Andolana originals

ವಿಶೇಷಚೇತನರಿಗೆ ಪ್ರತ್ಯೇಕ ಕಾಲೋನಿ; ಕನಸಿನ ಸೂರು ಸನಿಹ

ಅನುಚೇತನ್ ಕೆ.ಎಂ.

ದಡದಹಳ್ಳಿ ಭಾಗದಲ್ಲಿ ಸ್ಥಳ ಪರಿಶೀಲನೆ; ಯೋಜನೆಗೆ ನಾಲ್ಕು ಎಕರೆ ಭೂಮಿ ಗುರುತು  ವಿಶೇಷಚೇತನರಿಗೆ ಯೋಜನೆಯ ಸೌಲಭ್ಯ 

ಮೈಸೂರು: ಎಲ್ಲರಿಗೂ ಸ್ವಂತ ಮನೆ ಹೊಂದಬೇಕೆಂಬ ಆಸೆ ಇರುತ್ತದೆ. ಇಂತಹ ಆಸೆಯೊಂದಿಗೆ ಹಲವು ವರ್ಷಗಳಿಂದ ಸ್ವಂತ ಸೂರಿಗಾಗಿ ಪರಿತಪಿಸಿ, ಹೋರಾಟಕ್ಕಿಳಿದು ಪ್ರತಿಭಟಿಸಿ ಬಸವಳಿದಿದ್ದ ವಿಶೇಷಚೇತನರಿಗೆ ನೆರಳಾಗಲು ಮುಂದಾಗಿರುವ ಜಿಲ್ಲಾಡಳಿತ ಇದೀಗ ಪ್ರತ್ಯೇಕ ಕಾಲೋನಿ ನಿರ್ಮಾಣ ಮಾಡಲು ಸ್ಥಳ ಪರಿಶೀಲನೆ ನಡೆಸುತ್ತಿದ್ದು, ದಡದಹಳ್ಳಿಯಲ್ಲಿ ನಾಲ್ಕು ಎಕರೆ ಭೂಮಿಯನ್ನು ಗುರುತಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಜ್ಜಾಗಿದೆ.

ಒಂದು ವರ್ಷದ ಹಿಂದೆ ನಡೆದಿದ್ದ ವಿಶೇಷಚೇತನರ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಿದ್ದ ವಿಶೇಷ ಚೇತನರು ತಮಗೆ ಸ್ವಂತ ಸೂರು ಕಲ್ಪಿಸಿಕೊಡಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಇದಕ್ಕೆ ಜಿಲ್ಲಾಡಳಿತ ಸ್ಪಂದಿಸಿತ್ತು. ಅದರಂತೆ ಹಿಂದೆ ಇದ್ದ ಜಿಲ್ಲಾಧಿಕಾರಿಗಳು ಸಭೆ ನಡೆಸಿ ನಗರದ ಸುತ್ತಮುತ್ತ ೧೦ ಕಿ.ಮೀ. ವ್ಯಾಪ್ತಿಯಲ್ಲಿ ೨-೩ ಎಕರೆ ಜಾಗದಲ್ಲಿ ವಿಶೇಷಚೇತನರಿಗೆ ಪ್ರತ್ಯೇಕ ಬಡಾವಣೆ ನಿರ್ಮಿಸಲು ತೀರ್ಮಾನಿಸಿದ್ದರು. ಇದೀಗ ಜಿಲ್ಲಾ ಡಳಿತ ಸ್ಥಳ ಪರಿಶೀಲನೆಯ ಜವಾಬ್ದಾರಿಯನ್ನು ತಹಸಿಲ್ದಾರರಿಗೆ ವಹಿಸಿದ್ದು, ನಗರದ ದಡದಹಳ್ಳಿ ಭಾಗದಲ್ಲಿ ಸರ್ವೆ ನಂಬರ್ ೬೬ರಲ್ಲಿ ಸ್ಥಳ ಗುರುತಿಸಲಾಗಿದೆ. ಈ ಬಗ್ಗೆ ಸದ್ಯದಲ್ಲೇ ಉಪ ವಿಭಾಗಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುತ್ತದೆ. ಜಿಲ್ಲಾಧಿಕಾರಿಗಳು ವರದಿ ಪರಿಶೀಲಿಸಿದ ನಂತರ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲಾಗುತ್ತದೆ.

ನಿರಾಶ್ರಿತರು, ಬಡವರಿಗೆ ಸೂರಿನ ಸೌಲಭ್ಯ: ವಿಶೇಷಚೇತನರಲ್ಲಿ ಹೆಚ್ಚಿನವರು ನಗರದ ಭಾಗದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು ಜೀವನ ನಿರ್ವಹಣೆ ಮಾಡಲು ಕಷ್ಟಪಡುತ್ತಿದ್ದಾರೆ. ಸರ್ಕಾರದಿಂದ ಸರಿಯಾದ ರೀತಿಯಲ್ಲಿ ಸಾಲ ಸೌಲಭ್ಯವಾಗಲಿ, ಉದ್ಯೋಗವಾಗಲಿ, ಇತರ ಯೋಜನೆಗಳ ಸೌಲಭ್ಯಗಳು ದೊರೆಯದೆ ಬದುಕು ಸಾಗಿಸಲು ಹರ ಸಾಹಸ ಪಡುತ್ತಿದ್ದಾರೆ. ಕೆಲವರಂತೂ ಎಲ್ಲೂ ಉದ್ಯೋಗ ಸಿಗದೆ ಭಿಕ್ಷಾಟನೆಯಲ್ಲಿ ತೊಡಗಿಕೊಂಡು ಜೀವನ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ೨೦೧೧ರ ಜನಗಣತಿ ಪ್ರಕಾರ ೪೪,೦೯೪ ಜನ ವಿಶೇಷಚೇತನರಿದ್ದಾರೆಂದು ಗುರುತಿಸಲಾಗಿತ್ತು. ಪ್ರಸ್ತುತ ಸರ್ಕಾರಗಳ ಅಂದಾಜಿನ ಪ್ರಕಾರ ಜಿಲ್ಲೆಯಲ್ಲಿ ೭೦ ಸಾವಿರಕ್ಕೂ ಹೆಚ್ಚು ವಿಶೇಷಚೇತನರಿದ್ದು ನಗರ ಭಾಗದಲ್ಲೇ ೧೫ ಸಾವಿರಕ್ಕೂ ಹೆಚ್ಚಿನ ವಿಶೇಷಚೇತನರಿದ್ದಾರೆಂದು ಅಂದಾಜಿಸಲಾಗಿದೆ. ಈ ಯೋಜನೆಯನ್ನು ನಗರ ಭಾಗದ ವಿಶೇಷಚೇತನರನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದ್ದು, ಅರ್ಹರಿಗೆ ಸೂರು ನೀಡಲು ಯೋಜನೆ ಅನುಷ್ಠಾನಗೊಳಿಸಲು, ಜಿಲ್ಲಾಡಳಿತ ತೀರ್ಮಾನಿಸಿದೆ. ಇದರಿಂದಾಗಿ ಬಡವರು ಹಾಗೂ ನಿರಾಶ್ರಿತರು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.

೧೯೮೩ರಲ್ಲಿ ಮನೆ ನಿರ್ಮಿಸಿಕೊಡಲಾಗಿತ್ತು: ಸರ್ಕಾರ ಈ ಹಿಂದೆ ೧೯೮೩-೮೪ನೇ ಸಾಲಿನಲ್ಲಿ ಇಂತಹದ್ದೇ ಯೋಜನೆಯನ್ನು ರೂಪಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿಶೇಷಚೇತನರಿಗಾಗಿ ನಗರದ ಎನ್.ಆರ್.ಮೊಹಲ್ಲಾದಲ್ಲಿ ಪ್ರತ್ಯೇಕವಾಗಿ ಮನೆಗಳನ್ನು ನಿರ್ಮಿಸಿ ವಿತರಿಸಲಾಗಿತ್ತು. ಅಲ್ಲಿಂದ ಇಲ್ಲಿಯ ವರೆಗೆ ಯಾವುದೇ ರೀತಿಯ ಯೋಜನೆಗಳನ್ನು ರೂಪಿಸಿರಲಿಲ್ಲ. ೨೦ ವರ್ಷಗಳ ವಿಶೇಷಚೇತನರ ಹೋರಾಟದಿಂದ ಮತ್ತೊಮ್ಮೆ ಅಂದಿನ ಮಾದರಿಯಲ್ಲೇ ವಿಶೇಷಚೇತನರಿಗೆ ಸೂರು ಕಲ್ಪಿಸಲು ಮುಂದಾಗಿರುವುದು ಸಂತಸ ತಂದಿದೆ ಎಂದು ಕರ್ನಾಟಕ ರಾಜ್ಯ ವಿಶೇಷಚೇತನರ ವೇದಿಕೆ ರಾಜ್ಯ ಸಂಚಾಲಕ ಎಂ.ಪ್ರಭುಸ್ವಾಮಿ ತಿಳಿಸಿದ್ದಾರೆ.

” ಹಡಜನದಲ್ಲಿ ಸ್ಥಳ ಕೇಳಲಾಗಿತ್ತು. ಸದ್ಯ ಜಿಲ್ಲಾಡಳಿತ ದಡದಹಳ್ಳಿ ಭಾಗದಲ್ಲಿ ಸ್ಥಳ ಪರಿಶೀಲನೆ ಮಾಡಿದೆ. ಇದರಿಂದ ಹಲವು ವಿಶೇಷಚೇತನರಿಗೆ ಅನುಕೂಲವಾಗಲಿದೆ. ಅರ್ಹ ಪಲಾನುಭವಿಗಳಿಗೆ ಈ ಯೋಜನೆಯ ಅನುಕೂಲ ದೊರಯಬೇಕು. ಹಂತ ಹಂತವಾಗಿ ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸಲಿ. ಇದರ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾಡಳಿತ ವಹಿಸಬೇಕು.”

– ಎಂ.ಪ್ರಭುಸ್ವಾಮಿ, ರಾಜ್ಯಸಂಚಾಲಕಕರ್ನಾಟಕ ರಾಜ್ಯ ವಿಶೇಷಚೇತನರ ವೇದಿಕೆ.

” ದಡದಹಳ್ಳಿಯಲ್ಲಿ ಸರ್ವೆ ನಂಬರ್ ೬೬ರಲ್ಲಿ ನಾಲ್ಕು ಎಕರೆ ಭೂಮಿ ಗುರುತಿಸಿ ನಕ್ಷೆ ಸಿದ್ಧಪಡಿಸಲಾಗಿದೆ. ಸದ್ಯದಲ್ಲೇ ಉಪವಿಭಾಗೀಯ ಅಧಿಕಾರಿಗಳಿಗೆ ವರದಿ ಸಲ್ಲಿಸಲಿದ್ದೇವೆ. ನಂತರ ಜಿಲ್ಲಾಧಿಕಾರಿಗಳು ವರದಿ ಪರಿಶೀಲಿಸಿ, ಮಹಾನಗರಪಾಲಿಕೆ ಮೂಲಕ ಯೋಜನೆ ಕಾರ್ಯರೂಪಕ್ಕೆ ಬರಲಿದೆ.”

ಮಹೇಶ್ ಕುಮಾರ್, ತಹಸಿಲ್ದಾರ್

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

10 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

10 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

10 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

10 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

10 hours ago