Andolana originals

ಅವಧಿಗೂ ಮುನ್ನ ಶಾಲೆಗೆ ಬೀಗ; ಕಲಿಕೆಗೆ ಹಿನ್ನಡೆ

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ 

ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದು ಮನೆಗಳತ್ತ ಶಿಕ್ಷಕರು ತೆರಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ವಡಕೆಹಳ್ಳ ಕ್ಲಸ್ಟರ್ ವ್ಯಾಪ್ತಿಯ ದಂಟಳ್ಳಿ ಶಾಲೆಗಳಲ್ಲಿ ಶಾಲಾ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಜಿಪಿಎಸ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಧಿಗೂ ಮುನ್ನ ಶಾಲೆಗೆ ಬೀಗ: ದಂಟಳ್ಳಿ ಗ್ರಾಮದಲ್ಲಿರುವ ೨ ಸರ್ಕಾರಿ ಶಾಲೆಗಳಲ್ಲಿ ಸಂಜೆ ೪ರವರೆಗೂ ಶಾಲಾ ಅವಧಿ ಇದ್ದರೂ ಅದಕ್ಕೂ ಮುಂಚಿತವಾಗಿಯೇ ಶಾಲೆಗೆ ಬೀಗ ಹಾಕಿ ಮನೆಯತ್ತ ಶಿಕ್ಷಕರು ತೆರಳುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಾಕ್ಷಿ ಸಮೇತ ತಿಳಿಸಿದೆ.

ಕಳೆದ ವಾರ ಡಿ.೨೪ ರಂದು ಆ ಭಾಗದ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಧ್ಯಾಹ್ನ ೩.೩೦ಕ್ಕೆ ಶಾಲೆಗೆ ಬೇಗ ಹಾಕಲಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ಮಕ್ಕಳೇ ಶಾಲೆಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಇಂತಹ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕೊಳ್ಳೆಗಾಲ ತಾಲ್ಲೂಕು ಅಧ್ಯಕ್ಷ ಅಜ್ಗರ್ ಪಾಷ ಆಗ್ರಹಿಸಿದ್ದಾರೆ.

ಹೀಗೆ ಅವಧಿಗೂ ಮುನ್ನವೇ ಶಾಲೆಗೆ ಬೇಗ ಹಾಕುತ್ತಿರುವುದು ಮಕ್ಕಳ ಕಲಿಕೆಗೆ ಹಿನ್ನಡೆ ಉಂಟುಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಬಸ್ ವ್ಯವಸ್ಥೆ ಇಲ್ಲ : ಶಾಲಾ ಸಮಯಕ್ಕೆ ಅನುಗುಣವಾಗಿ ಕಾಡಂಚಿನ ಗ್ರಾಮದ ಪ್ರದೇಶಗಳಿಗೆ ತೆರಳಲು ಹಾಗೂ ವಾಪಸ್ ಬರಲು ಸೂಕ್ತ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಇರುವ ಬಸ್ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಸಾರಿಗೆ ವ್ಯವಸ್ಥೆಯನ್ನು ಶಾಲೆಯ ಸಮಯಕ್ಕೆ ಅನುಗುಣವಾಗಿ ಸರಿದೂಗಿಸಿದರೆ ಇಂಥ ಸಮಸ್ಯೆಗಳಿಗೆ ಮುಕ್ತಿ ಸಿಗಬಹುದು ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರು  ಮನವಿ ಮಾಡಿಕೊಂಡಿದ್ದಾರೆ.

ಹನೂರು ಶೈಕ್ಷಣಿಕ ವಲಯದ ಬೈಲೂರು, ಮೀಣ್ಯಂ, ಹೂಗ್ಯಂ, ಜಲ್ಲಿಪಾಳ್ಯ, ದಂಟಳ್ಳಿ, ಪೊನ್ನಾಚಿ, ಶಾಗ್ಯ, ಗೋಪಿನಾಥಂ ಮತ್ತಿತರ ಕಾಡಂಚಿನ ಗ್ರಾಮಗಳಿಗೆ ಶಾಲಾ ಅವಧಿಯಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಿಕ್ಷಕರಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಶಾಲೆ ಅವಧಿ ಮುಗಿದ ನಂತರದ ಸಮಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಮಾಡಿದರೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೂ ಹೆಚ್ಚಿನ ಅನು ಕೂಲವಾಗಲಿದೆ. ಆದ್ದರಿಂದ ಸಾರಿಗೆ ಅಽಕಾರಿಗಳು ಕಾಡಂಚಿನ ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

” ಕಾಡಂಚಿನ ಗ್ರಾಮಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ತೊಂದರೆ ಆಗುತ್ತಿದೆ. ಆದರೂ ಸರ್ಕಾರಿ ನಿಯಮದಂತೆ ಶಾಲಾ ಅವಧಿ ಮುಗಿಯುವವರೆಗೂ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಬೇಕು. ಯಾರು ತಪ್ಪು ಮಾಡಿದ್ದಾರೆಯೋ ಅವರಿಗೆ ನೋಟಿಸ್ ನೀಡಿ ಮಾಹಿತಿ ತೆಗೆದುಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲಾಗುವುದು.

ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಹನೂರು ವಲಯ

ಆಂದೋಲನ ಡೆಸ್ಕ್

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

3 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

3 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

7 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

7 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

7 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

7 hours ago