ಹುಣಸೂರು: ರಾಷ್ಟ್ರೀಯ ಹುಲಿ ಸಂರಕ್ಷಿತ ಅಭಯಾರಣ್ಯ ನಾಗರಹೊಳೆ ನಿತ್ಯಹರಿದ್ವರ್ಣದಿಂದ ಕೂಡಿದ್ದರೂ ವರ್ಷದ ಎಲ್ಲ ಕಾಲದಲ್ಲೂ ಹಸಿರಾಗಿರುವ ಸೆನ್ನಾ ಸಸ್ಯ ಪ್ರಭೇದ ಅರಣ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದ್ದು, ವನ್ಯಜೀವಿಗಳ ಆಹಾರ ಸರಪಳಿಗೆ ಕಂಟಕವಾಗುವ ಆತಂಕ ಎದುರಾಗಿದೆ.
೮೪೮ ಚದರ ಕಿ.ಮೀ. ವ್ಯಾಪ್ತಿಯಲ್ಲಿ ಹರಡಿಕೊಂಡಿರುವ ನಾಗರಹೊಳೆ ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ಜೈವಿಕ ವೈವಿಧ್ಯ ಕೇಂದ್ರವಾಗಿದೆ. ಹಲವು ಪ್ರಾಣಿ, ಪಕ್ಷಿ ಮತ್ತು ಸಸ್ಯಗಳಿಗೆ ಆಶ್ರಯವಾಗಿರುವ ಅಭಯಾರಣ್ಯದಲ್ಲಿ ಸೆನ್ನಾ ಸಸ್ಯ ವರ್ಗ ವ್ಯಾಪಕವಾಗಿ ಹರಡಿ ಪ್ರಾಣಿಗಳಿಗೆ ಆಹಾರದ ಕೊರತೆ ಸೃಷ್ಟಿಸಿದ್ದು, ಅರಣ್ಯ ಇಲಾಖೆಯ ನಿದ್ದೆಗೆಡಿಸಿದೆ.
ಸೆನ್ನಾ ಲ್ಯಾಟಿನ್ ಅಮೆರಿಕದ ಗೃಹ ಆಲಂಕಾರಿಕ ಹಳದಿ ಹೂವು. ಇದು ಕೇರಳದ ವಯನಾಡು ಮೂಲಕ ನಾಗರಹೊಳೆಗೂ ವ್ಯಾಪಿಸಿದೆ. ಈ ಸಸ್ಯದ ಬೀಜ ಪ್ರಸರಣ ಗಾಳಿಯಲ್ಲಿ ಆಗು ವುದರಿಂದ ನಿಯಂತ್ರಣ ಕಷ್ಟವಾಗುತ್ತಿದ್ದು, ವಾರ್ಷಿಕವಾಗಿ ಪ್ರತಿ ಗಿಡ ೬ ಸಾವಿರ ಬೀಜ ಉತ್ಪತ್ತಿ ಮಾಡುವ ಸಾಮರ್ಥ್ಯ ಹೊಂದಿ ರುತ್ತದೆ. ತೇವಾಂಶ ಇರುವ ಸ್ಥಳದಲ್ಲಿ ವೇಗವಾಗಿ ಬೆಳೆಯುತ್ತದೆ ಎಂದು ನಾಗರಹೊಳೆ ಹುಲಿ ಯೋಜನೆಯ ಎಸಿಎಫ್ ಲಕ್ಷ್ಮೀಕಾಂತ್ ತಿಳಿಸಿದ್ದಾರೆ.
ವೈಜ್ಞಾನಿಕ ಅಧ್ಯಯನದಂತೆ ಸೆನ್ನಾ ಮರದಿಂದ ಉದುರುವ ಎಲೆ ಗೊಬ್ಬರವಾಗುವುದಿಲ್ಲ. ಎಲೆ ಕರಗಿದ ಬಳಿಕ ರಾಸಾಯನಿಕ ಬದಲಾವಣೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಅಲ್ಲಿ ಯಾವುದೇ ಬೆಳೆ ಬೆಳೆಯಲು ಆಗದು. ಇದರಿಂದ ಆಹಾರ ಸರಪಳಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಲಂಟಾನ ಮತ್ತು ಸೆನ್ನಾ ಹುಲಿ ಸಂರಕ್ಷಿತ ಪ್ರದೇಶ ನಾಗರಹೊಳೆ, ಬಂಡೀಪುರಕ್ಕೆ ದೊಡ್ಡ ಪಿಡುಗಾಗಿವೆ. ಈವರೆಗೆ ೧,೩೦೦ ರಿಂದ ೧,೬೦೨ ಹೆಕ್ಟೇರ್ ಪ್ರದೇಶದಲ್ಲಿನ ಲಂಟಾನ ತೆರವುಗೊಳಿಸಿ, ಹುಲ್ಲು ಮತ್ತು ಬಿದಿರು ಬೆಳೆಸುವ ಪ್ರಕ್ರಿಯೆ ನಡೆದಿದೆ. ನಾಗರಹೊಳೆಯ ೮ ವಲಯಗಳಲ್ಲಿ ವಾರ್ಷಿಕವಾಗಿ ೫ ಹೆಕ್ಟೇರ್ ಪ್ರದೇಶದ ಲಂಟಾನ ತೆರವಿಗೆ ಇಲಾಖೆ ಮುಂದಾಗಿದೆ. ಈ ನಡುವೆ ಅಪಾಯಕಾರಿ ಸೆನ್ನಾ ಸಸ್ಯ ಪ್ರಭೇದ ದೊಡ್ಡ ಸವಾಲಾಗಿದೆ ಎಂದು ನಾಗರಹೊಳೆ ಹುಲಿ ಯೋಜ ನೆಯ ನಿರ್ದೇಶಕಿ ಸೀಮಾ ತಿಳಿಸಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…