Andolana originals

ಕೆರೆಗೆ ಕೊಳಚೆ ನೀರು; ತಡೆಯಲು ಕ್ರಿಯಾ ಯೋಜನೆ

ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ.

ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, ಮಾಂಸ ಮಾರಾಟದ ಅಂಗಡಿಗಳ ನೀರು, ಶೌಚ ನೀರು ಸೇರಿದಂತೆ ಇತರೆ ಕೊಳಚೆ ನೀರು ರಾಜ ಕಾಲುವೆಯ ಮೂಲಕ ದೊಡ್ಡರಾಯಪೇಟೆ ಕೆರೆ ಸೇರಿ ನೀರು ಕಲುಷಿತವಾಗುತ್ತಿದೆ ಎಂಬ ದೂರು ದೊಡ್ಡರಾಯಪೇಟೆಯ ಗ್ರಾಮಸ್ಥರಿಂದ ಕೇಳಿಬಂದಿತ್ತು.

ಇದಲ್ಲದೆ ಈ ಕೆರೆಯಲ್ಲಿ ಮೀನುಗಳನ್ನು ಕೂಡ ಸಾಕಲಾಗುತ್ತಿದೆ. ಹಾಗಾಗಿ ಕೊಳಚೆ ನೀರು ಕೆರೆಯ ಅಂಗಳ ಸೇರುವುದನ್ನು ತಡೆಗಟ್ಟಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಗರ ಸಭೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿದ್ದರು. ಇದಲ್ಲದೆ ಈ ವಿಚಾರ ಸಂಸದರು ನಡೆಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಚರ್ಚೆ ಯಾಗಿತ್ತು. ಸಂಸದ ಸುನಿಲ್ ಬೋಸ್ ಅವರು ಸಹ ಕೊಳಚೆ ನೀರು ಕೆರೆ ಸೇರದಂತೆ ಕ್ರಮ ವಹಿಸಬೇಕೆಂದು ಸೂಚಿಸಿದ್ದರು.

ಕೊಳಚೆ ನೀರು ಕೆರೆ ಸೇರದಂತೆ ತಡೆಯಲು ನಗರಸಭೆಯ ಅಧಿಕಾರಿಗಳು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆತಯಾರಿಸಿದ್ದಾರೆ. ಕೊಳಚೆ ನೀರನ್ನು ಬೇರೆಡೆಗೆ ತಿರುಗಿಸಲು ಪೈಪ್‌ಲೈನ್ ಅಳವಡಿಕೆ ಮಾಡುವುದು. ನೀರಿನ ಶುದ್ಧೀಕರಣ ಘಟಕ ನಿರ್ಮಾಣ ಮಾಡುವ ಪ್ರಸ್ತಾವನೆ ಸಲ್ಲಿಸಿದೆ.

ನಗರದ ವಿವಿಧ ಬಡಾವಣೆಗಳ ಕೊಳಚೆ ನೀರು ನಂಜನಗೂಡು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿಯಿಂದ ಹಾದು ಸಂತೇಮರಹಳ್ಳಿ ರಸ್ತೆ ಮಾರ್ಗವಾಗಿ ಸಾಗಿ ಜಾಲಹಳ್ಳಿ ಹುಂಡಿ ಬಳಿ ಬಲಕ್ಕೆ ತಿರುಗುತ್ತದೆ. ಅಲ್ಲಿಂದ ಹಳ್ಳದ ಮೂಲಕ ದೊಡ್ಡ ರಾಯಪೇಟೆ ಕೆರೆ ಸೇರುತ್ತಿತ್ತು. ಸ್ಥಳೀಯ ರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸದ್ಯ ನೀರು ಕೆರೆ ಸೇರದಂತೆ ಹಳ್ಳಕ್ಕೆ ತಿರುಗಿಸಲಾಗಿದೆ.

ಕ್ರಿಯಾಯೋಜನೆಗೆ ಅನುಮೋದನೆ ದೊರೆತರೆ ಕೊಳಚೆ ನೀರನ್ನು ಕೆರೆಯ ಬಳಿ ಯಿಂದ ಪೈಪ್‌ಲೈನ್ ಮೂಲಕ ಬೇರೆಡೆಗೆತಿರುಗಿಸಲಾಗುವುದು. ಇದಕ್ಕಾಗಿ ನಗರ ಸಭೆಯು ಅನುಮೋದನೆಗಾಗಿ ಸಂಬಂಧಪಟ್ಟ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದೆ. ಬೇಗ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ.

” ಕೆರೆಗೆ ಕೊಳಚೆ ನೀರು ಸೇರಿದರೆ ಕಲುಷಿತವಾಗಲಿದೆ. ಕೆರೆಯ ನೀರನ್ನು ಜಾನುವಾರುಗಳು ಹಾಗೂ ಪ್ರಾಣಿ ಪಕ್ಷಿಗಳು ಕುಡಿಯುತ್ತವೆ. ಅವುಗಳ ಜೀವಕ್ಕೆ ತೊಂದರೆ ಆಗಬಾರದು. ಆದ್ದರಿಂದ ಕೊಳಚೆ ನೀರನ್ನು ಶಾಶ್ವತವಾಗಿ ಬೇರೆಡೆಗೆ ತಿರುಗಿಸಬೇಕು.”

-ಕಿರಣ್, ದೊಡ್ಡರಾಯಪೇಟೆ

” ಕ್ರಿಯಾ ಯೋಜನೆ ಯನ್ನು ಜಿಲ್ಲಾ ನಗರಾ ಭಿವೃದ್ಧಿ ಕೋಶದ ಮೂಲಕ ನಗರಸಭೆ ಆಡಳಿತಾಧಿಕಾರಿಯೂ ಆದ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ. ಅವರು ಪರಿಶೀಲಿಸಿ ಒಪ್ಪಿಗೆ ನೀಡಿದ ಬಳಿಕ ಡಿಪಿಆರ್ ತಯಾರಿಸಿ ಕಾಮಗಾರಿಗೆ ಗುತ್ತಿಗೆದಾರರನ್ನು ಆಹ್ವಾನಿಸಲಾಗುವುದು.”

 – ಎಸ್.ಎ.ರಾಮದಾಸ್, ನಗರಸಭೆ ಪೌರಾಯುಕ್ತ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

3 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

3 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

3 hours ago