Andolana originals

ಸೆ. 29 ರಂದು ‘ಮಹಿಷ ಮಂಡಲೋತ್ಸವ’

ಚಾ. ಬೆಟ್ಟದ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ: ಪುರುಷೋತ್ತಮ್ ಮಾಹಿತಿ

ಮೈಸೂರು: ಮಹಿಷ ದಸರಾ ಆಚರಣಾ ಸಮಿತಿಯ ವತಿಯಿಂದ ಸೆ. ೨೯ರಂದು ಬೆಳಿಗ್ಗೆ ೧೦. ೩೦ಕ್ಕೆ ನಗರದ ಪುರಭವನದಲ್ಲಿ ಮಹಿಷಾ ದಸರಾ ‘ಮಹಿಷ ಮಂಡಲೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಷ ದಸರಾ ಆಚರಣಾ ಸಮಿತಿ ಅಧ್ಯಕ್ಷ ಎಂ. ಪುರುಷೋತ್ತಮ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ ೮. ೩೦ಕ್ಕೆ ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಗಣ್ಯರಿಂದ ಪುಷ್ಪಾರ್ಚಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಗಾಂಧಿನಗರದ ಉರಿಲಿಂಗ ಪೆದ್ದೀಶ್ವರ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಚಾಮರಾಜನಗರದ ನಳಂದ ಬುದ್ಧವಿಹಾರದ ಬೋಽದತ್ತ ಬಂತೇಜಿ ಉಪಸ್ಥಿತಿಯಲ್ಲಿ ಚಿಂತಕ ಯೋಗೀಶ್ ಮಾಸ್ಟರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಪ್ರಗತಿಪರ ಚಿಂತಕ ಶಿವಸುಂದರ್ ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಸಾಹಿತಿ ಪ್ರೊ. ಕೆ. ಎಸ್. ಭಗವಾನ್, ಇತಿಹಾಸ ತಜ್ಞ ಪ್ರೊ. ಪಿ. ವಿ. ನಂಜರಾಜ ಅರಸ್, ಸಿದ್ದಸ್ವಾಮಿ, ಡಾ. ಕೃಷ್ಣಮೂರ್ತಿ ಚಮರಂ ಪಾಲ್ಗೊಳ್ಳಲಿದ್ದಾರೆ. ದಲಿತ ಮತ್ತು ಪ್ರಗತಿಪರ ಸಂಘಟನೆಗಳು, ದಲಿತ ವಿದ್ಯಾರ್ಥಿ ಒಕ್ಕೂಟ, ಸಂಶೋಧಕರ ಸಂಘ ಹಾಗೂ ಅಂಬೇಡ್ಕರ್ ಸಂಘಟನೆ ಗಳ ಅಧ್ಯಕ್ಷರು, ಮುಖಂಡರು, ಪದಾಽಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಸಾಹಿತಿ ಕೆ. ಎಸ್. ಭಗವಾನ್ ಮಾತನಾಡಿ, ಪಟ್ಟಭದ್ರ ಹಿತಾಸಕ್ತಿಗಳು ಪುರಾಣ ಮತ್ತು ಇತಿಹಾಸದ ಕುರಿತು ಜನರಲ್ಲಿ ಗೊಂದಲ ಸೃಷ್ಟಿಸಿದ್ದಾರೆ. ದೇಶದಲ್ಲಿ ಬ್ರಾಹ್ಮಣರೇ ಚರಿತ್ರಕಾರರಾಗಿದ್ದರಿಂದ ತಮಗೆ ಅನುಕೂಲವಾಗು ವಂತೆ ಚರಿತ್ರೆಯನ್ನು ತಿರುಚಿದ್ದಾರೆ. ಬ್ರಾಹ್ಮಣೇತರರೂ ಅಕ್ಷರವಂತರಾಗಿರುವುದರಿಂದ ಸರಿಯಾದ ಇತಿಹಾಸ ವನ್ನು ಓದಿಕೊಳ್ಳಬೇಕು ಎಂದು ತಿಳಿ ಹೇಳಿದರು.

ಇತಿಹಾಸ ತಜ್ಞ ಪ್ರೊ. ಪಿ. ವಿ. ನಂಜರಾಜ ಅರಸ್ ಮಾತನಾಡಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಿಯೊಬ್ಬರೂ ಅವರವರ ನಂಬಿಕೆಯ ಅನುಸಾರವಾಗಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಸಂವಿಧಾನವೇ ಅವಕಾಶ ಕಲ್ಪಿಸಿದೆ. ಮಹಿಷ ಮಂಡಲೋತ್ಸವ ಆಚರಣೆಗೂ ಅವಕಾಶವಿದೆ. ಆದರೆ, ಚಾಮುಂಡಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಚರಣೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಆದರೆ, ಮಾಜಿ ಸಂಸದರೊಬ್ಬರು ಯದುವೀರ್ ಅವರ ಹೇಳಿಕೆಯನ್ನು ವಿರೋಽಸುವ ಏಕೈಕ ದುರುದ್ದೇಶದಿಂದ ಮಹಿಷ ಮಂಡಲೋತ್ಸವ ವನ್ನು ತಡೆಯುವುದಾಗಿ ಹೇಳುತ್ತಿದ್ದಾರೆ. ಯದುವೀರ್ ಹೇಳಿಕೆಯ ನಂತರ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಇದು ಮಾಜಿ ಸಂಸದರಿಗೆ ಯದುವೀರ್ ಅವರ ಮೇಲೆ ಇರುವ ಹೊಟ್ಟೆಕಿಚ್ಚನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.

ಸಾಹಿತಿಗಳಾದ ಸಿದ್ದಸ್ವಾಮಿ, ಡಾ. ಕೃಷ್ಣಮೂರ್ತಿ ಚಮರಂ, ಸೋಮಯ್ಯ ಮಲೆಯೂರು, ದಲಿತ ವೆಲ್ -ರ್ ಟ್ರಸ್ಟ್‌ನ ಅಧ್ಯಕ್ಷ ಪ್ರೊ. ಟಿ. ಎಂ. ಮಹೇಶ್ ಮತ್ತಿತರರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

2 mins ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

14 mins ago

ಕೋಚಿಂಗ್ ಮಾಫಿಯಾಕ್ಕೆ NEET ಬಲಿ…!

ಭಾರತದಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…

2 hours ago

ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರ ವಿಶ್ವಾಸ ಉಳಿಸಿಕೊಳ್ಳಬೇಕಿದೆ ಎನ್‌ಟಿಎ

ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಅಂಗಳಕ್ಕೆ ತಲುಪಿದ ಅಧಿಕಾರ ಹಂಚಿಕೆ ಮಾತು

ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…

2 hours ago

ಪಾರಂಪರಿಕ ಕಟ್ಟಡ ಸಂರಕ್ಷಿಸಿ.. ಪರಂಪರೆ ಉಳಿಸಿ..!

ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…

2 hours ago