ಪ್ರಶಾಂತ್ ಎಸ್.
ಎಂ.ಎಸ್.ಗುರುಪಾದಸ್ವಾಮಿ ರಸ್ತೆಯಲ್ಲಿ ಬಗೆಹರಿಯದ ಯುಜಿಡಿ, ರಾಜಕಾಲುವೆ
ಸಮಸ್ಯೆ; ದುರ್ನಾತದಿಂದ ಮೂಗುಮುಚ್ಚಿಕೊಂಡೇ ಓಡಾಡುವ ಸಾರ್ವಜನಿಕರು
ಮೈಸೂರು: ಒಳಚರಂಡಿ ಹಾಗೂ ರಾಜಕಾಲುವೆ ಅವ್ಯವಸ್ಥೆಯಿಂದಾಗಿ ಕೊಳಚೆ ನೀರು ಎಲೆ ತೋಟಕ್ಕೆ ಹರಿಯುತ್ತಿದ್ದು, ಸಾರ್ವಜನಿಕರು ಕಂಗಾಲಾಗಿದ್ದಾರೆ.
ನಗರದ ನಾಚನಹಳ್ಳಿ ಪಾಳ್ಯದ ಎಂ.ಎಸ್.ಗುರುಪಾದಸ್ವಾಮಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೀಳ್ಯದೆಲೆ ರೈತ ಸಂಘದ ನಾಮಫಲಕದ ಹತ್ತಿರ ಕೊಳಚೆ ನೀರು ಮುಂದೆ ಸಾಗದೇ ನಿಂತಲ್ಲೇ ನಿಂತು ಸಂಗ್ರಹವಾಗಿರುವುದರಿಂದ ದುರ್ನಾತ ಬೀರುತ್ತಿದೆ. ಅವೈಜ್ಞಾನಿಕ ಚರಂಡಿಗಳಿಂದ ಮೊದಲೇ ತ್ಯಾಜ್ಯ ನೀರು ಸರಾಗವಾಗಿ ಹರಿಯುವುದಿಲ್ಲ. ಇನ್ನು ಆಗಾಗ ಯುಜಿಡಿಯೂ ಕಟ್ಟಿಕೊಳ್ಳುತ್ತದೆ. ಈ ಕಾರಣಗಳಿಂದಾಗಿ ಕೊಳಚೆ ನೀರು ಉಕ್ಕಿ ರಸ್ತೆಯೇ ಮೇಲೆ ಹರಿಯುತ್ತದೆ. ಈ ದುರ್ನಾತದಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಮೃತ್ಯುಕೂಪಗಳಾದ ರಾಜಕಾಲುವೆ: ಎಲೆ ತೋಟಕ್ಕೆ ಹೊಂದಿ ಕೊಂಡಂತಿರುವ ರಾಜಕಾಲುವೆಗಳು ರಸ್ತೆಗಿಂತ ನಾಲ್ಕೈದು ಇಂಚು ಕೆಳಗಿದ್ದರೆ ಕೆಲವು ಕಡೆಗಳಲ್ಲಿ ರಸ್ತೆಗಿಂತ ಒಂದು ಅಡಿಯಷ್ಟು ಮೇಲೆ ನಿರ್ಮಿಸಲಾಗಿದೆ. ಇದರಿಂದಾಗಿ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ರಾಜಕಾಲುವೆ ಸರಿಪಡಿಸುವಂತೆ ಹಲವು ಬಾರಿ ಸಂಬಂಧಿಸಿದ ನಗರಪಾಲಿಕೆ ಅಽಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಆರೋಪಿಸಿದರು.
ಇನ್ನು ನಗರದಲ್ಲಿ ಈಗಾಗಲೇ ಯುಜಿಡಿ ನೀರು ಸಂಸ್ಕರಿಸುವ ಘಟಕ ನಿರ್ಮಾಣವಾಗಿದ್ದು, ಈ ಘಟಕಗಳಲ್ಲಿ ಸಂಸ್ಕರಣೆಗೊಂಡ ನೀರನ್ನು ಎಲ್ಲಿಗೆ ಹರಿಸಲಾಗುತ್ತಿದೆ ಎಂಬುದರ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ. ಇದರ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಕಚೇರಿಗೆ ತೆರಳಿ ಮನವಿ ಮಾಡಿದರೂ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ಎಲೆ ತೋಟದ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
” ಯುಜಿಡಿ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ಅದಕ್ಕೆ ಪರಿಹಾರವಾಗಿ ಹೂಳೆತ್ತುವ ಯಂತ್ರೋಪಕರಣಗಳನ್ನು ಖರೀದಿ ಮಾಡಲಿ ದ್ದೇವೆ. ದೂರುಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಒಳಚರಂಡಿ ಹಾಗೂ ರಾಜಕಾಲುವೆ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ಸೂಕ್ತ ಕ್ರಮ ಕೈಗೊಳ್ಳುತ್ತೇವೆ.”
-ಶೇಖ್ ತನ್ವೀರ್ ಆಸೀಫ್ ನಗರಪಾಲಿಕೆ ಆಯುಕ್ತರು
” ಯುಜಿಡಿ ಕಟ್ಟಿಕೊಳ್ಳುವಂತಹ ಜಾಗಗಳನ್ನು ಗುರುತಿಸಿ ನಗರಪಾಲಿಕೆ ಸಿಬ್ಬಂದಿ ಸ್ವಚ್ಛಗೊಳಿಸಬೇಕು. ಕಾಲುವೆಗಳು ಒತ್ತುವರಿಯಾಗಿದ್ದರೆ ಅದನ್ನು ತೆರವುಗೊಳಿಸಿ ಎಲೆತೋಟಕ್ಕೆ ಬರುವಂತಹ ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು.”
-ಅಣ್ಣಯ್ಯ, ಅಧ್ಯಕ್ಷ ,
” ವೀಳ್ಯದೆಲೆ ರೈತ ಭೂ ಹೋರಾಟ ಸಮಿತಿ ಯುಜಿಡಿ ನೀರು ರಸ್ತೆಯ ಅಕ್ಕಪಕ್ಕದಲ್ಲಿರುವ ಎಲೆ ತೋಟಗಳಿಗೆ ಹರಿದು ವೀಳ್ಯೆದೆಲೆ ಬೆಳೆ ನಾಶವಾಗುತ್ತಿದೆ. ಸುತ್ತಮುತ್ತಲಿನ ಜಾಗವೆಲ್ಲ ಗಬ್ಬೆದ್ದು ನಾರುತ್ತಿದೆ. ನಗರಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಹೀಗಾದರೆ ಬೆಳೆಗಾರರು ಹೇಗೆ ಜೀವನ ನಡೆಸಬೇಕು.”
-ಈಶ್ವರ್, ಎಲೆ ತೋಟದ ಮಾಲೀಕರು
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…