Andolana originals

ನಾಗರಹೊಳೆ ಅರಣ್ಯಕ್ಕೆ ಕಂಟಕವಾಗಿರುವ ಸೆನ್ನಾ ಸಸ್ಯಪ್ರಭೇದ

ಹುಣಸೂರು: ರಾಷ್ಟ್ರೀಯ ಹುಲಿ ಸಂರಕ್ಷಿತ ಅಭಯಾರಣ್ಯ ನಾಗರಹೊಳೆ ನಿತ್ಯಹರಿದ್ವರ್ಣದಿಂದ ಕೂಡಿದ್ದರೂ ವರ್ಷದ ಎಲ್ಲ ಕಾಲದಲ್ಲೂ ಹಸಿರಾಗಿರುವ ಸೆನ್ನಾ ಸಸ್ಯ ಪ್ರಭೇದ ಅರಣ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದ್ದು, ವನ್ಯಜೀವಿಗಳ ಆಹಾರ ಸರಪಳಿಗೆ ಕಂಟಕವಾಗುವ ಆತಂಕ ಎದುರಾಗಿದೆ.

೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ನಾಗರಹೊಳೆ ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ಜೈವಿಕ ವೈವಿಧ್ಯ ಕೇಂದ್ರವಾಗಿದೆ. ಹಲವು ಪ್ರಾಣಿ, ಪಕ್ಷಿ ಮತ್ತು ಸಸ್ಯಗಳಿಗೆ ಆಶ್ರಯವಾಗಿರುವ ಅಭಯಾರಣ್ಯದಲ್ಲಿ ಸೆನ್ನಾ ಸಸ್ಯ ವರ್ಗ ವ್ಯಾಪಕವಾಗಿ ಹರಡಿ ಪ್ರಾಣಿಗಳಿಗೆ ಆಹಾರದ ಕೊರತೆ ಸೃಷ್ಟಿಸಿದ್ದು, ಅರಣ್ಯ ಇಲಾಖೆಯ ನಿದ್ದೆಗೆಡಿಸಿದೆ.

ಸೆನ್ನಾ ಲ್ಯಾಟಿನ್ ಅಮೆರಿಕದ ಗೃಹ ಆಲಂಕಾರಿಕ ಹಳದಿ ಹೂವು. ಇದು ಕೇರಳದ ವಯನಾಡು ಮೂಲಕ ನಾಗರಹೊಳೆಗೂ ವ್ಯಾಪಿಸಿದೆ. ಈ ಸಸ್ಯದ ಬೀಜ ಪ್ರಸರಣ ಗಾಳಿಯಲ್ಲಿ ಆಗು ವುದರಿಂದ ನಿಯಂತ್ರಣ ಕಷ್ಟವಾಗುತ್ತಿದ್ದು, ವಾರ್ಷಿಕವಾಗಿ ಪ್ರತಿ ಗಿಡ ೬ ಸಾವಿರ ಬೀಜ ಉತ್ಪತ್ತಿ ಮಾಡುವ ಸಾಮರ್ಥ್ಯ ಹೊಂದಿ ರುತ್ತದೆ. ತೇವಾಂಶ ಇರುವ ಸ್ಥಳದಲ್ಲಿ ವೇಗವಾಗಿ ಬೆಳೆಯುತ್ತದೆ ಎಂದು ನಾಗರಹೊಳೆ ಹುಲಿ ಯೋಜನೆಯ ಎಸಿಎಫ್ ಲಕ್ಷ್ಮೀಕಾಂತ್ ತಿಳಿಸಿದ್ದಾರೆ.

ವೈಜ್ಞಾನಿಕ ಅಧ್ಯಯನದಂತೆ ಸೆನ್ನಾ ಮರದಿಂದ ಉದುರುವ ಎಲೆ ಗೊಬ್ಬರವಾಗುವುದಿಲ್ಲ. ಎಲೆ ಕರಗಿದ ಬಳಿಕ ರಾಸಾಯನಿಕ ಬದಲಾವಣೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಅಲ್ಲಿ ಯಾವುದೇ ಬೆಳೆ ಬೆಳೆಯಲು ಆಗದು. ಇದರಿಂದ ಆಹಾರ ಸರಪಳಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಲಂಟಾನ ಮತ್ತು ಸೆನ್ನಾ ಹುಲಿ ಸಂರಕ್ಷಿತ ಪ್ರದೇಶ ನಾಗರಹೊಳೆ, ಬಂಡೀಪುರಕ್ಕೆ ದೊಡ್ಡ ಪಿಡುಗಾಗಿವೆ. ಈವರೆಗೆ ೧,೩೦೦ ರಿಂದ ೧,೬೦೨ ಹೆಕ್ಟೇರ್ ಪ್ರದೇಶದಲ್ಲಿನ ಲಂಟಾನ ತೆರವುಗೊಳಿಸಿ, ಹುಲ್ಲು ಮತ್ತು ಬಿದಿರು ಬೆಳೆಸುವ ಪ್ರಕ್ರಿಯೆ ನಡೆದಿದೆ. ನಾಗರಹೊಳೆಯ ೮ ವಲಯಗಳಲ್ಲಿ ವಾರ್ಷಿಕವಾಗಿ ೫ ಹೆಕ್ಟೇರ್ ಪ್ರದೇಶದ ಲಂಟಾನ ತೆರವಿಗೆ ಇಲಾಖೆ ಮುಂದಾಗಿದೆ. ಈ ನಡುವೆ ಅಪಾಯಕಾರಿ ಸೆನ್ನಾ ಸಸ್ಯ ಪ್ರಭೇದ ದೊಡ್ಡ ಸವಾಲಾಗಿದೆ ಎಂದು ನಾಗರಹೊಳೆ ಹುಲಿ ಯೋಜ ನೆಯ ನಿರ್ದೇಶಕಿ ಸೀಮಾ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

2 mins ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

7 mins ago

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

12 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

13 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

24 hours ago