Andolana originals

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ

ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ.

ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು ಮುಚ್ಚಿ ರುವುದರಿಂದ ಇದೀಗ ಕಟ್ಟಡ ನಿರುಪಯುಕ್ತವಾಗಿದ್ದು, ಪಾಳು ಕೊಂಪೆಯಂತಾಗಿದೆ. ಕಿಟಕಿ ಬಾಗಿಲು ಇಲ್ಲದೆ ಅನಾಥವಾಗಿದ್ದು, ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಶಾಲಾ ಕೊಠಡಿಗಳಲ್ಲಿ ಬಿಯರ್ ಬಾಟಲಿಗಳು ಹಾಗೂ ಇನ್ನಿತರ ಮದ್ಯದ ಬಾಟಲಿಗಳು, ಪೌಚ್‌ಗಳು ಕಣ್ಣಿಗೆ ರಾಚುತ್ತಿವೆ.

ಅಲ್ಲದೇ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುವ ಎಲ್ಲ ಲಕ್ಷಣಗಳೂ ಕಾಣಿಸುತ್ತಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಯ ಕೊಠಡಿಯಲ್ಲಿ ಅನೇಕ ಮದ್ಯದ ಬಾಟಲಿಗಳು ಬಿದ್ದಿರುವುದನ್ನು ಗಮನಿಸಿದರೆ ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಅಳುಕಿಲ್ಲದೆ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಿರುಪಯುಕ್ತವಾಗಿರುವ ಶಾಲೆಯ ಕೊಠಡಿಯಲ್ಲಿ ಒಂದು ಒಳ್ಳೆಯ ಗ್ರಂಥಾಲಯವನ್ನು ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ನಮ್ಮ ಮನವಿಯನ್ನು ಪುರಸ್ಕರಿಸಿ ಇದೇ ಕೊಠಡಿಯಲ್ಲಿ ಗ್ರಂಥಾಲಯ ತೆರೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಮುಚ್ಚಿರುವ ಸರ್ಕಾರಿ ಶಾಲೆಗಳು: 

ಶಿರಗೋಡು ಶಾಲೆಯನ್ನು ಮುಚ್ಚಿ ಸುಮಾರು ೭ ವರ್ಷಗಳೇ ಕಳೆದಿವೆ. ೨೦೧೭-೨೦೧೮ರ ಸಾಲಿನಲ್ಲೇ ಮಕ್ಕಳಿಲ್ಲ ಎಂಬ ಕಾರಣಕ್ಕೆ ಶಾಲೆಯನ್ನು ಮುಚ್ಚಲಾಗಿತ್ತು. ಇದೀಗ ಹನೂರು ತಾಲ್ಲೂಕಿನಲ್ಲಿ ಶಿರಗೋಡು ಸೇರಿದಂತೆ ಸುಂಟರದೊಡ್ಡಿ, ದೊಡ್ಡ ಮಾಲಾಪುರ, ಚಿಕ್ಕಾಲತ್ತೂರು, ಇನ್ನಿತರ ಶಾಲೆಗಳು ಸಹ ಮುಚ್ಚುವ ಹಂತಕ್ಕೆ ಬಂದಿವೆ.

ವಿಷಯ ತಿಳಿದ ತಕ್ಷಣ ಸ್ವಚ್ಛತೆ: 

ಪತ್ರಿಕಾ ಮಾಧ್ಯಮದವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಚರ್ಚೆ ನಡೆಸಿದ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಶಾಲೆಯ ಒಳಗಡೆ ಇದ್ದಂತಹ ಮದ್ಯದ ಬಾಟಲಿಗಳನ್ನು ತೆರವುಗೊಳಿಸಿ, ಶಾಲೆಯನ್ನು ಸ್ವಚ್ಛಗೊಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

4 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

4 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago