Andolana originals

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು

ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ ಆರು ಮನೆಗಳಲ್ಲಿ ಬುಧವಾರ ತಡರಾತ್ರಿ ಸರಣಿಗಳ್ಳತನ ನಡೆದಿದ್ದು, ನಾಗರಿಕರು ಆತಂಕಗೊಂಡಿದ್ದಾರೆ.

ಬುಧವಾರ ರಾತ್ರಿ ನಡೆದ ಕಳ್ಳತನ ಗುರುವಾರ ಮುಂಜಾನೆ ಬೆಳಕಿಗೆ ಬಂದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಮೇಲುಕೋಟೆ ಒಕ್ಕಲಿಗರ ಬೀದಿಯಲ್ಲಿ ಬೀಗಹಾಕಿರುವ ಮನೆಗಳನ್ನೇ ಗುರಿ ಮಾಡಿರುವ ಕಳ್ಳರು ಮುಂಬಾಗಿಲಿನ ಬೀಗ ಒಡೆದು ಒಳನುಗ್ಗಿ,ಬೀರುಗಳನ್ನು ಒಡೆದು ಲಾಕರ್ ತೆರೆದು ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ.

ಮನೆಗಳ ಲಾಕರ್‌ನಲ್ಲಿದ್ದ ಚಿನ್ನಾಭರಣ, ದಾಖಲೆ ಗಳನ್ನು ಚೀಲದಲ್ಲಿ ತುಂಬಿಕೊಂಡು ಹೋಗಿ ಪಾಳು ಮನೆಯೊಂದರ ಬಳಿ ಪರಿಶೀಲಿಸಿರುವ ಕಳ್ಳರು, ಬೆಲೆಬಾಳುವ ವಸ್ತಗಳನ್ನು ಮಾತ್ರ ದೋಚಿ ದಾಖಲೆಗಳನ್ನು ಬಿಸಾಡಿ ಹೋಗಿದ್ದಾರೆ. ಮೇಲು ಕೋಟೆಯ ಒಕ್ಕಲಿಗರ ಬೀದಿ ರೈತಭವನದ ಪಕ್ಕದ ಲೇ. ತಮ್ಮಣ್ಣೇಗೌಡರ ಪತ್ನಿ ಕೆಂಪಮ್ಮ, ನಂಜುಂಡೇಗೌಡ ಎಂಬವರ ಮಗ ಈರೇಗೌಡ, ಲೀಲಾವತಿ, ಸವಿತಾ ಸಮಾಜದ ಬೀದಿಯ ಮರಿಯಮ್ಮ, ಮೂಡಲಬಾಗಿಲು ರುಕ್ಷಿಣಿ, ಬಸವರಾಜು ಎಂಬವರ ಮನೆಗಳಲ್ಲಿ ಸರಣಿ ಕಳ್ಳತನವಾಗಿದೆ.

ಚಿನ್ನ ಬೆಳ್ಳಿ ನಗದು ಸೇರಿದಂತೆ ಸಾವಿರಾರು ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿದ್ದು,ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಪಮ್ಮ ಎಂಬವರು ಕುರಿಯನ್ನು ಮಾರಾಟ ಮಾಡಿ ಮನೆಯಲ್ಲಿಟ್ಟಿದ್ದ ೩೫ ಸಾವಿರ ರೂ. ನಗದು, ಒಂದು ಚಿನ್ನದ ಉಂಗುರ, ಸಣ್ಣಪುಟ್ಟ ಆಭರಣಗಳು, ಮೂಡಲಬಾಗಿಲ ರುಕ್ಮಿಣಿ ಎಂಬವರ ಮನೆಯಲ್ಲಿ ೧೦ ಸಾವಿರ ರೂ. ನಗದು ಹಾಗೂ ೨೦ ಸಾವಿರ ರೂ. ಮೌಲ್ಯದ ಬೆಳ್ಳಿ ಸಾಮಗ್ರಿ ಕಳವಾಗಿವೆ. ಮೇಲುಕೋಟೆಯಲ್ಲಿ ಪೊಲೀಸ್ ಬೀಟ್ ಹೆಚ್ಚಿಸಿ ಆತಂಕ ದೂರಮಾಡಬೇಕೆಂದು ನಾಗರಿಕರು ಕೋರಿದ್ದಾರೆ. ಚೆಲುವನಾರಾಯಣಸ್ವಾಮಿ ಮತ್ತು ಯೋಗನರಸಿಂಹಸ್ವಾಮಿ ದೇವಾಲಯಗಳಿಗೆ ರಾತ್ರಿಯ ವೇಳೆ ಹೆಚ್ಚಿನ ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

 

andolana

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

12 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

12 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

14 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

14 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

14 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

15 hours ago