Andolana originals

ಮನೆಗೆ ನುಗ್ಗಿದ ಚರಂಡಿ ನೀರು; ರಾತ್ರಿಯಿಡೀ ಗೋಳು

ಮೈಸೂರು: ವರ್ಷದ ಮೊದಲ ಮಳೆಗೆ ಮೈಸೂರು ನಗರ ತತ್ತರಿಸಿದ್ದು, ನೂರಾರು ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದು ವಾಹನಗಳು ಜಖಂ ಆಗಿರುವ ಜತೆಗೆ ಮಹಾನಗರಪಾಲಿಕೆಯ ಅವೈಜ್ಞಾನಿಕ ಯುಜಿಡಿ ಪೈಪ್ ಅಳವಡಿಕೆ ಕಾಮಗಾರಿಯಿಂದ ಮುನೇಶ್ವರ ನಗರ ಬಡಾವಣೆಯ ನೂರಾರು ಮನೆಗಳಿಗೆ ಚರಂಡಿ ನೀರು ನುಗ್ಗಿ ನಾಗರಿಕರು ಪರಿತಪಿಸುವಂತಾಯಿತು.

ಮೇ 3ರಂದು ಸಂಜೆ ಬಿದ್ದ ಮಳೆಗೆ ದೇವನೂರು ಕೆರೆಯ ಹಿಂಬದಿಯ ಚರಂಡಿಯಲ್ಲಿ ಮಳೆ ನೀರು ಉಕ್ಕಿ ಹರಿದಿದ್ದು ಮುನೇಶ್ವರ ನಗರ ಬಡಾವಣೆಯ ಮನೆಗಳಿಗೆ ಕೊಳಚೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತು. ಮೊಣಕಾಲುದ್ದ ಹರಿದ ಚರಂಡಿಯ ದುರ್ವಾಸನೆಯುಕ್ತ ಕೊಳಕು ನೀರು ಇಲ್ಲಿನ ಹತ್ತಾರು ಮನೆ ಹಾಗೂ ಬಡಾವಣೆಯ ಮಸೀದಿಗೂ ನುಗ್ಗಿ ನೂರಾರು ನಿವಾಸಿಗಳು ರಾತ್ರಿಯಿಡೀ ನಿದ್ದೆಯಿಲ್ಲದೆ ಕಳೆಯುವಂತಾಯಿತು.

ಚರಂಡಿ ಮಧ್ಯದಲ್ಲಿ ಯುಜಿಡಿ ಪೈಪ್:
ಮಹಾನಗರ ಪಾಲಿಕೆ ಮಳೆ ನೀರು ಚರಂಡಿಗೆ ಸಂಪರ್ಕ ಕಲ್ಪಿಸಿದ್ದ ಯುಜಿಡಿ ಪೈಪ್ ಕಾಮಗಾರಿಯನ್ನು ಪುರ್ಣಗೊಳಿಸದಿರುವುದು ಈ ಅವಾಂತರಕ್ಕೆ ಕಾರಣ. ಚರಂಡಿಯ ಮಧ್ಯದಲ್ಲಿ ಅಳವಡಿಸಿದ ಪೈಪ್‌ನಲ್ಲಿ ಕಸಕಡ್ಡಿ, ಚಿಂದಿ ಬಟ್ಟೆ, ಪ್ಲಾಸ್ಟಿಕ್ ರಾಶಿ ಸಿಲುಕಿಕೊಂಡ ಕಾರಣ ನೀರು ಸರಾಗವಾಗಿ ಹರಿಯಲು ಸಾಧ್ಯವಾಗಲಿಲ್ಲ. ಸುಮಾರು 4 ಅಡಿ ಎತ್ತರಕ್ಕೆ ಹರಿದ ಕೊಳಚೆ ನೀರು ತಡೆಗೋಡೆ ದಾಟಿ ಸಮೀಪದ ರಸ್ತೆಗಳಲ್ಲಿ ಹರಿದು, ಅಕ್ಕ ಪಕ್ಕದ ಮನೆಗಳಿಗೆ, ಅಂಗಡಿ, ಗೋದಾಮುಗಳಿಗೆ ನುಗ್ಗಿದೆ.

ಅನೇಕರ ಮನೆಗಳಲ್ಲಿ ಎಳೆ ಕಂದಮ್ಮಗಳು, ಸಣ್ಣ ಮಕ್ಕಳು ಹಾಗೂ ವಯಸ್ಸಾದ ಹಿರಿಯರು ಇದ್ದರು. ಅವರೆಲ್ಲರೂ ಮನೆಯೊಳಗೆ ಹರಿದು ಬಂದ ಕೊಳಚೆ ನೀರು ಹಾಗೂ ಅದರ ದುರ್ವಾಸನೆಯಿಂದ ಬಹಳ ಸಂಕಟ ಅನುಭವಿಸಿದ್ದಾರೆ.
ರಾತ್ರಿ 2 ಗಂಟೆವರೆಗೂ ಕೊಳಚೆ ನೀರು ರಸ್ತೆಯಲ್ಲಿಯೇ ಉಕ್ಕಿ ಹರಿದಿತ್ತು. ಇದರಿಂದ ಹಾಸಿಗೆ ಹೊದಿಕೆಗಳೆಲ್ಲ ಒದ್ದೆಯಾಗಿದ್ದಲ್ಲದೆ ಮನೆಗೆ ತಂದಿದ್ದ ಅಕ್ಕಿ, ಗೋಧಿ, ರಾಗಿ, ಸಕರೆ, ಬೇಳೆ ಇತ್ಯಾದಿ ದಿನಸಿಗಳು ಕೊಳಕು ನೀರಿನಲ್ಲಿ ಮುಳುಗಿದ್ದವು. ಸೋಫಾ, ಬೆಡ್, ಬೀರು ಒಳಗೂ ಕೊಳಕು ನೀರು ನುಗ್ಗಿ ಬಟ್ಟೆಗಳೂ ಹಾಳಾಗಿವೆ.

ಜೊತೆಗಿದ್ದ ಅಧಿಕಾರಿಗಳು
ಮಾಜಿ ಮಹಾಪೌರ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆ ಸಿಬ್ಬಂದಿ ಜೆಸಿಬಿ ಮೂಲಕ ತಡೆ ತೆರವುಗೊಳಿಸುವವರೆಗೂ ಸ್ಥಳದಲ್ಲೇ ಇದ್ದ ಅವರ ನಡೆ ಬಗ್ಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪರಿಹಾರಕ್ಕಾಗಿ ಸರ್ವೆ

ಪಾಲಿಕೆ ಅಧಿಕಾರಿಗಳು ಮಳೆ ನೀರು ನುಗ್ಗಿ ಹಾನಿಯಾದ ಮನೆಗಳಿಗೆ ಒಂದಷ್ಟು ಪರಿಹಾರ ನೀಡಲು ತೀರ್ಮಾನಿಸಿದ್ದು, ಸರ್ವೆ ನಡೆಸಿ ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಿದ್ದಾರೆ.

ಇಲ್ಲಿನ ಒಳಚರಂಡಿ ಕಾಮಗಾರಿಗೆ ಶಾಸಕರು 55 ಲಕ್ಷ ರೂ.ಅನುದಾನ ನೀಡಿದ್ದಾರೆ. ಆದಷ್ಟು ಬೇಗ ಪಾಲಿಕೆಯ ಕಾಮಗಾರಿ ಪೂರ್ಣ ಗೊಳಿಸುತ್ತೇವೆ. ಇಲ್ಲಿ ಮುಡಾದವರ ಕಾಮಗಾರಿಯೂ ಬಾಕಿ ಇದೆ. ಕೆಲಸ ಮುಗಿಸಲು ಪಾಲಿಕೆ
ಕೈ ಜೋಡಿಸಲಿದೆ ಅನಂತು, ಅಭಿವೃದ್ಧಿ ಅಧಿಕಾರಿ, ವಲಯ ಕಚೇರಿ

ಅರೆ ಬರೆ ಯುಜಿಡಿ ಕಾಮಗಾರಿಯಿಂದ ಚರಂಡಿಯಲ್ಲಿ ನೀರು ಮುಂದೆ ಹೋಗದೆ ಹಿಂದಕ್ಕೆ ಬರುತ್ತಿತ್ತು. ಇದರಿಂದ ಚರಂಡಿ ನೀರು ರಸ್ತೆಗೆ ಬಂದು ಮನೆಗಳಿಗೆ ನುಗ್ಗಿತ್ತು. ಮಸೀದಿಯಲ್ಲಿದ್ದ ಚಾಪೆಗಳು ಕೊಳಕು ನೀರಿನಲ್ಲಿ ತೇಲುತ್ತಿದ್ದವು. ನಮ್ಮ ಮನೆಗೆ ನೀರು ನುಗ್ಗಿ ಸಾಮಾನೆಲ್ಲ ಹಾಳಾಯಿತು
ರೌಫ್, ಸ್ಥಳೀಯ

ಮಳೆ ನೀರು ರಸ್ತೆಯಲ್ಲಿ ತುಂಬಿ ಮನೆಯೊಳಗೆ ಕ್ಷಣ ಮಾತ್ರದಲ್ಲಿ ಹರಿದು ಮನೆಯ ಎಲ್ಲ ಕೋಣೆಗಳಿಗೂ ನುಗ್ಗಿತು, ಆಗಷ್ಟೇ ತಂದಿದ್ದ ರೇಷನ್ ಎಲ್ಲ ಹಾಳಾಯಿತು. ಹಾಸಿಗೆ, ಬಟ್ಟೆಗಳೂ ಹಾಳಾಗಿವೆ.

ಫಯಾಜ್, ಸ್ಥಳೀಯ

ಆಲ್‌ಫ್ರೆಡ್‌ ಸಾಲೋಮನ್

ಮೂಲತಃ ಮೈಸೂರಿನವನಾದ ನಾನು ಮಹಾರಾಜ ಕಾಲೇಜಿನಲ್ಲಿ ಪದವಿ ಮುಗಿಸಿ, ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ಮತ್ತು ಸಾಮೂಹಿಕ ಸಂವಹನ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಬೆಂಗಳೂರಿನ ಅಭಿಮಾನ ಪ್ರಕಾಶನದ ಅಭಿಮಾನಿ, ಅರಗಿಣಿ, ಪತ್ರಿಕೆ ಮೂಲಕ 1988ರಲ್ಲಿ ಪತ್ರಕರ್ತನಾಗಿ ವೃತ್ತಿ ಆರಂಭಿಸಿ, ರೂಪತಾರ, ಉದಯವಾಣಿ, ಗೃಹಶೋಭ, ಉಷಾಕಿರಣ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿರುತ್ತೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ.

Recent Posts

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

4 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

1 hour ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

2 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

3 hours ago