Andolana originals

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು

ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ ಆರು ಮನೆಗಳಲ್ಲಿ ಬುಧವಾರ ತಡರಾತ್ರಿ ಸರಣಿಗಳ್ಳತನ ನಡೆದಿದ್ದು, ನಾಗರಿಕರು ಆತಂಕಗೊಂಡಿದ್ದಾರೆ.

ಬುಧವಾರ ರಾತ್ರಿ ನಡೆದ ಕಳ್ಳತನ ಗುರುವಾರ ಮುಂಜಾನೆ ಬೆಳಕಿಗೆ ಬಂದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಮೇಲುಕೋಟೆ ಒಕ್ಕಲಿಗರ ಬೀದಿಯಲ್ಲಿ ಬೀಗಹಾಕಿರುವ ಮನೆಗಳನ್ನೇ ಗುರಿ ಮಾಡಿರುವ ಕಳ್ಳರು ಮುಂಬಾಗಿಲಿನ ಬೀಗ ಒಡೆದು ಒಳನುಗ್ಗಿ,ಬೀರುಗಳನ್ನು ಒಡೆದು ಲಾಕರ್ ತೆರೆದು ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ.

ಮನೆಗಳ ಲಾಕರ್‌ನಲ್ಲಿದ್ದ ಚಿನ್ನಾಭರಣ, ದಾಖಲೆ ಗಳನ್ನು ಚೀಲದಲ್ಲಿ ತುಂಬಿಕೊಂಡು ಹೋಗಿ ಪಾಳು ಮನೆಯೊಂದರ ಬಳಿ ಪರಿಶೀಲಿಸಿರುವ ಕಳ್ಳರು, ಬೆಲೆಬಾಳುವ ವಸ್ತಗಳನ್ನು ಮಾತ್ರ ದೋಚಿ ದಾಖಲೆಗಳನ್ನು ಬಿಸಾಡಿ ಹೋಗಿದ್ದಾರೆ. ಮೇಲು ಕೋಟೆಯ ಒಕ್ಕಲಿಗರ ಬೀದಿ ರೈತಭವನದ ಪಕ್ಕದ ಲೇ. ತಮ್ಮಣ್ಣೇಗೌಡರ ಪತ್ನಿ ಕೆಂಪಮ್ಮ, ನಂಜುಂಡೇಗೌಡ ಎಂಬವರ ಮಗ ಈರೇಗೌಡ, ಲೀಲಾವತಿ, ಸವಿತಾ ಸಮಾಜದ ಬೀದಿಯ ಮರಿಯಮ್ಮ, ಮೂಡಲಬಾಗಿಲು ರುಕ್ಷಿಣಿ, ಬಸವರಾಜು ಎಂಬವರ ಮನೆಗಳಲ್ಲಿ ಸರಣಿ ಕಳ್ಳತನವಾಗಿದೆ.

ಚಿನ್ನ ಬೆಳ್ಳಿ ನಗದು ಸೇರಿದಂತೆ ಸಾವಿರಾರು ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು,ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಪಮ್ಮ ಎಂಬವರು ಕುರಿಯನ್ನು ಮಾರಾಟ ಮಾಡಿ ಮನೆಯಲ್ಲಿಟ್ಟಿದ್ದ ೩೫ ಸಾವಿರ ರೂ. ನಗದು, ಒಂದು ಚಿನ್ನದ ಉಂಗುರ, ಸಣ್ಣಪುಟ್ಟ ಆಭರಣಗಳು, ಮೂಡಲಬಾಗಿಲ ರುಕ್ಮಿಣಿ ಎಂಬವರ ಮನೆಯಲ್ಲಿ ೧೦ ಸಾವಿರ ರೂ. ನಗದು ಹಾಗೂ ೨೦ ಸಾವಿರ ರೂ. ಮೌಲ್ಯದ ಬೆಳ್ಳಿ ಸಾಮಗ್ರಿ ಕಳವಾಗಿವೆ. ಮೇಲುಕೋಟೆಯಲ್ಲಿ ಪೊಲೀಸ್ ಬೀಟ್ ಹೆಚ್ಚಿಸಿ ಆತಂಕ ದೂರಮಾಡಬೇಕೆಂದು ನಾಗರಿಕರು ಕೋರಿದ್ದಾರೆ. ಚೆಲುವನಾರಾಯಣಸ್ವಾಮಿ ಮತ್ತು ಯೋಗನರಸಿಂಹಸ್ವಾಮಿ ದೇವಾಲಯಗಳಿಗೆ ರಾತ್ರಿಯ ವೇಳೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

 

andolana

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago