Andolana originals

ಕೆರೆಗೆ ಕೊಳಚೆ ನೀರು; ತಡೆಯಲು ಕ್ರಿಯಾ ಯೋಜನೆ

ಚಾಮರಾಜನಗರ: ನಗರದ ಸಮೀಪ ವಿರುವ ದೊಡ್ಡರಾಯಪೇಟೆ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆ ಯಲು ನಗರಸಭೆಯು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆ ತಯಾರಿಸಿದೆ. ಅನುಮೋದನೆ ಗಾಗಿ ನಗರಸಭೆಯ ಆಡಳಿತಾಽಕಾರಿಯೂ ಆಗಿರುವ ಜಿಲ್ಲಾಧಿಕಾರಿಗೆ ಕಳುಹಿಸಿದೆ.

ನಗರದ ಕೆಲವು ಬಡಾವಣೆಗಳ ಬಟ್ಟೆ ತೊಳೆದ, ಮಾಂಸ ಮಾರಾಟದ ಅಂಗಡಿಗಳ ನೀರು, ಶೌಚ ನೀರು ಸೇರಿದಂತೆ ಇತರೆ ಕೊಳಚೆ ನೀರು ರಾಜ ಕಾಲುವೆಯ ಮೂಲಕ ದೊಡ್ಡರಾಯಪೇಟೆ ಕೆರೆ ಸೇರಿ ನೀರು ಕಲುಷಿತವಾಗುತ್ತಿದೆ ಎಂಬ ದೂರು ದೊಡ್ಡರಾಯಪೇಟೆಯ ಗ್ರಾಮಸ್ಥರಿಂದ ಕೇಳಿಬಂದಿತ್ತು.

ಇದಲ್ಲದೆ ಈ ಕೆರೆಯಲ್ಲಿ ಮೀನುಗಳನ್ನು ಕೂಡ ಸಾಕಲಾಗುತ್ತಿದೆ. ಹಾಗಾಗಿ ಕೊಳಚೆ ನೀರು ಕೆರೆಯ ಅಂಗಳ ಸೇರುವುದನ್ನು ತಡೆಗಟ್ಟಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಗರ ಸಭೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿದ್ದರು. ಇದಲ್ಲದೆ ಈ ವಿಚಾರ ಸಂಸದರು ನಡೆಸಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿಯೂ ಚರ್ಚೆ ಯಾಗಿತ್ತು. ಸಂಸದ ಸುನಿಲ್ ಬೋಸ್ ಅವರು ಸಹ ಕೊಳಚೆ ನೀರು ಕೆರೆ ಸೇರದಂತೆ ಕ್ರಮ ವಹಿಸಬೇಕೆಂದು ಸೂಚಿಸಿದ್ದರು.

ಕೊಳಚೆ ನೀರು ಕೆರೆ ಸೇರದಂತೆ ತಡೆಯಲು ನಗರಸಭೆಯ ಅಧಿಕಾರಿಗಳು ೨೫ ಲಕ್ಷ ರೂ.ಗಳ ಕ್ರಿಯಾ ಯೋಜನೆತಯಾರಿಸಿದ್ದಾರೆ. ಕೊಳಚೆ ನೀರನ್ನು ಬೇರೆಡೆಗೆ ತಿರುಗಿಸಲು ಪೈಪ್‌ಲೈನ್ ಅಳವಡಿಕೆ ಮಾಡುವುದು. ನೀರಿನ ಶುದ್ಧೀಕರಣ ಘಟಕ ನಿರ್ಮಾಣ ಮಾಡುವ ಪ್ರಸ್ತಾವನೆ ಸಲ್ಲಿಸಿದೆ.

ನಗರದ ವಿವಿಧ ಬಡಾವಣೆಗಳ ಕೊಳಚೆ ನೀರು ನಂಜನಗೂಡು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿಯಿಂದ ಹಾದು ಸಂತೇಮರಹಳ್ಳಿ ರಸ್ತೆ ಮಾರ್ಗವಾಗಿ ಸಾಗಿ ಜಾಲಹಳ್ಳಿ ಹುಂಡಿ ಬಳಿ ಬಲಕ್ಕೆ ತಿರುಗುತ್ತದೆ. ಅಲ್ಲಿಂದ ಹಳ್ಳದ ಮೂಲಕ ದೊಡ್ಡ ರಾಯಪೇಟೆ ಕೆರೆ ಸೇರುತ್ತಿತ್ತು. ಸ್ಥಳೀಯ ರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸದ್ಯ ನೀರು ಕೆರೆ ಸೇರದಂತೆ ಹಳ್ಳಕ್ಕೆ ತಿರುಗಿಸಲಾಗಿದೆ.

ಕ್ರಿಯಾಯೋಜನೆಗೆ ಅನುಮೋದನೆ ದೊರೆತರೆ ಕೊಳಚೆ ನೀರನ್ನು ಕೆರೆಯ ಬಳಿ ಯಿಂದ ಪೈಪ್‌ಲೈನ್ ಮೂಲಕ ಬೇರೆಡೆಗೆತಿರುಗಿಸಲಾಗುವುದು. ಇದಕ್ಕಾಗಿ ನಗರ ಸಭೆಯು ಅನುಮೋದನೆಗಾಗಿ ಸಂಬಂಧಪಟ್ಟ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದೆ. ಬೇಗ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ.

” ಕೆರೆಗೆ ಕೊಳಚೆ ನೀರು ಸೇರಿದರೆ ಕಲುಷಿತವಾಗಲಿದೆ. ಕೆರೆಯ ನೀರನ್ನು ಜಾನುವಾರುಗಳು ಹಾಗೂ ಪ್ರಾಣಿ ಪಕ್ಷಿಗಳು ಕುಡಿಯುತ್ತವೆ. ಅವುಗಳ ಜೀವಕ್ಕೆ ತೊಂದರೆ ಆಗಬಾರದು. ಆದ್ದರಿಂದ ಕೊಳಚೆ ನೀರನ್ನು ಶಾಶ್ವತವಾಗಿ ಬೇರೆಡೆಗೆ ತಿರುಗಿಸಬೇಕು.”

-ಕಿರಣ್, ದೊಡ್ಡರಾಯಪೇಟೆ

” ಕ್ರಿಯಾ ಯೋಜನೆ ಯನ್ನು ಜಿಲ್ಲಾ ನಗರಾ ಭಿವೃದ್ಧಿ ಕೋಶದ ಮೂಲಕ ನಗರಸಭೆ ಆಡಳಿತಾಧಿಕಾರಿಯೂ ಆದ ಜಿಲ್ಲಾಧಿಕಾರಿಗೆ ಸಲ್ಲಿಸಲಾಗಿದೆ. ಅವರು ಪರಿಶೀಲಿಸಿ ಒಪ್ಪಿಗೆ ನೀಡಿದ ಬಳಿಕ ಡಿಪಿಆರ್ ತಯಾರಿಸಿ ಕಾಮಗಾರಿಗೆ ಗುತ್ತಿಗೆದಾರರನ್ನು ಆಹ್ವಾನಿಸಲಾಗುವುದು.”

 – ಎಸ್.ಎ.ರಾಮದಾಸ್, ನಗರಸಭೆ ಪೌರಾಯುಕ್ತ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

57 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

59 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago