Andolana originals

ಕೆರೆಗೆ ಕೊಳಚೆ ನೀರು; ತಡೆಯಲು ಕ್ರಿಯಾ ಯೋಜನೆ

ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ.

ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, ಮಾಂಸ ಮಾರಾಟದ ಅಂಗಡಿಗಳ ನೀರು, ಶೌಚ ನೀರು ಸೇರಿದಂತೆ ಇತರೆ ಕೊಳಚೆ ನೀರು ರಾಜ ಕಾಲುವೆಯ ಮೂಲಕ ದೊಡ್ಡರಾಯಪೇಟೆ ಕೆರೆ ಸೇರಿ ನೀರು ಕಲುಷಿತವಾಗುತ್ತಿದೆ ಎಂಬ ದೂರು ದೊಡ್ಡರಾಯಪೇಟೆಯ ಗ್ರಾಮಸ್ಥರಿಂದ ಕೇಳಿಬಂದಿತ್ತು.

ಇದಲ್ಲದೆ ಈ ಕೆರೆಯಲ್ಲಿ ಮೀನುಗಳನ್ನು ಕೂಡ ಸಾಕಲಾಗುತ್ತಿದೆ. ಹಾಗಾಗಿ ಕೊಳಚೆ ನೀರು ಕೆರೆಯ ಅಂಗಳ ಸೇರುವುದನ್ನು ತಡೆಗಟ್ಟಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಗರ ಸಭೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿದ್ದರು. ಇದಲ್ಲದೆ ಈ ವಿಚಾರ ಸಂಸದರು ನಡೆಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಚರ್ಚೆ ಯಾಗಿತ್ತು. ಸಂಸದ ಸುನಿಲ್ ಬೋಸ್ ಅವರು ಸಹ ಕೊಳಚೆ ನೀರು ಕೆರೆ ಸೇರದಂತೆ ಕ್ರಮ ವಹಿಸಬೇಕೆಂದು ಸೂಚಿಸಿದ್ದರು.

ಕೊಳಚೆ ನೀರು ಕೆರೆ ಸೇರದಂತೆ ತಡೆಯಲು ನಗರಸಭೆಯ ಅಧಿಕಾರಿಗಳು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆತಯಾರಿಸಿದ್ದಾರೆ. ಕೊಳಚೆ ನೀರನ್ನು ಬೇರೆಡೆಗೆ ತಿರುಗಿಸಲು ಪೈಪ್‌ಲೈನ್ ಅಳವಡಿಕೆ ಮಾಡುವುದು. ನೀರಿನ ಶುದ್ಧೀಕರಣ ಘಟಕ ನಿರ್ಮಾಣ ಮಾಡುವ ಪ್ರಸ್ತಾವನೆ ಸಲ್ಲಿಸಿದೆ.

ನಗರದ ವಿವಿಧ ಬಡಾವಣೆಗಳ ಕೊಳಚೆ ನೀರು ನಂಜನಗೂಡು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿಯಿಂದ ಹಾದು ಸಂತೇಮರಹಳ್ಳಿ ರಸ್ತೆ ಮಾರ್ಗವಾಗಿ ಸಾಗಿ ಜಾಲಹಳ್ಳಿ ಹುಂಡಿ ಬಳಿ ಬಲಕ್ಕೆ ತಿರುಗುತ್ತದೆ. ಅಲ್ಲಿಂದ ಹಳ್ಳದ ಮೂಲಕ ದೊಡ್ಡ ರಾಯಪೇಟೆ ಕೆರೆ ಸೇರುತ್ತಿತ್ತು. ಸ್ಥಳೀಯ ರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸದ್ಯ ನೀರು ಕೆರೆ ಸೇರದಂತೆ ಹಳ್ಳಕ್ಕೆ ತಿರುಗಿಸಲಾಗಿದೆ.

ಕ್ರಿಯಾಯೋಜನೆಗೆ ಅನುಮೋದನೆ ದೊರೆತರೆ ಕೊಳಚೆ ನೀರನ್ನು ಕೆರೆಯ ಬಳಿ ಯಿಂದ ಪೈಪ್‌ಲೈನ್ ಮೂಲಕ ಬೇರೆಡೆಗೆತಿರುಗಿಸಲಾಗುವುದು. ಇದಕ್ಕಾಗಿ ನಗರ ಸಭೆಯು ಅನುಮೋದನೆಗಾಗಿ ಸಂಬಂಧಪಟ್ಟ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದೆ. ಬೇಗ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ.

” ಕೆರೆಗೆ ಕೊಳಚೆ ನೀರು ಸೇರಿದರೆ ಕಲುಷಿತವಾಗಲಿದೆ. ಕೆರೆಯ ನೀರನ್ನು ಜಾನುವಾರುಗಳು ಹಾಗೂ ಪ್ರಾಣಿ ಪಕ್ಷಿಗಳು ಕುಡಿಯುತ್ತವೆ. ಅವುಗಳ ಜೀವಕ್ಕೆ ತೊಂದರೆ ಆಗಬಾರದು. ಆದ್ದರಿಂದ ಕೊಳಚೆ ನೀರನ್ನು ಶಾಶ್ವತವಾಗಿ ಬೇರೆಡೆಗೆ ತಿರುಗಿಸಬೇಕು.”

-ಕಿರಣ್, ದೊಡ್ಡರಾಯಪೇಟೆ

” ಕ್ರಿಯಾ ಯೋಜನೆ ಯನ್ನು ಜಿಲ್ಲಾ ನಗರಾ ಭಿವೃದ್ಧಿ ಕೋಶದ ಮೂಲಕ ನಗರಸಭೆ ಆಡಳಿತಾಧಿಕಾರಿಯೂ ಆದ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ. ಅವರು ಪರಿಶೀಲಿಸಿ ಒಪ್ಪಿಗೆ ನೀಡಿದ ಬಳಿಕ ಡಿಪಿಆರ್ ತಯಾರಿಸಿ ಕಾಮಗಾರಿಗೆ ಗುತ್ತಿಗೆದಾರರನ್ನು ಆಹ್ವಾನಿಸಲಾಗುವುದು.”

 – ಎಸ್.ಎ.ರಾಮದಾಸ್, ನಗರಸಭೆ ಪೌರಾಯುಕ್ತ

ಆಂದೋಲನ ಡೆಸ್ಕ್

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

50 mins ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

56 mins ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

1 hour ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

1 hour ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

1 hour ago