Andolana originals

ಇಂದಿನಿಂದ ಸ್ವಯಂ ಗಣತಿ

ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ

ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ 

ಬೆಂಗಳೂರು: ರಾಷ್ಟ್ರೀಯ ಜನಗಣತಿ ೨೦೨೭ರ ಪ್ರಯುಕ್ತ ಬುಧವಾರ (ಏ.೧) ರಾಜ್ಯದಾದ್ಯಂತ ಮನೆ ಪಟ್ಟಿ ಮತ್ತು ಮನೆ ಸ್ವಯಂ ಗಣತಿ ಕಾರ್ಯ ಆರಂಭವಾಗಲಿದೆ. ಈ ಕಾರ್ಯವು ೧೫ ದಿನಗಳವರೆಗೆ ನಡೆಯಲಿದೆ. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜನಗಣತಿ- ೨೦೨೭ರ ಪ್ರಥಮ ಹಂತದಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ಕಾರ್ಯಾಚರಣೆಗೆ ಸಂಬಂಽಸಿದಂತೆ ಪೂರ್ವ ಸಿದ್ಧತಾ ಕಾರ್ಯಗಳನ್ನು ವೇಗಗೊಳಿಸಲಾಗಿದ್ದು, ನಾಗರಿಕರು ತಮ್ಮ ಮನೆ ಹಾಗೂ ಕುಟುಂಬದ ಮೂಲ ಮಾಹಿತಿಯನ್ನು ನಿಖರವಾಗಿ ದಾಖಲಿಸುವುದು ಅತ್ಯಂತ ಮಹತ್ವದ್ದಾಗಿರುತ್ತದೆ.

ಸಾರ್ವ ಜನಿಕರಿಗೆ ತಮ್ಮ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಅವಕಾಶ ನೀಡುತ್ತದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದೆ. ಕೋವಿಡ್ ಕಾರಣದಿಂದಾಗಿ ೨೦೨೧ರಲ್ಲಿ ನಡೆಯ ಬೇಕಿದ್ದ ಜನಗಣತಿ ಮುಂದೂಡಲ್ಪಟ್ಟಿತ್ತು. ಈ ಬೃಹತ್ ಕಾರ್ಯವನ್ನು ನಡೆಸಲು ಕೇಂದ್ರ ಸಚಿವ ಸಂಪುಟವು ೧೧,೭೧೮ ಕೋಟಿ ರೂ.ಗಳ ಬಜೆಟ್ ಅನ್ನು ಅನು ಮೋದಿಸಿತ್ತು. ಕೊನೆಯ ರಾಷ್ಟ್ರವ್ಯಾಪಿ ಜನ ಗಣತಿಯನ್ನು ೨೦೧೧ರಲ್ಲಿ ನಡೆಸಲಾಗಿತ್ತು.

ಅದರಂತೆ, ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು ೧೫-೨೦ ನಿಮಿಷಗಳ ಅವಽಯಲ್ಲಿ ಸ್ವಯಂ-ಗಣತಿ ಮಾಡಿ ಮನೆಯ ವಿವರಗಳನ್ನು ಒದಗಿಸಬಹುದು.

೨ನೇ ಹಂತದಲ್ಲಿ ಏ.೧೬ ರಿಂದ ಮೇ ೧೫ ರ ವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಮನೆಪಟ್ಟಿ ಮತ್ತು ಮನೆ ಗಣತಿ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಗಣತಿದಾರರು ಮನೆಗೆ ಭೇಟಿ ನೀಡಿದಾಗ, ದೃಢೀ ಕರಿಸಲು ಮತ್ತು ಸ್ವಯಂ-ಗಣತಿ ದತ್ತಾಂಶದ ಅಂತಿಮ ಸಲ್ಲಿಕೆಗಾಗಿ ಸ್ವಯಂ-ಗಣತಿ ಐಡಿಯನ್ನು ಗಣತಿದಾರರೊಂದಿಗೆ ಹಂಚಿಕೊಳ್ಳಬೇಕಾಗಿರುತ್ತದೆ. ಸ್ವಯಂ ಗಣತಿ ಪ್ರಕ್ರಿಯೆಗಾಗಿ ನಿಗದಿಪಡಿಸಿರುವ ಅವಧಿಯಲ್ಲಿ ನಾಗರಿಕರು ತಮ್ಮ ಮಾಹಿತಿಯನ್ನು ದಾಖಲಿಸಲು ಅವಕಾಶವಿದ್ದು, ಇದರಿಂದ ಜನಗಣತಿ ಕಾರ್ಯದಲ್ಲಿ ಪಾರದರ್ಶಕತೆ, ವೇಗ ಮತ್ತು ನಿಖರತೆ ಹೆಚ್ಚಲಿದೆ.

ಏನೆಲ್ಲಾ ಮಾಹಿತಿ ?: 

ಮನೆ ಮಾಲೀಕತ್ವ, ಕಟ್ಟಡದ ವಿಧ, ಕುಡಿಯುವ ನೀರು, ವಿದ್ಯುತ್, ಶೌಚಾಲಯ ಸೌಲಭ್ಯ, ವಾಹನಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಲಭ್ಯತೆ ಸೇರಿದಂತೆ ೩೪ ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಬೇಕು.

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

10 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

23 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

23 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

23 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

23 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

23 hours ago