Andolana originals

ಅವಧಿಗೂ ಮುನ್ನ ಶಾಲೆಗೆ ಬೀಗ; ಕಲಿಕೆಗೆ ಹಿನ್ನಡೆ

ಶಾಲೆಗೆ ಬೀಗ ಹಾಕಿರುವುದನ್ನು ಫೋಟೊ ತೆಗೆದು ಸಾಬೀತುಪಡಿಸಿದ ಕರವೇ; ಶಿಕ್ಷಕರ ವಿರುದ್ಧ ಆಕ್ರೋಶ 

ಹನೂರು: ಹನೂರು ಶೈಕ್ಷಣಿಕ ವಲಯದ ಕೆಲವೆಡೆ ಸರ್ಕಾರಿ ಶಾಲೆಗಳಲ್ಲಿ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದು ಮನೆಗಳತ್ತ ಶಿಕ್ಷಕರು ತೆರಳುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಹಿನ್ನಡೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ವಡಕೆಹಳ್ಳ ಕ್ಲಸ್ಟರ್ ವ್ಯಾಪ್ತಿಯ ದಂಟಳ್ಳಿ ಶಾಲೆಗಳಲ್ಲಿ ಶಾಲಾ ಅವಧಿಗೂ ಮುನ್ನವೇ ಶಾಲೆಗೆ ಬೀಗ ಜಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಜಿಪಿಎಸ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವಧಿಗೂ ಮುನ್ನ ಶಾಲೆಗೆ ಬೀಗ: ದಂಟಳ್ಳಿ ಗ್ರಾಮದಲ್ಲಿರುವ ೨ ಸರ್ಕಾರಿ ಶಾಲೆಗಳಲ್ಲಿ ಸಂಜೆ ೪ರವರೆಗೂ ಶಾಲಾ ಅವಧಿ ಇದ್ದರೂ ಅದಕ್ಕೂ ಮುಂಚಿತವಾಗಿಯೇ ಶಾಲೆಗೆ ಬೀಗ ಹಾಕಿ ಮನೆಯತ್ತ ಶಿಕ್ಷಕರು ತೆರಳುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಾಕ್ಷಿ ಸಮೇತ ತಿಳಿಸಿದೆ.

ಕಳೆದ ವಾರ ಡಿ.೨೪ ರಂದು ಆ ಭಾಗದ ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಧ್ಯಾಹ್ನ ೩.೩೦ಕ್ಕೆ ಶಾಲೆಗೆ ಬೇಗ ಹಾಕಲಾಗಿದೆ. ಕೆಲವು ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ಮಕ್ಕಳೇ ಶಾಲೆಗೆ ಬೀಗ ಹಾಕುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಇಂತಹ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕೊಳ್ಳೆಗಾಲ ತಾಲ್ಲೂಕು ಅಧ್ಯಕ್ಷ ಅಜ್ಗರ್ ಪಾಷ ಆಗ್ರಹಿಸಿದ್ದಾರೆ.

ಹೀಗೆ ಅವಧಿಗೂ ಮುನ್ನವೇ ಶಾಲೆಗೆ ಬೇಗ ಹಾಕುತ್ತಿರುವುದು ಮಕ್ಕಳ ಕಲಿಕೆಗೆ ಹಿನ್ನಡೆ ಉಂಟುಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.

ಬಸ್ ವ್ಯವಸ್ಥೆ ಇಲ್ಲ : ಶಾಲಾ ಸಮಯಕ್ಕೆ ಅನುಗುಣವಾಗಿ ಕಾಡಂಚಿನ ಗ್ರಾಮದ ಪ್ರದೇಶಗಳಿಗೆ ತೆರಳಲು ಹಾಗೂ ವಾಪಸ್ ಬರಲು ಸೂಕ್ತ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಇರುವ ಬಸ್ ವ್ಯವಸ್ಥೆಗೆ ಹೊಂದಿಕೊಳ್ಳಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಸಾರಿಗೆ ವ್ಯವಸ್ಥೆಯನ್ನು ಶಾಲೆಯ ಸಮಯಕ್ಕೆ ಅನುಗುಣವಾಗಿ ಸರಿದೂಗಿಸಿದರೆ ಇಂಥ ಸಮಸ್ಯೆಗಳಿಗೆ ಮುಕ್ತಿ ಸಿಗಬಹುದು ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರು  ಮನವಿ ಮಾಡಿಕೊಂಡಿದ್ದಾರೆ.

ಹನೂರು ಶೈಕ್ಷಣಿಕ ವಲಯದ ಬೈಲೂರು, ಮೀಣ್ಯಂ, ಹೂಗ್ಯಂ, ಜಲ್ಲಿಪಾಳ್ಯ, ದಂಟಳ್ಳಿ, ಪೊನ್ನಾಚಿ, ಶಾಗ್ಯ, ಗೋಪಿನಾಥಂ ಮತ್ತಿತರ ಕಾಡಂಚಿನ ಗ್ರಾಮಗಳಿಗೆ ಶಾಲಾ ಅವಧಿಯಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಿಕ್ಷಕರಿಗೂ ತೊಂದರೆಯಾಗುತ್ತಿದೆ. ಆದ್ದರಿಂದ ಶಾಲೆ ಅವಧಿ ಮುಗಿದ ನಂತರದ ಸಮಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಮಾಡಿದರೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೂ ಹೆಚ್ಚಿನ ಅನು ಕೂಲವಾಗಲಿದೆ. ಆದ್ದರಿಂದ ಸಾರಿಗೆ ಅಽಕಾರಿಗಳು ಕಾಡಂಚಿನ ಗ್ರಾಮಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

” ಕಾಡಂಚಿನ ಗ್ರಾಮಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ತೊಂದರೆ ಆಗುತ್ತಿದೆ. ಆದರೂ ಸರ್ಕಾರಿ ನಿಯಮದಂತೆ ಶಾಲಾ ಅವಧಿ ಮುಗಿಯುವವರೆಗೂ ವಿದ್ಯಾರ್ಥಿಗಳಿಗೆ ಪಾಠ ಪ್ರವಚನ ಮಾಡಬೇಕು. ಯಾರು ತಪ್ಪು ಮಾಡಿದ್ದಾರೆಯೋ ಅವರಿಗೆ ನೋಟಿಸ್ ನೀಡಿ ಮಾಹಿತಿ ತೆಗೆದುಕೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲಾಗುವುದು.

ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಹನೂರು ವಲಯ

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

6 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

7 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

8 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

8 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

9 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

11 hours ago