Andolana originals

ಹಳ್ಳಿಕಾರ್ ತಳಿಯ ಹಸುವಿಗೆ ಸೀಮಂತ

ಎಂ.ಆರ್. ಚಕ್ರಪಾಣಿ

ಸ್ನೇಹಿತರು, ನೆಂಟರಿಷ್ಟರಿಗೆ ಹೋಳಿಗೆ ಊಟ ಹಾಕಿಸಿದ ರೈತ ದಂಪತಿ 

ಮದ್ದೂರು: ಹಳ್ಳಿಕಾರ್ ತಳಿಯ ಗಬ್ಬದ ಹಸುವಿಗೆ ರೈತ ಕುಟುಂಬವೊಂದು ಸೀಮಂತ ಮಾಡಿ ಗ್ರಾಮಸ್ಥರು, ಸ್ನೇಹಿತರು, ನೆಂಟರಿಷ್ಟರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದೆ.

ತಾಲ್ಲೂಕಿನ ದುಂಡನಹಳ್ಳಿ ಗ್ರಾಮದ ರೈತ ಕುಟುಂಬದ ಮಂಜುಳಾ-ನಾಗೇಶ್ ದಂಪತಿ, ಪುತ್ರ ಡಿ.ಎನ್.ರಘು, ಪುತ್ರಿ ಸಿಂಧು ಹಾಗೂ ಅವರ ಕುಟುಂಬದವರು ಮಹಿಳೆಯರಿಗೆ ಮಾಡುವ ಶಾಸ್ತ್ರೋಕ್ತದಂತೆ ಹಳ್ಳಿಕಾರ್ ಹಸುವಿಗೆ ಸೀಮಂತ ಮಾಡಿರುವುದು ವಿಶಿಷ್ಟವಾಗಿದೆ.

ಮಂಜುಳಾ-ನಾಗೇಶ್ ಕುಟುಂಬ ಮತ್ತು ರಾಸುಗಳ ನಡುವೆ ಒಂದು ರೀತಿಯ ಅವಿನಾಭಾವ ಸಂಬಂಧವಿದೆ. ಇದು ತಂದೆ, ತಾಯಿ ಹಾಗೂ ಮಕ್ಕಳ ಸಂಬಂಧವಿದ್ದಂತೆ. ಹಾಗಾಗಿ ತಮ್ಮ ಮನೆಯ ನೆಚ್ಚಿನ ಹಳ್ಳಿಕಾರ್ ತಳಿಯ ನಾಟಿ ಆಕಳಿಗೆ ಸೀಮಂತ ಮಾಡಿ ಜನರ ಗಮನ ಸೆಳೆದಿದ್ದಾರೆ.

ಹಸುವಿನ ಸೀಮಂತ ಕಾರ್ಯಕ್ರಮ ಕುಟುಂಬದವರ ಸಂತೋಷವನ್ನು ಇಮ್ಮಡಿಗೊಳಿಸಿತ್ತು. ಸುಮಾರು ೧೨ ತಟ್ಟೆಗಳಲ್ಲಿ ಸೇಬು, ದಾಳಿಂಬೆ, ಕಿತ್ತಳೆ, ವೀಳ್ಯದೆಲೆ, ಬಳೆ, ಹೂ ಸೇರಿದಂತೆ ವಿವಿಧ ಬಗೆಯ ಹಣ್ಣುಗಳು, ರವೆ ಉಂಡೆ, ಕಜ್ಜಾಯ, ಮೈಸೂರು ಪಾಕ್, ಒಬ್ಬಟ್ಟು, ಸೇರಿದಂತೆ ವಿಶೇಷ ರೀತಿಯ ಸಿಹಿ ತಿನಿಸುಗಳನ್ನಿಟ್ಟು, ಹಸುವನ್ನು ಮಧುವಣಗಿತ್ತಿಯಂತೆ ಸಿಂಗರಿಸಿ, ಪೂಜೆ ಸಲ್ಲಿಸಿ ಆಗಮಿಸಿದ್ದ ಜನರನ್ನು ಸಂತೋಷಗೊಳಿಸಿತು.

ಮಂಜುಳಾ-ನಾಗೇಶ್ ಮೂಲತಃ ರೈತ ಕುಟುಂಬದವರು. ಇವರು ೨ ಜತೆ ನಾಟಿ, ೭ ಸೀಮೆ ಹಸುಗಳನ್ನು ಸಾಕಿದ್ದಾರೆ. ಮನುಷ್ಯರಿಗೆ ಸೀಮಂತ ಮಾಡುತ್ತೇವೆ, ಪ್ರಾಣಿಗಳಿಗೊ ಮಾಡಿದರೆ ತಪ್ಪೇನು ಎಂದು ಸೀಮಂತ ಕಾರ್ಯಕ್ರಮ ಮಾಡಿ ನೆರೆದವರಿಗೆ ಸಿಹಿಯೂಟ ಉಣಬಡಿಸಿದ್ದಾರೆ.

” ಹಲವಾರು ವರ್ಷಗಳಿಂದ ನಮ್ಮ ಕುಟುಂಬ ಹಸುಗಳನ್ನು ಸಾಕುತ್ತಿದ್ದು, ಹಸುಗಳ ಮೇಲಿನ ಪ್ರೀತಿಯಿಂದ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡು ೧೦೦ಕ್ಕೂ ಹೆಚ್ಚು ಜನರಿಗೆ ಹೋಳಿಗೆ ಊಟ ಹಾಕಿಸಿದ್ದೇವೆ. ಹಸುಗಳು ರೈತರಿಗೆ ಮಿತ್ರರಾಗಿರುವ ಕಾರಣ ಸೀಮಂತ ಕಾರ್ಯಕ್ರಮ ಮಾಡಿದ್ದೇವೆ. ಮುಂದೆಯೂ ಇದನ್ನು ಮುಂದುವರಿಸಿಕೊಂಡು ಹೋಗುತ್ತೇವೆ.

ಡಿ.ಎನ್.ರಘು, ಯುವ ರೈತ, ದುಂಡನಹಳ್ಳಿ 

” ಭೂಮಿ,ಹೆಣ್ತನ ಮತ್ತು ರಾಸುಗಳ ಶ್ರಮವನ್ನು ಗೌರವಿಸುವ ಒಂದು ವಿಶಿಷ್ಟ ಸಂಪ್ರದಾಯ ಸೀಮಂತ ಕಾರ್ಯಕ್ರಮವಾಗಿದೆ. ಗರ್ಭಿಣಿ ಆಕಳನ್ನು ಸಿಂಗರಿಸಿ, ಹಬ್ಬದ ವಿಶೇಷ ಭಕ್ಷ್ಯ,ಭೋಜ್ಯವನ್ನು ಉಣಬಡಿಸಲಾಯಿತು. ರೈತರು ತಮ್ಮ ರಾಸುಗಳು ಮತ್ತು ಭೂಮಿಯ ಶ್ರಮವನ್ನು ಗೌರವಿಸಲು ಮತ್ತು ಕೃತಜ್ಞತೆ ಸಲ್ಲಿಸಲು ಈ ಸಂಪ್ರದಾಯವನ್ನು ಪಾಲಿಸಬೇಕು”

ಮಂಜುಳಾ-ನಾಗೇಶ್ ರೈತ ದಂಪತಿ

ಆಂದೋಲನ ಡೆಸ್ಕ್

Recent Posts

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

5 mins ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

12 mins ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

20 mins ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

25 mins ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

9 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

12 hours ago