Andolana originals

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ

ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ.

ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು ಮುಚ್ಚಿ ರುವುದರಿಂದ ಇದೀಗ ಕಟ್ಟಡ ನಿರುಪಯುಕ್ತವಾಗಿದ್ದು, ಪಾಳು ಕೊಂಪೆಯಂತಾಗಿದೆ. ಕಿಟಕಿ ಬಾಗಿಲು ಇಲ್ಲದೆ ಅನಾಥವಾಗಿದ್ದು, ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಶಾಲಾ ಕೊಠಡಿಗಳಲ್ಲಿ ಬಿಯರ್ ಬಾಟಲಿಗಳು ಹಾಗೂ ಇನ್ನಿತರ ಮದ್ಯದ ಬಾಟಲಿಗಳು, ಪೌಚ್‌ಗಳು ಕಣ್ಣಿಗೆ ರಾಚುತ್ತಿವೆ.

ಅಲ್ಲದೇ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುವ ಎಲ್ಲ ಲಕ್ಷಣಗಳೂ ಕಾಣಿಸುತ್ತಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಯ ಕೊಠಡಿಯಲ್ಲಿ ಅನೇಕ ಮದ್ಯದ ಬಾಟಲಿಗಳು ಬಿದ್ದಿರುವುದನ್ನು ಗಮನಿಸಿದರೆ ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಅಳುಕಿಲ್ಲದೆ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಿರುಪಯುಕ್ತವಾಗಿರುವ ಶಾಲೆಯ ಕೊಠಡಿಯಲ್ಲಿ ಒಂದು ಒಳ್ಳೆಯ ಗ್ರಂಥಾಲಯವನ್ನು ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ನಮ್ಮ ಮನವಿಯನ್ನು ಪುರಸ್ಕರಿಸಿ ಇದೇ ಕೊಠಡಿಯಲ್ಲಿ ಗ್ರಂಥಾಲಯ ತೆರೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಮುಚ್ಚಿರುವ ಸರ್ಕಾರಿ ಶಾಲೆಗಳು: 

ಶಿರಗೋಡು ಶಾಲೆಯನ್ನು ಮುಚ್ಚಿ ಸುಮಾರು ೭ ವರ್ಷಗಳೇ ಕಳೆದಿವೆ. ೨೦೧೭-೨೦೧೮ರ ಸಾಲಿನಲ್ಲೇ ಮಕ್ಕಳಿಲ್ಲ ಎಂಬ ಕಾರಣಕ್ಕೆ ಶಾಲೆಯನ್ನು ಮುಚ್ಚಲಾಗಿತ್ತು. ಇದೀಗ ಹನೂರು ತಾಲ್ಲೂಕಿನಲ್ಲಿ ಶಿರಗೋಡು ಸೇರಿದಂತೆ ಸುಂಟರದೊಡ್ಡಿ, ದೊಡ್ಡ ಮಾಲಾಪುರ, ಚಿಕ್ಕಾಲತ್ತೂರು, ಇನ್ನಿತರ ಶಾಲೆಗಳು ಸಹ ಮುಚ್ಚುವ ಹಂತಕ್ಕೆ ಬಂದಿವೆ.

ವಿಷಯ ತಿಳಿದ ತಕ್ಷಣ ಸ್ವಚ್ಛತೆ: 

ಪತ್ರಿಕಾ ಮಾಧ್ಯಮದವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಚರ್ಚೆ ನಡೆಸಿದ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಶಾಲೆಯ ಒಳಗಡೆ ಇದ್ದಂತಹ ಮದ್ಯದ ಬಾಟಲಿಗಳನ್ನು ತೆರವುಗೊಳಿಸಿ, ಶಾಲೆಯನ್ನು ಸ್ವಚ್ಛಗೊಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

31 mins ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

47 mins ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

1 hour ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

2 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

3 hours ago