Andolana originals

ಮದ್ಯಪಾನಿಗಳ ತಾಣವಾದ ಶಾಲಾ ಕಟ್ಟಡ

ಮುಚ್ಚಲ್ಪಟ್ಟಿರುವ ಶಾಲೆಯ ಕೊಠಡಿಯಲ್ಲಿ ರಾರಾಜಿಸುತ್ತಿರುವ ಮದ್ಯದ ಬಾಟಲಿಗಳು; ನಾಗರಿಕರ ಆಕ್ರೋಶ

ಹನೂರು: ನಿಗದಿತ ಸಂಖ್ಯೆಯ ಮಕ್ಕಳಿಲ್ಲ ಎಂಬ ಕಾರಣಕ್ಕೆ ಮುಚ್ಚಲ್ಪಟ್ಟಿರುವ ಶಿರಗೋಡು ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಇದೀಗ ಮದ್ಯಪಾನಿಗಳ ತಾಣವಾಗಿ ಮಾರ್ಪಟ್ಟಿದೆ.

ಮಕ್ಕಳ ದಾಖಲಾತಿ ಕಡಿಮೆಯಾಗಿ ಕ್ರಮೇಣ ಸರ್ಕಾರಿ ಶಾಲೆಯನ್ನು ಮುಚ್ಚಿ ರುವುದರಿಂದ ಇದೀಗ ಕಟ್ಟಡ ನಿರುಪಯುಕ್ತವಾಗಿದ್ದು, ಪಾಳು ಕೊಂಪೆಯಂತಾಗಿದೆ. ಕಿಟಕಿ ಬಾಗಿಲು ಇಲ್ಲದೆ ಅನಾಥವಾಗಿದ್ದು, ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಶಾಲಾ ಕೊಠಡಿಗಳಲ್ಲಿ ಬಿಯರ್ ಬಾಟಲಿಗಳು ಹಾಗೂ ಇನ್ನಿತರ ಮದ್ಯದ ಬಾಟಲಿಗಳು, ಪೌಚ್‌ಗಳು ಕಣ್ಣಿಗೆ ರಾಚುತ್ತಿವೆ.

ಅಲ್ಲದೇ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಡುವ ಎಲ್ಲ ಲಕ್ಷಣಗಳೂ ಕಾಣಿಸುತ್ತಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಯ ಕೊಠಡಿಯಲ್ಲಿ ಅನೇಕ ಮದ್ಯದ ಬಾಟಲಿಗಳು ಬಿದ್ದಿರುವುದನ್ನು ಗಮನಿಸಿದರೆ ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಯಾವುದೇ ಅಳುಕಿಲ್ಲದೆ ನಡೆಯುತ್ತಿದೆಯೇ ಎಂಬ ಅನುಮಾನ ಕಾಡುತ್ತದೆ. ಸಂಬಂಧಪಟ್ಟ ಅಬಕಾರಿ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ನಿರುಪಯುಕ್ತವಾಗಿರುವ ಶಾಲೆಯ ಕೊಠಡಿಯಲ್ಲಿ ಒಂದು ಒಳ್ಳೆಯ ಗ್ರಂಥಾಲಯವನ್ನು ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ನಮ್ಮ ಮನವಿಯನ್ನು ಪುರಸ್ಕರಿಸಿ ಇದೇ ಕೊಠಡಿಯಲ್ಲಿ ಗ್ರಂಥಾಲಯ ತೆರೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಮುಚ್ಚಿರುವ ಸರ್ಕಾರಿ ಶಾಲೆಗಳು: 

ಶಿರಗೋಡು ಶಾಲೆಯನ್ನು ಮುಚ್ಚಿ ಸುಮಾರು ೭ ವರ್ಷಗಳೇ ಕಳೆದಿವೆ. ೨೦೧೭-೨೦೧೮ರ ಸಾಲಿನಲ್ಲೇ ಮಕ್ಕಳಿಲ್ಲ ಎಂಬ ಕಾರಣಕ್ಕೆ ಶಾಲೆಯನ್ನು ಮುಚ್ಚಲಾಗಿತ್ತು. ಇದೀಗ ಹನೂರು ತಾಲ್ಲೂಕಿನಲ್ಲಿ ಶಿರಗೋಡು ಸೇರಿದಂತೆ ಸುಂಟರದೊಡ್ಡಿ, ದೊಡ್ಡ ಮಾಲಾಪುರ, ಚಿಕ್ಕಾಲತ್ತೂರು, ಇನ್ನಿತರ ಶಾಲೆಗಳು ಸಹ ಮುಚ್ಚುವ ಹಂತಕ್ಕೆ ಬಂದಿವೆ.

ವಿಷಯ ತಿಳಿದ ತಕ್ಷಣ ಸ್ವಚ್ಛತೆ: 

ಪತ್ರಿಕಾ ಮಾಧ್ಯಮದವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಈ ವಿಚಾರವಾಗಿ ಚರ್ಚೆ ನಡೆಸಿದ ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಶಾಲೆಯ ಒಳಗಡೆ ಇದ್ದಂತಹ ಮದ್ಯದ ಬಾಟಲಿಗಳನ್ನು ತೆರವುಗೊಳಿಸಿ, ಶಾಲೆಯನ್ನು ಸ್ವಚ್ಛಗೊಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

12 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

14 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

15 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

15 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

15 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

18 hours ago