Andolana originals

ಕೆರೆಗೆ ಕೊಳಚೆ ನೀರು; ತಡೆಯಲು ಕ್ರಿಯಾ ಯೋಜನೆ

ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ.

ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, ಮಾಂಸ ಮಾರಾಟದ ಅಂಗಡಿಗಳ ನೀರು, ಶೌಚ ನೀರು ಸೇರಿದಂತೆ ಇತರೆ ಕೊಳಚೆ ನೀರು ರಾಜ ಕಾಲುವೆಯ ಮೂಲಕ ದೊಡ್ಡರಾಯಪೇಟೆ ಕೆರೆ ಸೇರಿ ನೀರು ಕಲುಷಿತವಾಗುತ್ತಿದೆ ಎಂಬ ದೂರು ದೊಡ್ಡರಾಯಪೇಟೆಯ ಗ್ರಾಮಸ್ಥರಿಂದ ಕೇಳಿಬಂದಿತ್ತು.

ಇದಲ್ಲದೆ ಈ ಕೆರೆಯಲ್ಲಿ ಮೀನುಗಳನ್ನು ಕೂಡ ಸಾಕಲಾಗುತ್ತಿದೆ. ಹಾಗಾಗಿ ಕೊಳಚೆ ನೀರು ಕೆರೆಯ ಅಂಗಳ ಸೇರುವುದನ್ನು ತಡೆಗಟ್ಟಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಗರ ಸಭೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿದ್ದರು. ಇದಲ್ಲದೆ ಈ ವಿಚಾರ ಸಂಸದರು ನಡೆಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಚರ್ಚೆ ಯಾಗಿತ್ತು. ಸಂಸದ ಸುನಿಲ್ ಬೋಸ್ ಅವರು ಸಹ ಕೊಳಚೆ ನೀರು ಕೆರೆ ಸೇರದಂತೆ ಕ್ರಮ ವಹಿಸಬೇಕೆಂದು ಸೂಚಿಸಿದ್ದರು.

ಕೊಳಚೆ ನೀರು ಕೆರೆ ಸೇರದಂತೆ ತಡೆಯಲು ನಗರಸಭೆಯ ಅಧಿಕಾರಿಗಳು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆತಯಾರಿಸಿದ್ದಾರೆ. ಕೊಳಚೆ ನೀರನ್ನು ಬೇರೆಡೆಗೆ ತಿರುಗಿಸಲು ಪೈಪ್‌ಲೈನ್ ಅಳವಡಿಕೆ ಮಾಡುವುದು. ನೀರಿನ ಶುದ್ಧೀಕರಣ ಘಟಕ ನಿರ್ಮಾಣ ಮಾಡುವ ಪ್ರಸ್ತಾವನೆ ಸಲ್ಲಿಸಿದೆ.

ನಗರದ ವಿವಿಧ ಬಡಾವಣೆಗಳ ಕೊಳಚೆ ನೀರು ನಂಜನಗೂಡು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿಯಿಂದ ಹಾದು ಸಂತೇಮರಹಳ್ಳಿ ರಸ್ತೆ ಮಾರ್ಗವಾಗಿ ಸಾಗಿ ಜಾಲಹಳ್ಳಿ ಹುಂಡಿ ಬಳಿ ಬಲಕ್ಕೆ ತಿರುಗುತ್ತದೆ. ಅಲ್ಲಿಂದ ಹಳ್ಳದ ಮೂಲಕ ದೊಡ್ಡ ರಾಯಪೇಟೆ ಕೆರೆ ಸೇರುತ್ತಿತ್ತು. ಸ್ಥಳೀಯ ರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸದ್ಯ ನೀರು ಕೆರೆ ಸೇರದಂತೆ ಹಳ್ಳಕ್ಕೆ ತಿರುಗಿಸಲಾಗಿದೆ.

ಕ್ರಿಯಾಯೋಜನೆಗೆ ಅನುಮೋದನೆ ದೊರೆತರೆ ಕೊಳಚೆ ನೀರನ್ನು ಕೆರೆಯ ಬಳಿ ಯಿಂದ ಪೈಪ್‌ಲೈನ್ ಮೂಲಕ ಬೇರೆಡೆಗೆತಿರುಗಿಸಲಾಗುವುದು. ಇದಕ್ಕಾಗಿ ನಗರ ಸಭೆಯು ಅನುಮೋದನೆಗಾಗಿ ಸಂಬಂಧಪಟ್ಟ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದೆ. ಬೇಗ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ.

” ಕೆರೆಗೆ ಕೊಳಚೆ ನೀರು ಸೇರಿದರೆ ಕಲುಷಿತವಾಗಲಿದೆ. ಕೆರೆಯ ನೀರನ್ನು ಜಾನುವಾರುಗಳು ಹಾಗೂ ಪ್ರಾಣಿ ಪಕ್ಷಿಗಳು ಕುಡಿಯುತ್ತವೆ. ಅವುಗಳ ಜೀವಕ್ಕೆ ತೊಂದರೆ ಆಗಬಾರದು. ಆದ್ದರಿಂದ ಕೊಳಚೆ ನೀರನ್ನು ಶಾಶ್ವತವಾಗಿ ಬೇರೆಡೆಗೆ ತಿರುಗಿಸಬೇಕು.”

-ಕಿರಣ್, ದೊಡ್ಡರಾಯಪೇಟೆ

” ಕ್ರಿಯಾ ಯೋಜನೆ ಯನ್ನು ಜಿಲ್ಲಾ ನಗರಾ ಭಿವೃದ್ಧಿ ಕೋಶದ ಮೂಲಕ ನಗರಸಭೆ ಆಡಳಿತಾಧಿಕಾರಿಯೂ ಆದ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ. ಅವರು ಪರಿಶೀಲಿಸಿ ಒಪ್ಪಿಗೆ ನೀಡಿದ ಬಳಿಕ ಡಿಪಿಆರ್ ತಯಾರಿಸಿ ಕಾಮಗಾರಿಗೆ ಗುತ್ತಿಗೆದಾರರನ್ನು ಆಹ್ವಾನಿಸಲಾಗುವುದು.”

 – ಎಸ್.ಎ.ರಾಮದಾಸ್, ನಗರಸಭೆ ಪೌರಾಯುಕ್ತ

ಆಂದೋಲನ ಡೆಸ್ಕ್

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

1 hour ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

3 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

5 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

7 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

10 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

10 hours ago