Andolana originals

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ

ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ.

ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು ಮುಚ್ಚಿ ರುವುದರಿಂದ ಇದೀಗ ಕಟ್ಟಡ ನಿರುಪಯುಕ್ತವಾಗಿದ್ದು, ಪಾಳು ಕೊಂಪೆಯಂತಾಗಿದೆ. ಕಿಟಕಿ ಬಾಗಿಲು ಇಲ್ಲದೆ ಅನಾಥವಾಗಿದ್ದು, ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಶಾಲಾ ಕೊಠಡಿಗಳಲ್ಲಿ ಬಿಯರ್ ಬಾಟಲಿಗಳು ಹಾಗೂ ಇನ್ನಿತರ ಮದ್ಯದ ಬಾಟಲಿಗಳು, ಪೌಚ್‌ಗಳು ಕಣ್ಣಿಗೆ ರಾಚುತ್ತಿವೆ.

ಅಲ್ಲದೇ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುವ ಎಲ್ಲ ಲಕ್ಷಣಗಳೂ ಕಾಣಿಸುತ್ತಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಯ ಕೊಠಡಿಯಲ್ಲಿ ಅನೇಕ ಮದ್ಯದ ಬಾಟಲಿಗಳು ಬಿದ್ದಿರುವುದನ್ನು ಗಮನಿಸಿದರೆ ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಅಳುಕಿಲ್ಲದೆ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಿರುಪಯುಕ್ತವಾಗಿರುವ ಶಾಲೆಯ ಕೊಠಡಿಯಲ್ಲಿ ಒಂದು ಒಳ್ಳೆಯ ಗ್ರಂಥಾಲಯವನ್ನು ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ನಮ್ಮ ಮನವಿಯನ್ನು ಪುರಸ್ಕರಿಸಿ ಇದೇ ಕೊಠಡಿಯಲ್ಲಿ ಗ್ರಂಥಾಲಯ ತೆರೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಮುಚ್ಚಿರುವ ಸರ್ಕಾರಿ ಶಾಲೆಗಳು: 

ಶಿರಗೋಡು ಶಾಲೆಯನ್ನು ಮುಚ್ಚಿ ಸುಮಾರು ೭ ವರ್ಷಗಳೇ ಕಳೆದಿವೆ. ೨೦೧೭-೨೦೧೮ರ ಸಾಲಿನಲ್ಲೇ ಮಕ್ಕಳಿಲ್ಲ ಎಂಬ ಕಾರಣಕ್ಕೆ ಶಾಲೆಯನ್ನು ಮುಚ್ಚಲಾಗಿತ್ತು. ಇದೀಗ ಹನೂರು ತಾಲ್ಲೂಕಿನಲ್ಲಿ ಶಿರಗೋಡು ಸೇರಿದಂತೆ ಸುಂಟರದೊಡ್ಡಿ, ದೊಡ್ಡ ಮಾಲಾಪುರ, ಚಿಕ್ಕಾಲತ್ತೂರು, ಇನ್ನಿತರ ಶಾಲೆಗಳು ಸಹ ಮುಚ್ಚುವ ಹಂತಕ್ಕೆ ಬಂದಿವೆ.

ವಿಷಯ ತಿಳಿದ ತಕ್ಷಣ ಸ್ವಚ್ಛತೆ: 

ಪತ್ರಿಕಾ ಮಾಧ್ಯಮದವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಚರ್ಚೆ ನಡೆಸಿದ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಶಾಲೆಯ ಒಳಗಡೆ ಇದ್ದಂತಹ ಮದ್ಯದ ಬಾಟಲಿಗಳನ್ನು ತೆರವುಗೊಳಿಸಿ, ಶಾಲೆಯನ್ನು ಸ್ವಚ್ಛಗೊಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

5 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

6 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

7 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

9 hours ago