Andolana originals

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ

ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ ರಾಜಕಾಲುವೆ ಸೇತುವೆ ಕುಸಿದು ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಬಡಾವಣೆಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ರಾಜಕಾಲುವೆ ನಿರ್ಮಾಣಗೊಂಡು ದಶಕಗಳು ಕಳೆದಿದ್ದು, ಸೂಕ್ತ ನಿರ್ವಹಣೆ ಇಲ್ಲದ ಕಾರಣ ಸೇತುವೆ ಕುಸಿದು ಬಿದ್ದಿದೆ. ಸೇತುವೆ ಕುಸಿದು ೬ ತಿಂಗಳಾಗಿದ್ದು, ಬಡಾವಣೆಯಲ್ಲಿ ಸಂಚಾರ ಮಾಡಲು ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.

ಸೇತುವೆ ಕುಸಿದ ಪರಿಣಾಮ ಒಳಚರಂಡಿಗೆ ಹಾನಿಯಾಗಿ ನೀರು ಅಕ್ಕಪಕ್ಕದ ಮನೆಗಳಿಗೆ ಹರಿದು ಹೋಗುತ್ತಿದ್ದು, ಇದರ ವಾಸನೆಗೆ ನಿದ್ರೆ ಇಲ್ಲದಂತಾಗಿದೆ. ಅಲ್ಲದೆ, ಚರ್ಮರೋಗ, ಕಾಲು ತುರಿಕೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೇತುವೆ ಕುಸಿದ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ. ನಗರಪಾಲಿಕೆ ಚುನಾವಣೆ ನಡೆಯದಿರುವುದರಿಂದ ಅಧಿಕಾರಿಗಳ ಬೇಜವಾಬ್ದಾರಿ ಹೆಚ್ಚಾಗಿದೆ ಎಂದು ನಿವಾಸಿಗಳು ದೂರಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿ ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕರು ಗಮನಹರಿಸುತ್ತಿಲ್ಲ: ಸೇತುವೆ ಕುಸಿತದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗದೆ, ಜನಸ್ಪಂದನಾ ಸಭೆಗಳಲ್ಲಿ ಹಾಗೂ ಹಲವು ಬಾರಿ ಶಾಸಕರಿಗೂ ದೂರು ನೀಡಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಮತ ಕೇಳಲು ಬಡಾವಣೆಯ ಕಡೆ ಗಮನಹರಿಸುತ್ತಾರೆ. ಸಮಸ್ಯೆ ಎದುರಾದಾಗ ನಿರ್ಲಕ್ಷ್ಯ ತೋರಿಸುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡಾವಣೆಯಲ್ಲಿ ಹಲವು ಸಮಸ್ಯೆಗಳು: ರಾಮಕೃಷ್ಣನಗರ ಬಡಾವಣೆಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬಡಾವಣೆಯಲ್ಲಿರುವ ರಾಮಕೃಷ್ಣನಗರದ ಪರಮ ಹಂಸ ಉದ್ಯಾನವನ ದಲ್ಲಿ ಮಕ್ಕಳ ಆಟಿಕೆಗಳು ಮುರಿದು ಬಿದ್ದಿವೆ. ಹಾಗೆಯೇ ಕೆಲವು ಮನೆಗಳಿಗೆ ಕಳೆದ ೫ ದಿನಗಳಿಂದ ನೀರು ವ್ಯತ್ಯಯವಾಗಿದೆ ಎಂದು ನಿವಾಸಿಗಳು ಅಲವತ್ತುಕೊಂಡಿದ್ದಾರೆ.

” ಸೇತುವೆ ಕುಸಿದು ೬ ತಿಂಗಳಾಗಿದೆ. ತಕ್ಷಣ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ, ಸರಿಯಾಗಿ ಸ್ಪಂದಿಸುತ್ತಿಲ್ಲ. ನಗರಪಾಲಿಕೆಗೆ ಚುನಾವಣೆ ನಡೆಯದೆ ಜನಪ್ರತಿನಿಧಿಗಳಿಲ್ಲದ ಕಾರಣ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಟೆಂಡರ್ ಆಗಿದೆ. ಕಾಮಗಾರಿ ಆರಂಭಿಸುತ್ತೇವೆ ಎಂದು ಹೇಳುತ್ತಾರೆ.”

-ಲಕ್ಷ್ಮೀ ಕಿರಣ್‌ಗೌಡ, ನಗರಪಾಲಿಕೆ ಮಾಜಿ ಸದಸ್ಯರು

” ಸೇತುವೆ ನಿರ್ಮಾಣಕ್ಕೆ ೫೨ ಲಕ್ಷ ರೂ. ಟೆಂಡರ್ ಆಗಿದೆ. ಶುಕ್ರವಾರದಿಂದ ಕೆಲಸ ಪ್ರಾರಂಭವಾಗುತ್ತದೆ.”

ಸತ್ಯಮೂರ್ತಿ, ಅಭಿವೃದ್ಧಿ ಅಧಿಕಾರಿ, ನಗರಪಾಲಿಕೆ ವಲಯ ಕಚೇರಿ-೩

” ರಾಮಕೃಷ್ಣನಗರ ಬಡಾವಣೆಯ ರಸ್ತೆಗಳು ಮತ್ತು ಉದ್ಯಾನವನಗಳು ನಿರ್ವಹಣೆಯಿಲ್ಲದೆ ಸೊರಗಿದ್ದು, ರಾಜಕಾಲುವೆ ಸೇತುವೆ ಕುಸಿದ ಪರಿಣಾಮ ನಿವಾಸಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.”

-ಎಂ.ಬಸವಣ್ಣ 

 

 

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

11 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

11 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

12 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

15 hours ago