Andolana originals

ಸರ್ವರ್ ಸಮಸ್ಯೆ; ಪಡಿತರ ಪಡೆಯಲು ಪಡಿಪಾಟಲು

ಭೇರ್ಯ ಮಹೇಶ್

ಅವಳಿ ತಾಲ್ಲೂಕುಗಳಲ್ಲಿ ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಆಗ್ರಹ 

ಕೆ.ಆರ್.ನಗರ: ಕೇಂದ್ರ ಸರ್ಕಾರದ ನಿರ್ದೇಶನದಂತೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರ ಆಹಾರಧಾನ್ಯವನ್ನು ಒಂದೇ ಅವಧಿಯಲ್ಲಿ ವಿತರಿಸಲಾಗುತ್ತಿದ್ದು, ಪಡಿತರ ವಿತರಣೆಗೆ ಸರ್ವರ್ ಸಮಸ್ಯೆ ಎದುರಾಗಿರುವುದರಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿ ಮುಂದೆ ರಾತ್ರಿ ವೇಳೆವರೆಗೂ ಚಾತಕಪಕ್ಷಿಯಂತೆ ಕಾಯುವಂತಾಗಿದೆ.

ತಾಲ್ಲೂಕಿನ ಗಂಧನಹಳ್ಳಿ, ಹೊಸ ಅಗ್ರಹಾರ ಸೇರಿದಂತೆ ಅವಳಿ ತಾಲ್ಲೂಕುಗಳ ಪಡಿತರದಾರರು ಆಹಾರ ಧಾನ್ಯವನ್ನು ಪಡೆದುಕೊಳ್ಳಲು ತಡರಾತ್ರಿಯವರೆಗೂ ಸರದಿ ಸಾಲಿನಲ್ಲಿ ನಿಂತು  ಎರಡೆರಡು ಬಾರಿ ಬಯೋಮೆಟ್ರಿಕ್ ಬೆರಳಚ್ಚು ನೀಡುತ್ತಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರಾಜ್ಯಾದ್ಯಂತ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಪಡಿತರ ಅಕ್ಕಿಯನ್ನು ಒಂದೇ ಅವಧಿಯಲ್ಲಿ ವಿತರಿಸಲಾಗುತ್ತಿದೆ. ಆದರೆ ೨ ತಿಂಗಳ ಪಡಿತರ ಪಡೆಯಲು ಪ್ರತ್ಯೇಕವಾಗಿ ಬಯೋಮೆಟ್ರಿಕ್ ಬೆರಳಚ್ಚು ನೀಡಬೇಕಿರುವುದರಿಂದ ಸರ್ವರ್ ಸಮಸ್ಯೆ ಪಡಿತರದಾರರಿಗೆ ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಲೆ ನೋವಾಗಿ ಪರಿಣಮಿಸಿದೆ.

ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ಕಾಯುವ ಪರಿಸ್ಥಿತಿ ಬಿಪಿಎಲ್ ಹಾಗೂ ಎಎವೈ ಕಾರ್ಡು ದಾರರಿಗೆ ಬಂದಿದೆ. ಎರಡು ತಿಂಗಳ ಪಡಿತರ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ತಮ್ಮ ದಿನ ನಿತ್ಯದ ಕೂಲಿ ಕೆಲಸ ಬಿಟ್ಟು ತೆರಳುತ್ತಿದ್ದಾರೆ. ಆದರೆ ಸರ್ವರ್ ನಿಧಾನಗತಿ ಹಾಗೂ ವ್ಯತ್ಯಯದಿಂದ ಪಡಿತರ ಪಡೆಯಲು ಗಂಟೆಗಟ್ಟಲೆ ಕಾಯಬೇಕಾಗಿದೆ. ಸರ್ವರ್ ಸಮಸ್ಯೆ ಕುರಿತು ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಆಹಾರ ಇಲಾಖೆ ಅಧಿಕಾರಿಗಳಿಗೆ ಪಡಿತರದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರು ಮಾಹಿತಿ ನೀಡಿದ್ದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಅವಳಿ ತಾಲ್ಲೂಕುಗಳ ಆಹಾರ ಇಲಾಖೆ ಶಿರಸ್ತೆದಾರರು ಪಡಿತರ ವಿತರಣೆ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಸರ್ವರ್ ಸಮಸ್ಯೆ ಆಲಿಸದೆ ಇರುವುದು ಪಡಿತದಾರರನ್ನು ಕೆರಳಿಸಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸದಿದ್ದರೆ ಆಹಾರ ಇಲಾಖೆ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಡಿತದಾರರು ಒತ್ತಾಯಿಸುತ್ತಿದ್ದಾರೆ. ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪದೇಪದೇ ಸರ್ವರ್ ಸಮಸ್ಯೆ ಎಂಬ ನೆಪವೊಡ್ಡಲಾಗುತ್ತಿದೆ. ಆದ್ದರಿಂದ ಉಚಿತ ಅಕ್ಕಿ ವಿತರಣೆಯ ಜೊತೆಗೆ ತಾಂತ್ರಿಕ ವ್ಯವಸ್ಥೆಯನ್ನೂ ಸಮರ್ಪಕವಾಗಿ ನಿರ್ವಹಿಸಿ, ಸರ್ವರ್ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂಬುದು ಪಡಿತರದಾರರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಒತ್ತಾಯವಾಗಿದೆ.

” ನ್ಯಾಯಬೆಲೆ ಅಂಗಡಿಗಳಲ್ಲಿ ಮೊದಲು ಎರಡು ದಿನ ಪಡಿತರ ವಿತರಣೆ ಮಾಡಿ ಬಳಿಕ ೨೫ರಂದು ಬೆಳಿಗ್ಗೆ ಬನ್ನಿ ಅಥವಾ ಸಂಜೆ ಬನ್ನಿ ಎಂದು ಸಬೂಬು ಹೇಳುತ್ತಾರೆ. ಕಾರಣ ಕೇಳಿದರೆ ಸರ್ವರ್ ಸಮಸ್ಯೆ ಎಂದು ನೆಪ ಹೇಳುತ್ತಾರೆ. ಈ ಸಮಸ್ಯೆ ಸರಿಪಡಿಸು ವವರು ಯಾರು? ಆಹಾರ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುವುದಿಲ್ಲ, ಆಹಾರ ಇಲಾಖೆ ಅಧಿಕಾರಿಗಳ ಅಸಡ್ಡೆ ಕಾಣುತ್ತಿದೆ.”

-ಡೇರಿ ಬೀರೇಶ್, ಪಡಿತರದಾರರು, ಗಂಧನಹಳ್ಳಿ ಗ್ರಾಮ

” ಅವಳಿ ತಾಲ್ಲೂಕುಗಳಲ್ಲಿ ಶೇ.೮೨ರಷ್ಟು ಪಡಿತರವನ್ನು ವಿತರಣೆ ಮಾಡಲಾಗಿದೆ. ಸರ್ವರ್ ಸಮಸ್ಯೆ ಇದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಭಾನುವಾರವಾದರೂ ಜನರು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರವನ್ನು ಪಡೆಯುತ್ತಿದ್ದಾರೆ. ಹಾಗಾಗಿ ಸೋಮವಾರ ಕಡೇ ದಿನವಾಗಿದ್ದು, ಆಹಾರ ಇಲಾಖೆ ಅಧಿಕಾರಿಗಳನ್ನು ಸರ್ವರ್ ಸಮಸ್ಯೆ ಇರುವ ನ್ಯಾಯಬೆಲೆ ಅಂಗಡಿಗಳಿಗೆ ಕಳುಹಿಸಿ ಸಮಸ್ಯೆ ಬಗೆಹರಿಸಲಾಗುತ್ತದೆ.”

-ಜಿ.ಸುರೇಂದ್ರಮೂರ್ತಿ, ತಹಸಿಲ್ದಾರ್, ಕೆ.ಆರ್.ನಗರ

 

 

ಆಂದೋಲನ ಡೆಸ್ಕ್

Recent Posts

ರಾಜಕೀಯ ಮೇಲಾಟ ನಿಲ್ಲಲಿ; ಸಾಮಾನ್ಯರ ವಿಷಯ ಚರ್ಚೆಯಾಗಲಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…

1 hour ago

ಪ್ರೇಮವೂ ಬಂಡಾಯದ ದನಿಯೇ – ಅಮೃತಾ ಪ್ರೀತಮ್

ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…

1 hour ago

ನೀರಸವಾಯಿತು ರಾಜ್ಯ ವಿಧಾನಮಂಡಲ ಅಧಿವೇಶನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಈ ಬಾರಿಯ ರಾಜ್ಯ ವಿಧಾನಮಂಡಲ ಅಧಿವೇಶನ ನಾಡಿನ ಜನರಿಗೆ ರವಾನಿಸಿರುವ ಸಂದೇಶ ಏನು? ಇಂತಹದೊಂದು…

1 hour ago

ಪ್ರಕೃತಿ ಪ್ರಿಯರನ್ನು ಸೆಳೆಯುತ್ತಿರುವ ಮೇದುರ ಜಲಪಾತ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಪಶ್ಚಿಮ ಘಟ್ಟದ ಸಾಲಿನಲ್ಲಿ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದಂತೆ ಕೊಡಗಿನ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು, ಪ್ರಕೃತಿ ಸೌಂದರ್ಯಕ್ಕೆ…

2 hours ago

ಮಳೆ ಕೊರತೆ; ಹುಣಸೂರು ತಾಲ್ಲೂಕಿನಲ್ಲಿ ರೈತರಿಗೆ ಸಂಕಷ್ಟ

ಎಂ.ಯೋಗಾನಂದ ಬಿತ್ತನೆ ಮಾಡಿದ ಬೆಳೆಗಳು ಕೈ ಸೇರದೆ ಆತಂಕ, ಸೂಕ್ತ ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ ಹುಣಸೂರು: ತಾಲ್ಲೂಕಿನಲ್ಲಿ ಈ…

2 hours ago