ಹುಣಸೂರು: ರಾಷ್ಟ್ರೀಯ ಹುಲಿ ಸಂರಕ್ಷಿತ ಅಭಯಾರಣ್ಯ ನಾಗರಹೊಳೆ ನಿತ್ಯಹರಿದ್ವರ್ಣದಿಂದ ಕೂಡಿದ್ದರೂ ವರ್ಷದ ಎಲ್ಲ ಕಾಲದಲ್ಲೂ ಹಸಿರಾಗಿರುವ ಸೆನ್ನಾ ಸಸ್ಯ ಪ್ರಭೇದ ಅರಣ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದ್ದು, ವನ್ಯಜೀವಿಗಳ ಆಹಾರ ಸರಪಳಿಗೆ ಕಂಟಕವಾಗುವ ಆತಂಕ ಎದುರಾಗಿದೆ.
೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ನಾಗರಹೊಳೆ ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ಜೈವಿಕ ವೈವಿಧ್ಯ ಕೇಂದ್ರವಾಗಿದೆ. ಹಲವು ಪ್ರಾಣಿ, ಪಕ್ಷಿ ಮತ್ತು ಸಸ್ಯಗಳಿಗೆ ಆಶ್ರಯವಾಗಿರುವ ಅಭಯಾರಣ್ಯದಲ್ಲಿ ಸೆನ್ನಾ ಸಸ್ಯ ವರ್ಗ ವ್ಯಾಪಕವಾಗಿ ಹರಡಿ ಪ್ರಾಣಿಗಳಿಗೆ ಆಹಾರದ ಕೊರತೆ ಸೃಷ್ಟಿಸಿದ್ದು, ಅರಣ್ಯ ಇಲಾಖೆಯ ನಿದ್ದೆಗೆಡಿಸಿದೆ.
ಸೆನ್ನಾ ಲ್ಯಾಟಿನ್ ಅಮೆರಿಕದ ಗೃಹ ಆಲಂಕಾರಿಕ ಹಳದಿ ಹೂವು. ಇದು ಕೇರಳದ ವಯನಾಡು ಮೂಲಕ ನಾಗರಹೊಳೆಗೂ ವ್ಯಾಪಿಸಿದೆ. ಈ ಸಸ್ಯದ ಬೀಜ ಪ್ರಸರಣ ಗಾಳಿಯಲ್ಲಿ ಆಗು ವುದರಿಂದ ನಿಯಂತ್ರಣ ಕಷ್ಟವಾಗುತ್ತಿದ್ದು, ವಾರ್ಷಿಕವಾಗಿ ಪ್ರತಿ ಗಿಡ ೬ ಸಾವಿರ ಬೀಜ ಉತ್ಪತ್ತಿ ಮಾಡುವ ಸಾಮರ್ಥ್ಯ ಹೊಂದಿ ರುತ್ತದೆ. ತೇವಾಂಶ ಇರುವ ಸ್ಥಳದಲ್ಲಿ ವೇಗವಾಗಿ ಬೆಳೆಯುತ್ತದೆ ಎಂದು ನಾಗರಹೊಳೆ ಹುಲಿ ಯೋಜನೆಯ ಎಸಿಎಫ್ ಲಕ್ಷ್ಮೀಕಾಂತ್ ತಿಳಿಸಿದ್ದಾರೆ.
ವೈಜ್ಞಾನಿಕ ಅಧ್ಯಯನದಂತೆ ಸೆನ್ನಾ ಮರದಿಂದ ಉದುರುವ ಎಲೆ ಗೊಬ್ಬರವಾಗುವುದಿಲ್ಲ. ಎಲೆ ಕರಗಿದ ಬಳಿಕ ರಾಸಾಯನಿಕ ಬದಲಾವಣೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಅಲ್ಲಿ ಯಾವುದೇ ಬೆಳೆ ಬೆಳೆಯಲು ಆಗದು. ಇದರಿಂದ ಆಹಾರ ಸರಪಳಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಲಂಟಾನ ಮತ್ತು ಸೆನ್ನಾ ಹುಲಿ ಸಂರಕ್ಷಿತ ಪ್ರದೇಶ ನಾಗರಹೊಳೆ, ಬಂಡೀಪುರಕ್ಕೆ ದೊಡ್ಡ ಪಿಡುಗಾಗಿವೆ. ಈವರೆಗೆ ೧,೩೦೦ ರಿಂದ ೧,೬೦೨ ಹೆಕ್ಟೇರ್ ಪ್ರದೇಶದಲ್ಲಿನ ಲಂಟಾನ ತೆರವುಗೊಳಿಸಿ, ಹುಲ್ಲು ಮತ್ತು ಬಿದಿರು ಬೆಳೆಸುವ ಪ್ರಕ್ರಿಯೆ ನಡೆದಿದೆ. ನಾಗರಹೊಳೆಯ ೮ ವಲಯಗಳಲ್ಲಿ ವಾರ್ಷಿಕವಾಗಿ ೫ ಹೆಕ್ಟೇರ್ ಪ್ರದೇಶದ ಲಂಟಾನ ತೆರವಿಗೆ ಇಲಾಖೆ ಮುಂದಾಗಿದೆ. ಈ ನಡುವೆ ಅಪಾಯಕಾರಿ ಸೆನ್ನಾ ಸಸ್ಯ ಪ್ರಭೇದ ದೊಡ್ಡ ಸವಾಲಾಗಿದೆ ಎಂದು ನಾಗರಹೊಳೆ ಹುಲಿ ಯೋಜ ನೆಯ ನಿರ್ದೇಶಕಿ ಸೀಮಾ ತಿಳಿಸಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…