Andolana originals

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು

ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ ಆರು ಮನೆಗಳಲ್ಲಿ ಬುಧವಾರ ತಡರಾತ್ರಿ ಸರಣಿಗಳ್ಳತನ ನಡೆದಿದ್ದು, ನಾಗರಿಕರು ಆತಂಕಗೊಂಡಿದ್ದಾರೆ.

ಬುಧವಾರ ರಾತ್ರಿ ನಡೆದ ಕಳ್ಳತನ ಗುರುವಾರ ಮುಂಜಾನೆ ಬೆಳಕಿಗೆ ಬಂದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಮೇಲುಕೋಟೆ ಒಕ್ಕಲಿಗರ ಬೀದಿಯಲ್ಲಿ ಬೀಗಹಾಕಿರುವ ಮನೆಗಳನ್ನೇ ಗುರಿ ಮಾಡಿರುವ ಕಳ್ಳರು ಮುಂಬಾಗಿಲಿನ ಬೀಗ ಒಡೆದು ಒಳನುಗ್ಗಿ,ಬೀರುಗಳನ್ನು ಒಡೆದು ಲಾಕರ್ ತೆರೆದು ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ.

ಮನೆಗಳ ಲಾಕರ್‌ನಲ್ಲಿದ್ದ ಚಿನ್ನಾಭರಣ, ದಾಖಲೆ ಗಳನ್ನು ಚೀಲದಲ್ಲಿ ತುಂಬಿಕೊಂಡು ಹೋಗಿ ಪಾಳು ಮನೆಯೊಂದರ ಬಳಿ ಪರಿಶೀಲಿಸಿರುವ ಕಳ್ಳರು, ಬೆಲೆಬಾಳುವ ವಸ್ತಗಳನ್ನು ಮಾತ್ರ ದೋಚಿ ದಾಖಲೆಗಳನ್ನು ಬಿಸಾಡಿ ಹೋಗಿದ್ದಾರೆ. ಮೇಲು ಕೋಟೆಯ ಒಕ್ಕಲಿಗರ ಬೀದಿ ರೈತಭವನದ ಪಕ್ಕದ ಲೇ. ತಮ್ಮಣ್ಣೇಗೌಡರ ಪತ್ನಿ ಕೆಂಪಮ್ಮ, ನಂಜುಂಡೇಗೌಡ ಎಂಬವರ ಮಗ ಈರೇಗೌಡ, ಲೀಲಾವತಿ, ಸವಿತಾ ಸಮಾಜದ ಬೀದಿಯ ಮರಿಯಮ್ಮ, ಮೂಡಲಬಾಗಿಲು ರುಕ್ಷಿಣಿ, ಬಸವರಾಜು ಎಂಬವರ ಮನೆಗಳಲ್ಲಿ ಸರಣಿ ಕಳ್ಳತನವಾಗಿದೆ.

ಚಿನ್ನ ಬೆಳ್ಳಿ ನಗದು ಸೇರಿದಂತೆ ಸಾವಿರಾರು ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು,ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಪಮ್ಮ ಎಂಬವರು ಕುರಿಯನ್ನು ಮಾರಾಟ ಮಾಡಿ ಮನೆಯಲ್ಲಿಟ್ಟಿದ್ದ ೩೫ ಸಾವಿರ ರೂ. ನಗದು, ಒಂದು ಚಿನ್ನದ ಉಂಗುರ, ಸಣ್ಣಪುಟ್ಟ ಆಭರಣಗಳು, ಮೂಡಲಬಾಗಿಲ ರುಕ್ಮಿಣಿ ಎಂಬವರ ಮನೆಯಲ್ಲಿ ೧೦ ಸಾವಿರ ರೂ. ನಗದು ಹಾಗೂ ೨೦ ಸಾವಿರ ರೂ. ಮೌಲ್ಯದ ಬೆಳ್ಳಿ ಸಾಮಗ್ರಿ ಕಳವಾಗಿವೆ. ಮೇಲುಕೋಟೆಯಲ್ಲಿ ಪೊಲೀಸ್ ಬೀಟ್ ಹೆಚ್ಚಿಸಿ ಆತಂಕ ದೂರಮಾಡಬೇಕೆಂದು ನಾಗರಿಕರು ಕೋರಿದ್ದಾರೆ. ಚೆಲುವನಾರಾಯಣಸ್ವಾಮಿ ಮತ್ತು ಯೋಗನರಸಿಂಹಸ್ವಾಮಿ ದೇವಾಲಯಗಳಿಗೆ ರಾತ್ರಿಯ ವೇಳೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

 

andolana

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

1 hour ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

13 hours ago

ಜಾತಿ ಜನಗಣತಿ ವರದಿ ಜಾರಿಗೊಳಿಸಿ: ವೆಂಕಟಗಿರಿಯಯ್ಯ ಒತ್ತಾಯ

ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ…

13 hours ago