Andolana originals

ನಾಗರಹೊಳೆ ಅರಣ್ಯಕ್ಕೆ ಕಂಟಕವಾಗಿರುವ ಸೆನ್ನಾ ಸಸ್ಯಪ್ರಭೇದ

ಹುಣಸೂರು: ರಾಷ್ಟ್ರೀಯ ಹುಲಿ ಸಂರಕ್ಷಿತ ಅಭಯಾರಣ್ಯ ನಾಗರಹೊಳೆ ನಿತ್ಯಹರಿದ್ವರ್ಣದಿಂದ ಕೂಡಿದ್ದರೂ ವರ್ಷದ ಎಲ್ಲ ಕಾಲದಲ್ಲೂ ಹಸಿರಾಗಿರುವ ಸೆನ್ನಾ ಸಸ್ಯ ಪ್ರಭೇದ ಅರಣ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದ್ದು, ವನ್ಯಜೀವಿಗಳ ಆಹಾರ ಸರಪಳಿಗೆ ಕಂಟಕವಾಗುವ ಆತಂಕ ಎದುರಾಗಿದೆ.

೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ನಾಗರಹೊಳೆ ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ಜೈವಿಕ ವೈವಿಧ್ಯ ಕೇಂದ್ರವಾಗಿದೆ. ಹಲವು ಪ್ರಾಣಿ, ಪಕ್ಷಿ ಮತ್ತು ಸಸ್ಯಗಳಿಗೆ ಆಶ್ರಯವಾಗಿರುವ ಅಭಯಾರಣ್ಯದಲ್ಲಿ ಸೆನ್ನಾ ಸಸ್ಯ ವರ್ಗ ವ್ಯಾಪಕವಾಗಿ ಹರಡಿ ಪ್ರಾಣಿಗಳಿಗೆ ಆಹಾರದ ಕೊರತೆ ಸೃಷ್ಟಿಸಿದ್ದು, ಅರಣ್ಯ ಇಲಾಖೆಯ ನಿದ್ದೆಗೆಡಿಸಿದೆ.

ಸೆನ್ನಾ ಲ್ಯಾಟಿನ್ ಅಮೆರಿಕದ ಗೃಹ ಆಲಂಕಾರಿಕ ಹಳದಿ ಹೂವು. ಇದು ಕೇರಳದ ವಯನಾಡು ಮೂಲಕ ನಾಗರಹೊಳೆಗೂ ವ್ಯಾಪಿಸಿದೆ. ಈ ಸಸ್ಯದ ಬೀಜ ಪ್ರಸರಣ ಗಾಳಿಯಲ್ಲಿ ಆಗು ವುದರಿಂದ ನಿಯಂತ್ರಣ ಕಷ್ಟವಾಗುತ್ತಿದ್ದು, ವಾರ್ಷಿಕವಾಗಿ ಪ್ರತಿ ಗಿಡ ೬ ಸಾವಿರ ಬೀಜ ಉತ್ಪತ್ತಿ ಮಾಡುವ ಸಾಮರ್ಥ್ಯ ಹೊಂದಿ ರುತ್ತದೆ. ತೇವಾಂಶ ಇರುವ ಸ್ಥಳದಲ್ಲಿ ವೇಗವಾಗಿ ಬೆಳೆಯುತ್ತದೆ ಎಂದು ನಾಗರಹೊಳೆ ಹುಲಿ ಯೋಜನೆಯ ಎಸಿಎಫ್ ಲಕ್ಷ್ಮೀಕಾಂತ್ ತಿಳಿಸಿದ್ದಾರೆ.

ವೈಜ್ಞಾನಿಕ ಅಧ್ಯಯನದಂತೆ ಸೆನ್ನಾ ಮರದಿಂದ ಉದುರುವ ಎಲೆ ಗೊಬ್ಬರವಾಗುವುದಿಲ್ಲ. ಎಲೆ ಕರಗಿದ ಬಳಿಕ ರಾಸಾಯನಿಕ ಬದಲಾವಣೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಅಲ್ಲಿ ಯಾವುದೇ ಬೆಳೆ ಬೆಳೆಯಲು ಆಗದು. ಇದರಿಂದ ಆಹಾರ ಸರಪಳಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಲಂಟಾನ ಮತ್ತು ಸೆನ್ನಾ ಹುಲಿ ಸಂರಕ್ಷಿತ ಪ್ರದೇಶ ನಾಗರಹೊಳೆ, ಬಂಡೀಪುರಕ್ಕೆ ದೊಡ್ಡ ಪಿಡುಗಾಗಿವೆ. ಈವರೆಗೆ ೧,೩೦೦ ರಿಂದ ೧,೬೦೨ ಹೆಕ್ಟೇರ್ ಪ್ರದೇಶದಲ್ಲಿನ ಲಂಟಾನ ತೆರವುಗೊಳಿಸಿ, ಹುಲ್ಲು ಮತ್ತು ಬಿದಿರು ಬೆಳೆಸುವ ಪ್ರಕ್ರಿಯೆ ನಡೆದಿದೆ. ನಾಗರಹೊಳೆಯ ೮ ವಲಯಗಳಲ್ಲಿ ವಾರ್ಷಿಕವಾಗಿ ೫ ಹೆಕ್ಟೇರ್ ಪ್ರದೇಶದ ಲಂಟಾನ ತೆರವಿಗೆ ಇಲಾಖೆ ಮುಂದಾಗಿದೆ. ಈ ನಡುವೆ ಅಪಾಯಕಾರಿ ಸೆನ್ನಾ ಸಸ್ಯ ಪ್ರಭೇದ ದೊಡ್ಡ ಸವಾಲಾಗಿದೆ ಎಂದು ನಾಗರಹೊಳೆ ಹುಲಿ ಯೋಜ ನೆಯ ನಿರ್ದೇಶಕಿ ಸೀಮಾ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

7 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

7 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

9 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

10 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

11 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

11 hours ago