Andolana originals

ಕೋಟೆ ಕ್ಷೇತ್ರದ ಜತೆಗಿದೆ ಸಂದೇಶ್ ನಾಗರಾಜ್ ನಿಕಟ ಒಡನಾಟ

ಮಂಜು ಕೋಟೆ

ಭಾನುವಾರ ಮೈಸೂರಿನಲ್ಲಿ ನಡೆಯಲಿರುವ ಹುಟ್ಟುಹಬ್ಬ ಸಮಾರಂಭದಲ್ಲಿ ಕೋಟೆಯಿಂದ ಸಾವಿರಾರು ಜನರು ಭಾಗಿ

ಎಚ್.ಡಿ.ಕೋಟೆ: ಮೈಸೂರಿನಲ್ಲಿ ಆ.೩೧ರಂದು ನಡೆಯಲಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಂದೇಶ್ ನಾಗರಾಜ್ ಅವರ ೮೦ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ತಾಲ್ಲೂಕಿನಿಂದ ಸಾವಿರಾರು ಜನರು ಭಾಗವಹಿಸಲಿದ್ದಾರೆ.

ಸಂದೇಶ್ ನಾಗರಾಜು ಅವರು ಎಚ್.ಡಿ.ಕೋಟೆ ಕ್ಷೇತ್ರದ ಜತೆ ಉತ್ತಮ ಒಡನಾಟ ಹೊಂದಿರುವುದರಿಂದ ಮುಖಂಡರು ಮತ್ತು ಕಾರ್ಯಕರ್ತರು ಜನತೆಗೆ ಚಿರಪರಿಚಿತರಾಗಿದ್ದಾರೆ. ೧೨ ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿದ್ದಾಗ ಸಂದೇಶ್ ನಾಗರಾಜು ಅವರು ಅತಿ ಹೆಚ್ಚಿನ ಅನುದಾನ ತಂದಿದ್ದಲ್ಲದೆ, ಅಽವೇಶನದಲ್ಲಿ ಕ್ಷೇತ್ರದ ಬಗ್ಗೆ ಚರ್ಚಿಸಿ ತಾಲ್ಲೂಕಿನ ಅಭಿವೃದ್ಧಿಗೆ ಮತ್ತು ಹೊಸ ಯೋಜನೆಗಳನ್ನು ತರಲು ಶ್ರಮಿಸಿದ್ದರು. ಅಲ್ಲದೆ ನೋಡಲ್ ತಾಲ್ಲೂಕನ್ನಾಗಿ ಪಡೆದು ವಿಧಾನ ಪರಿಷತ್ ಸದಸ್ಯನಾಗಿ ತಾಲ್ಲೂಕು ಮತ್ತು ಜನಸಾಮಾನ್ಯರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಿದ್ದರು.

೧೫ ವರ್ಷಗಳ ಹಿಂದೆ ತಾಲ್ಲೂಕಿನಲ್ಲಿ ಜಾ.ದಳ ಪಕ್ಷ ಸಂಘಟನೆಯಲ್ಲಿ ಸಂಪೂರ್ಣ ವಿಫಲವಾಗಿದ್ದ ಸಂದರ್ಭದಲ್ಲಿ ಪಕ್ಷದ ಕಚೇರಿ ಪ್ರಾರಂಭಕ್ಕೆ ಧನ ಸಹಾಯ ಮಾಡಿ, ಕಚೇರಿ ತೆರೆದು, ಕಾರ್ಯಕರ್ತರು ಮುಖಂಡರಲ್ಲಿ ಹುಮ್ಮಸ್ಸು ಮೂಡಿಸಿದ್ದರು. ನಂತರ ಜಾ.ದಳ ಇಲ್ಲಿ ಬಲಿಷ್ಠವಾಗಿ, ಎಲ್ಲರ ಪರಿಶ್ರಮದಿಂದ ಶಾಸಕರಾಗಿ ಚಿಕ್ಕಮಾದುರವರು ಆಯ್ಕೆಯಾಗಿ ಕ್ಷೇತ್ರವನ್ನು ಜಾ.ದಳದ ಭದ್ರಕೋಟೆಯನ್ನಾಗಿ ನಿರ್ಮಾಣ ಮಾಡಲು ಸಾಧ್ಯವಾಯಿತು. ಶಾಸಕರಾಗಿ ಚಿಕ್ಕಮಾದು, ವಿಧಾನಪರಿಷತ್ ಸದಸ್ಯರಾಗಿ ಸಂದೇಶ್ ನಾಗರಾಜು ಅವರು ತಾಲ್ಲೂಕಿನ ಅಭಿವೃದ್ಧಿ ಕೆಲಸಗಳಿಗೆ ಜೊತೆಗೂಡಿ ಕೆಲಸ ನಿರ್ವಹಿಸಿದರು.

ತದನಂತರ ನಡೆದ ರಾಜಕೀಯ ಬದಲಾವಣೆಯಲ್ಲಿ ಸಂದೇಶ್ ನಾಗರಾಜು ಅವರು ಜಾ.ದಳವನ್ನು ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವರಿಷ್ಠರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

೨ ವರ್ಷಗಳ ಹಿಂದೆ ನಡೆದ ಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಎರಡನೇ ಬಾರಿ ಭರ್ಜರಿ ಗೆಲುವು ಸಾಧಿಸುವಲ್ಲಿ ಸಂದೇಶ್ ನಾಗರಾಜು ಮತ್ತು ಅವರ ಪುತ್ರ ಉದ್ಯಮಿ ಸಂದೇಶ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ತಾಲ್ಲೂಕಿನಾದ್ಯಂತ ಪ್ರವಾಸ ಕೈಗೊಂಡು, ಹಿತೈಷಿಗಳು, ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದರು. ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ಕಬಿನಿ ಎಡ್ಜ್ ಎಂಬ ರೆಸಾರ್ಟ್ ನಿರ್ಮಾಣ ಮಾಡಿ, ಅನೇಕ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆ.೩೧ರಂದು ಭಾನುವಾರ ಮೈಸೂರಿನಲ್ಲಿ ವಸ್ತು ಪ್ರದರ್ಶನ ಪ್ರಾಧಿಕಾರದ ಮೈದಾನದಲ್ಲಿ ನಡೆಯಲಿರುವ ಅವರ ೮೦ನೇ ವರ್ಷದ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವ ಹಿಸಿ ಅವರಿಗೆ ಶುಭ ಹಾರೈಸಲು ಪಕ್ಷಾತೀತವಾಗಿ ಜಾತ್ಯತೀತವಾಗಿ ಜನಸಾಮಾನ್ಯರು ಮುಂದಾಗಿ ದ್ದಾರೆ.

೨೦ ವರ್ಷಗಳ ಒಡನಾಟ:  ೨೦ ವರ್ಷಗಳಿಂದ ತಾಲ್ಲೂಕಿನ ಜತೆಗೆ ನಿಕಟವಾದ ಒಡನಾಟವನ್ನು ಇಟ್ಟುಕೊಂಡು ಅನೇಕರಿಗೆ ರಾಜಕೀಯ ಮಾರ್ಗದರ್ಶಕರಾಗಿ, ಹಿರಿಯ ರಾಜಕೀಯ ಮುಖಂಡರಾಗಿ,ಜನಪ್ರತಿನಿಧಿಯಾಗಿ, ಉದ್ಯಮಿಯಾಗಿ ಸಂದೇಶ್ ನಾಗರಾಜು ಅವರು ಗುರುತಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

6 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

7 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

8 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

8 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

9 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

10 hours ago