಾಮ ಶಾಲೆ ಆಯ್ಕೆ

ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣ

  

ಸಾಲಿಗ್ರಾಮ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪಿಎಂಶ್ರೀ ಯೋಜನೆಗೆ ಆಯ್ಕೆಯಾಗುವ ಮೂಲಕ ಶಾಲೆಯ ಉನ್ನತೀಕರಣ ಹಾಗೂ ಮಕ್ಕಳ ಕಲಿಕೆಗೆ ಉತ್ತಮವಾದ ಪೂರಕ ವಾತಾವರಣ ನಿರ್ಮಾಣಕ್ಕೆ ಅನುಕೂಲವಾದಂತಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರ ಅದರೊಂದಿಗೆ ಪ್ರಾಥಮಿಕ ಹಂತದ ಶಿಕ್ಷಣದಲ್ಲಿ ಎಲ್ಲರ ಒಳಗೊಳ್ಳುವಿಕೆ, ಕೌಶಲ ಮತ್ತು ನಾಯಕತ್ವ ಗುಣಗಳನ್ನು ಮಕ್ಕಳಲ್ಲಿ ತುಂಬುವ ನಿಟ್ಟಿನಲ್ಲಿ ಪಿಎಂಶ್ರೀ ಯೋಜನೆಯನ್ನು (ಪ್ರೈಮ್ ಮಿನಿಸ್ಟರ್ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ) 2022 2023ರಲ್ಲಿ ಜಾರಿಗೊಳಿಸಿದೆ. 2026-27ನೇ ಸಾಲಿನವರೆಗೆ ಒಟ್ಟು ಐದು ವರ್ಷಗಳ ಕಾಲ ಈ ಯೋಜನೆಯು ಜಾರಿಯಲ್ಲಿರಲಿದೆ. ಶಾಲೆಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಇದಾಗಿದೆ.

ಈ ಯೋಜನೆಗೆ ಮೊದಲ ಹಂತದಲ್ಲಿ ಸಾಲಿಗ್ರಾಮ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದ್ದರೆ, ಎರಡನೇ ಹಂತದಲ್ಲಿ ಚುಂಚನಕಟ್ಟೆ ಹೋಬಳಿಗೆ ಸೇರಿದ ಹೊಸಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.

ಇದರೊಂದಿಗೆ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಈ ಯೋಜನೆಗೆ ಆಯ್ಕೆಯಾಗಿರುವ ಶಾಲೆಗಳು ಎಂಬ ಹೆಗ್ಗಳಿಕೆಗೆ ಇವು ಪಾತ್ರವಾಗಿವೆ.

ಮೂಲಸೌಕರ್ಯ, ತಂತ್ರಜ್ಞಾನ, ಹೊಸ ಮಾದರಿಯ ಬೋಧನಾ ಕಲಿಕೆಯೊಂದಿಗೆ ಪಿಎಂಶ್ರೀ ಯೋಜಿತ ಶಾಲೆಗಳು ಬಹು ಮುಖ್ಯ ವಾದ ಕೌಶಲಗಳೊಂದಿಗೆ ವಿದ್ಯಾರ್ಥಿಗಳನ್ನು ಪರಿಪೂರ್ಣ ವ್ಯಕ್ತಿಗಳನ್ನಾಗಿ ರೂಪಿಸುವ ಮತ್ತು ಪೋಷಿಸುವ ಉದ್ದೇಶವನ್ನು ಹೊಂದಿವೆ.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2023-24ನೇ ಸಾಲಿನಲ್ಲಿ ಒಟ್ಟು 139 ಮಕ್ಕಳು ದಾಖಲಾಗಿದ್ದರು. 2024-25ನೇ ಸಾಲಿನಲ್ಲಿ ಪಿಎಂಶ್ರೀ ಯೋಜನೆಗೆ ಶಾಲೆಯು ಸೇರಿದ ಪರಿಣಾಮ ಪೂರ್ವ ಪ್ರಾಥಮಿಕ ತರಗತಿಯಿಂದ 7ನೇ ತರಗತಿಯವರೆಗೆ ಒಟ್ಟು 212 ಮಕ್ಕಳು
ದಾಖಲಾಗುವ ಮೂಲಕ ಮಕ್ಕಳ ದಾಖಲಾತಿಯಲ್ಲೂ ಏರಿಕೆಯನ್ನು ಕಂಡಿದೆ. ಶಾಲೆಯಲ್ಲಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕಂಪ್ಯೂಟರ್ ಕಲಿಕೆ, ಯೋಗ, ನೃತ್ಯ, ಕರಾಟೆ ತರಗತಿಗಳನ್ನು ನಡೆಸಲಾಗುತ್ತಿದೆ.

ಈ ಯೋಜನೆಯಿಂದ ಶಾಲೆಗೆ ಮೊದಲ ಹಂತದಲ್ಲಿ 8.26 ಲಕ್ಷ ರೂ. ಅನುದಾನ ಬಂದಿದೆ. ಇದರಿಂದ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಿ ಇಲ್ಲಿಗೆ ಇಬ್ಬರು ಶಿಕ್ಷಕರು, ಒಬ್ಬರು ಸಹಾಯಕರು ಹಾಗೂ ಒಬ್ಬರು ದೈಹಿಕ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಶಾಲೆಗೆ ಶೈಕ್ಷಣಿಕ, ಪ್ರಯೋಗಾಲಯ ಹಾಗೂ ಕಚೇರಿ ಪರಿಕರಗಳು, ಭೌತಿಕ ವಸ್ತುಗಳು, ಶಾಲಾ ಕೊಠಡಿಗಳಿಗೆ ಬಣ್ಣದ ಲೇಪನ, ಡಿಜಿಟಲ್ ಲೈಬ್ರರಿಗಾಗಿ ಕಂಪ್ಯೂಟರ್‌ಗಳು, ಯುಪಿಎಸ್‌ ಅಳವಡಿಸಿದ್ದು ಜೊತೆಗೆ ಶಾಲೆಯಲ್ಲಿ ರಾಷ್ಟ್ರ ನಾಯಕರು, ಕವಿಗಳು, ದಾರ್ಶನಿಕರು, ಮಹನೀಯರು ಸೇರಿದಂತೆ ವಿವಿಧ ದೇವರ ಭಾವಚಿತ್ರಗಳನ್ನು ಶಾಲೆಯಲ್ಲಿ ಅಳವಡಿಸಲಾಗಿದೆ.
ಶಾಲಾ ಮುಂಭಾಗದ ಆವರಣವನ್ನು ಸಮತಟ್ಟು ಮಾಡುವ ಕೆಲಸವು ಶೀಘ್ರದಲ್ಲಿ ನಡೆಯಲಿದ್ದು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದಕ್ಕೆ ಹೆಚ್ಚಿನ ಅನುಕೂಲವಾಗಲಿದೆ.

ಮುಂದಿನ ದಿನಗಳಲ್ಲಿ ಈ ಯೋಜನೆಯಿಂದ ಪಿಎಂಶ್ರೀ ಯೋಜನೆಯು ಶಾಲೆಗಳನ್ನು ಅಭಿವೃದ್ಧಿಪಡಿಸುವ
ಯೋಜನೆಯಾಗಿದೆ. ಶಾಲೆಗೆ ಹೈಟೆಕ್ ಶೌಚಾಲಯ ಮತ್ತು ಕುಡಿಯುವ ನೀರಿನ ಉತ್ತಮ ಸೇವಾ ಸೌಲಭ್ಯಗಳು ದೊರೆಯಲಿವೆ.

ಇಂತಹ ಶಾಲೆಯಲ್ಲಿ ಮುಖ್ಯಶಿಕ್ಷಕ ಹುದ್ದೆ ಖಾಲಿಯಿದೆ. ಈಗಿರುವ ಮಕ್ಕಳಿಗೆ ಉತ್ತಮ ಪಾಠಪ್ರವಚನಗಳನ್ನು ಮಾಡಲು ಮತ್ತೊಬ್ಬ ಶಿಕ್ಷಕರ ಅವಶ್ಯಕತೆಯಿದೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

9 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

10 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

11 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

12 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

12 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

13 hours ago