Andolana originals

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ

ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ ರಾಜಕಾಲುವೆ ಸೇತುವೆ ಕುಸಿದು ಒಳಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಬಡಾವಣೆಯ ನಿವಾಸಿಗಳು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ರಾಜಕಾಲುವೆ ನಿರ್ಮಾಣಗೊಂಡು ದಶಕಗಳು ಕಳೆದಿದ್ದು, ಸೂಕ್ತ ನಿರ್ವಹಣೆ ಇಲ್ಲದ ಕಾರಣ ಸೇತುವೆ ಕುಸಿದು ಬಿದ್ದಿದೆ. ಸೇತುವೆ ಕುಸಿದು ೬ ತಿಂಗಳಾಗಿದ್ದು, ಬಡಾವಣೆಯಲ್ಲಿ ಸಂಚಾರ ಮಾಡಲು ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.

ಸೇತುವೆ ಕುಸಿದ ಪರಿಣಾಮ ಒಳಚರಂಡಿಗೆ ಹಾನಿಯಾಗಿ ನೀರು ಅಕ್ಕಪಕ್ಕದ ಮನೆಗಳಿಗೆ ಹರಿದು ಹೋಗುತ್ತಿದ್ದು, ಇದರ ವಾಸನೆಗೆ ನಿದ್ರೆ ಇಲ್ಲದಂತಾಗಿದೆ. ಅಲ್ಲದೆ, ಚರ್ಮರೋಗ, ಕಾಲು ತುರಿಕೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಅಧಿಕಾರಿಗಳು ಸ್ಪಂದಿಸುತ್ತಿಲ್ಲ: ಸೇತುವೆ ಕುಸಿದ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ. ನಗರಪಾಲಿಕೆ ಚುನಾವಣೆ ನಡೆಯದಿರುವುದರಿಂದ ಅಧಿಕಾರಿಗಳ ಬೇಜವಾಬ್ದಾರಿ ಹೆಚ್ಚಾಗಿದೆ ಎಂದು ನಿವಾಸಿಗಳು ದೂರಿದ್ದಾರೆ. ಸಮಸ್ಯೆಯನ್ನು ತಕ್ಷಣ ಪರಿ ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಾಸಕರು ಗಮನಹರಿಸುತ್ತಿಲ್ಲ: ಸೇತುವೆ ಕುಸಿತದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನವಾಗದೆ, ಜನಸ್ಪಂದನಾ ಸಭೆಗಳಲ್ಲಿ ಹಾಗೂ ಹಲವು ಬಾರಿ ಶಾಸಕರಿಗೂ ದೂರು ನೀಡಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಮತ ಕೇಳಲು ಬಡಾವಣೆಯ ಕಡೆ ಗಮನಹರಿಸುತ್ತಾರೆ. ಸಮಸ್ಯೆ ಎದುರಾದಾಗ ನಿರ್ಲಕ್ಷ್ಯ ತೋರಿಸುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಡಾವಣೆಯಲ್ಲಿ ಹಲವು ಸಮಸ್ಯೆಗಳು: ರಾಮಕೃಷ್ಣನಗರ ಬಡಾವಣೆಯ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಬಡಾವಣೆಯಲ್ಲಿರುವ ರಾಮಕೃಷ್ಣನಗರದ ಪರಮ ಹಂಸ ಉದ್ಯಾನವನ ದಲ್ಲಿ ಮಕ್ಕಳ ಆಟಿಕೆಗಳು ಮುರಿದು ಬಿದ್ದಿವೆ. ಹಾಗೆಯೇ ಕೆಲವು ಮನೆಗಳಿಗೆ ಕಳೆದ ೫ ದಿನಗಳಿಂದ ನೀರು ವ್ಯತ್ಯಯವಾಗಿದೆ ಎಂದು ನಿವಾಸಿಗಳು ಅಲವತ್ತುಕೊಂಡಿದ್ದಾರೆ.

” ಸೇತುವೆ ಕುಸಿದು ೬ ತಿಂಗಳಾಗಿದೆ. ತಕ್ಷಣ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ, ಸರಿಯಾಗಿ ಸ್ಪಂದಿಸುತ್ತಿಲ್ಲ. ನಗರಪಾಲಿಕೆಗೆ ಚುನಾವಣೆ ನಡೆಯದೆ ಜನಪ್ರತಿನಿಧಿಗಳಿಲ್ಲದ ಕಾರಣ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಟೆಂಡರ್ ಆಗಿದೆ. ಕಾಮಗಾರಿ ಆರಂಭಿಸುತ್ತೇವೆ ಎಂದು ಹೇಳುತ್ತಾರೆ.”

-ಲಕ್ಷ್ಮೀ ಕಿರಣ್‌ಗೌಡ, ನಗರಪಾಲಿಕೆ ಮಾಜಿ ಸದಸ್ಯರು

” ಸೇತುವೆ ನಿರ್ಮಾಣಕ್ಕೆ ೫೨ ಲಕ್ಷ ರೂ. ಟೆಂಡರ್ ಆಗಿದೆ. ಶುಕ್ರವಾರದಿಂದ ಕೆಲಸ ಪ್ರಾರಂಭವಾಗುತ್ತದೆ.”

ಸತ್ಯಮೂರ್ತಿ, ಅಭಿವೃದ್ಧಿ ಅಧಿಕಾರಿ, ನಗರಪಾಲಿಕೆ ವಲಯ ಕಚೇರಿ-೩

” ರಾಮಕೃಷ್ಣನಗರ ಬಡಾವಣೆಯ ರಸ್ತೆಗಳು ಮತ್ತು ಉದ್ಯಾನವನಗಳು ನಿರ್ವಹಣೆಯಿಲ್ಲದೆ ಸೊರಗಿದ್ದು, ರಾಜಕಾಲುವೆ ಸೇತುವೆ ಕುಸಿದ ಪರಿಣಾಮ ನಿವಾಸಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.”

-ಎಂ.ಬಸವಣ್ಣ 

 

 

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ…

1 min ago

ಭೂಗತ ಕೇಬಲ್‌ ಕಾಮಗಾರಿ ; ಯೋಜನೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿಎಂ

ಸೆಸ್ಕ್‌ ವತಿಯಿದ ಮೈಸೂರು ನಗರದಲ್ಲಿ ಕೈಗೊಂಡಿರುವ ಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು…

1 hour ago

ಕೇರಳಂ | ನೂತನ ಮುಖ್ಯಮಂತ್ರಿಯಾಗಿ ವಿ.ಡಿ ಸತೀಶನ್ ಆಯ್ಕೆ

ಕೇರಳಂ : ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಆಯ್ಕೆಯಾಗಿದ್ದಾರೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ…

2 hours ago

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು : ಸಿಎಂ ಸಿದ್ದರಾಮಯ್ಯ

ಮೈಸೂರು : ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ…

2 hours ago

ಚೀನಾವನ್ನು ಹಾಡಿ ಹೊಗಳಿದ ಟ್ರಂಪ್‌ : ಜಿನ್‌ಪಿಂಗ್‌ ಪ್ರತಿಕ್ರಿಯೆ ಹೇಗಿತ್ತು?

ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…

3 hours ago

ದೆಹಲಿ | ಸ್ಲೀಪರ್‌ ಬಸ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ನವದೆಹಲಿ : ಸ್ಲೀಪರ್‌ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…

4 hours ago