Andolana originals

ಕಡತ ವಿಲೇವಾರಿಗೆ ಸರ್ವರ್‌ ಕಂಟಕ

ಸ್ಥಳೀಯ ಸಂಸ್ಥೆಗಳಲ್ಲಿ ಬಾಕಿ ಇರುವ ಕಡತಗಳು; ಸಾರ್ವಜನಿಕರ ಅಲೆದಾಟ

ಎಚ್.ಎಸ್.ದಿನೇಶ್‌ಕುಮಾರ್

ಮೈಸೂರು: ಕಡತಗಳ ವಿಲೇವಾರಿ ವಿಳಂಬವಾಗುತ್ತಿದೆ ಎಂಬ ದೂರಿನ ಮೇರೆಗೆ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವಲಯ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದರು.

ಇದರಿಂದ ಎಚ್ಚೆತ್ತ ಅಧಿಕಾರಿಗಳು ಕಡತ ವಿಲೇವಾರಿಗೆ ಮುಂದಾಗಿದ್ದರೂ ಕಡತಗಳ ವಿಲೇ ವಾರಿಗೆ ಈಗ ಸರ್ವರ್ ಸಮಸ್ಯೆ ಕಂಟಕವಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಜನರ ಕೆಲಸಗಳು ತಡವಾಗುತ್ತಿವೆ ಎಂಬ ಹತ್ತಾರು ದೂರುಗಳು ಲೋಕಾಯುಕ್ತ ಕಚೇರಿಗೆ ಬಂದಿದ್ದವು. ಈ ಆಧಾರದ ಮೇಲೆ ಕಳೆದ ವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ದಾಳಿ ವೇಳೆ ಕೆಲ ಪಟ್ಟಣ ಪಂಚಾಯಿತಿಗಳಲ್ಲಿ ಸಾವಿರಾರು ಕಡತಗಳು ವಿಲೇವಾರಿ ಆಗದೆ ಉಳಿದಿರುವುದು ಪತ್ತೆಯಾಗಿತ್ತು. ನಗರ ಪಾಲಿಕೆಯ ವಲಯ ಕಚೇರಿಗಳಲ್ಲಿ ಕೂಡ ೫೦೦ರಿಂದ ೬೦೦ ಕಡತಗಳು ವಿಲೇವಾರಿಯಾಗದೆ ಇದ್ದುದು ಕೂಡ ಪರಿಶೀಲನೆ ವೇಳೆ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ನಂತರ ಲೋಕಾಯುಕ್ತ ಪೊಲೀಸರ ದಾಳಿಗೆ ಬೆದರಿದ್ದ ಅಧಿಕಾರಿಗಳು ಕಡತಗಳ ವಿಲೇವಾರಿಗೆ ಮುಂದಾಗಿದ್ದರು.

ಎಲ್ಲ ಕಡತಗಳ ಪರಿಶೀಲನೆ ಕೂಡ ಆರಂಭಿಸಿದ್ದರು. ಆದರೆ, ಅವರ ಕೆಲಸಕ್ಕೆ ಇದೀಗ ಅಡ್ಡಿಯಾಗುತ್ತಿರುವುದು ಇಲಾಖೆಯ ತಂತ್ರಾಂಶ ವ್ಯವಸ್ಥೆ. ರಾಜ್ಯಾದ್ಯಂತ ಕಂದಾಯ ಹಾಗೂ ನಗರಾಭಿವೃದ್ಧಿ ಇಲಾಖೆಯ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ ಎದುರಾಗಿದೆ. ದಿನದಲ್ಲಿ ಕೇವಲ ಅರ್ಧ ಗಂಟೆ ಮಾತ್ರ ಸರ್ವರ್ ಸಿಗುತ್ತಿದೆ ಎನ್ನಲಾಗಿದೆ. ಹೀಗಾಗಿ ಸಾರ್ವಜನಿಕರ ಕೆಲಸ ಮಾಡುವ ಉತ್ಸಾಹ ಅಧಿಕಾರಿಗಳಲ್ಲಿದ್ದರೂ ಸರ್ವರ್ ಸಮಸ್ಯೆಯ ಕಾರಣದಿಂದ ಆಗುತ್ತಿಲ್ಲ. ಇದರಿಂದಾಗಿ ಇ-ಖಾತಾ, ಇ-ಸ್ವತ್ತು ಸೇರಿದಂತೆ ಯಾವುದೇ ದಾಖಲೆಗಳನ್ನು ನೀಡುವ ಕಾರ್ಯವೂ ಆಗುತ್ತಿಲ್ಲ.

ನೋಂದಣಿಗೂ ತೊಂದರೆ: ಯಾವುದೇ ಆಸ್ತಿಯನ್ನು ಖರೀದಿಸ ಬೇಕಾದಲ್ಲಿ ಇದೀಗ ಇ-ಖಾತೆ ಬಹಳ ಮುಖ್ಯ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಖಾತೆ ಮಾಡಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಕೂಡ ವಿಳಂಬವಾಗುತ್ತಿದೆ.

ಇನ್ನೂ ನಾಲ್ಕು ದಿನ ಸಮಸ್ಯೆ: ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹೇಳುವಂತೆ ಸರ್ವರ್ ಸಮಸ್ಯೆ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ. ಇದು ರಾಜ್ಯಮಟ್ಟದ ಸಮಸ್ಯೆಯಾಗಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ಸರ್ವರ್ ಸಮಸ್ಯೆ ಸರಿಯಾಗಲಿದೆ ಎನ್ನುತ್ತಾರೆ. ಲೋಕಾಯುಕ್ತ ಪೊಲೀಸರ ದಾಳಿಯ ನಂತರ ಬಾಕಿ ಇರುವ ಕಡತಗಳನ್ನು ವಿಲೇವಾರಿಗೆ ನಾವುಗಳು ಮುಂದಾಗಿದ್ದೆವು. ಅಷ್ಟರಲ್ಲಿ ಸರ್ವರ್ ಸಮಸ್ಯೆ ಎದುರಾಗಿದೆ. ಇದರಿಂದ ನಮ್ಮ ಕೆಲಸಕ್ಕೆ ಅಡ್ಡಿಯಾಗಿದೆ. ಸಮಸ್ಯೆ ಬಗೆಹರಿದಲ್ಲಿ ಮುಂದಿನ ಒಂದು ವಾರದ ಒಳಗೆ ಎಲ್ಲಾಕಡತಗಳ ವಿಲೇವಾರಿ ಮಾಡುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಇಲಾಖೆಯ ಒಳಗಿನ ಸಮಸ್ಯೆ ಜನರಿಗೆ ಗೊತ್ತಾಗುವುದಿಲ್ಲ. ಲೋಕಾದಾಳಿಯ ನಂತರ ನಮ್ಮ ಕೆಲಸವನ್ನು ಬೇಗ ಮಾಡಿಕೊಡಿ ಎಂದು ಸಾರ್ವಜನಿಕರು ಒತ್ತಾಯಿಸುತ್ತಾರೆ. ಸರ್ವರ್ ಸಮಸ್ಯೆಯನ್ನು ಹೇಳಿದರೂ ಅವರುಗಳು ಕೇಳುವ ಸ್ಥಿತಿಯಲ್ಲಿ ಇಲ್ಲ. ಇದಕ್ಕಾಗಿ ಸರ್ವರ್ ಸಮಸ್ಯೆ ಇದೆ ಎಂದು ಫಲಕ ಹಾಕಲಾಗಿದೆ.

ಕೆಲ ಪತ್ರಿಕೆಗಳಲ್ಲಿ ಇದು ಲಂಚದ ಬೇಡಿಕೆಯ ಸ್ವರೂಪ ಎಂದು ವರದಿ ಮಾಡಿದ್ದಾರೆ. ಜನರು ಇದನ್ನೇ ಮುಂದಿಟ್ಟುಕೊಂಡು ಗಲಾಟೆ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಸರ್ವರ್ ಸಮಸ್ಯೆ ಇಲ್ಲದಿದ್ದರೂ ಫಲಕ ಹಾಕಲು ಹೇಗೆ ಸಾಧ್ಯ ಎಂಬುದನ್ನು ಸಾರ್ವಜನಿಕರೂ ಅರಿತುಕೊಳ್ಳಬೇಕು ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿ ಹೇಳಿದರು

” ಕಳೆದ ಕೆಲ ದಿನಗಳಿಂದ ಮೈಸೂರು ಮಾತ್ರವ ಲ್ಲದೆ ರಾಜ್ಯಾದ್ಯಂತ ಸರ್ವರ್‌ನ ಬ್ಯಾಕಪ್ ಸಮಸ್ಯೆ ಇದೆ. ಈ ಸಂಬಂಧ ನಾವು ಕೂಡ ಇಲಾಖೆಗೆ ಮಾಹಿತಿ ನೀಡಿದ್ದೇವೆ. ಮುಂದಿನ ೩ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ.”

-ಪ್ರಿಯದರ್ಶಿನಿ, ಯೋಜನಾಧಿಕಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶ

” ಆಸ್ತಿ ಮಾರಾಟಕ್ಕಾಗಿ ಅಮೆರಿಕಾದಿಂದ ಬಂದಿದ್ದೇನೆ. ನಗರಪಾಲಿಕೆಯ ವಲಯ ಕಚೇರಿಯಲ್ಲಿ ನನ್ನ ತೆರಿಗೆ ಹಣ ಪಾವತಿಯ ಅಪ್‌ಡೇಟ್ ಆಗಬೇಕಿತ್ತು. ಕಳೆದ ಮೂರು ದಿನಗಳಿಂದ ವಲಯ ಕಚೇರಿಗೆ ಅಲೆಯುತ್ತಿದ್ದೇನೆ. ಸರ್ವರ್ ಸಮಸ್ಯೆ ಕಾರಣದಿಂದಾಗಿ ಕೆಲಸವಾಗುತ್ತಿಲ್ಲ. ಇದರಿಂದಾಗಿ ನನಗೆ ಆರ್ಥಿಕವಾಗಿ ನಷ್ಟವುಂಟಾಗಿದೆ. ಸರ್ಕಾರ ಇಂತಹ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಬಗೆಹರಿಸಬೇಕು.”

-ಪ್ರಶಾಂತ್, ಕುವೆಂಪುನಗರ ನಿವಾಸಿ

” ಯಾವುದೇ ಆಸ್ತಿ ನೋಂದಣಿಯಾಗಬೇಕಾದಲ್ಲಿ ಖಾತೆ ಅವಶ್ಯ ಹಾಗೂ ತೆರಿಗೆ ಪಾವತಿಯು ತಂತ್ರಾಂಶದಲ್ಲಿ ಅಪ್‌ಡೇಟ್ ಆಗಬೇಕು. ಸರ್ವರ್ ಸಮಸ್ಯೆಯಿಂದಾಗಿ ಕಳೆದ ಒಂದು ವಾರದಿಂದ ಖಾತೆಯೂ ದೊರಕುತ್ತಿಲ್ಲ. ತೆರಿಗೆ ಪಾವತಿ ಕೂಡ ಅಪ್‌ಡೇಟ್ ಆಗುತ್ತಿಲ್ಲ. ಇದರಿಂದ ಜನರಿಗೂ ತೊಂದರೆ, ಸರ್ಕಾರಕ್ಕೂ ನಷ್ಟ.”

ಸುನಿಲ್, ಪತ್ರ ಬರಹಗಾರ

ಆಂದೋಲನ ಡೆಸ್ಕ್

Recent Posts

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

8 mins ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

18 mins ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

30 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

37 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

53 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

59 mins ago