ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರದ ಗೌತಮ ಪ್ರೌಢಶಾಲೆಯ ಮುಂಭಾಗದ ದೊಡ್ಡ ಚರಂಡಿಯನ್ನು ಸ್ವಚ್ಛಗೊಳಿಸದೆ ಕೊಳಚೆ ನೀರು ಶಾಲೆಯ ಆವರಣಕ್ಕೆ ನುಗ್ಗುತ್ತಿದೆ.
ಗ್ರಾಮದ ಕೆಲವು ಬೀದಿಗಳ ನೀರು ಹರಿದು ಹೋಗಲು ನಿರ್ಮಿಸಿರುವ ಚರಂಡಿಯು ಗೌತಮ ಪ್ರೌಢಶಾಲೆಯ ಆವರಣವನ್ನು ಹಾದು ಹೋಗಿದೆ. ಗ್ರಾಮದ ಅಂಚಿನಲ್ಲಿರುವ ಶಾಲೆಯ ಕಾಂಪೌಂಡ್ಗೆ ಹೊಂದಿಕೊಂಡಂತೆ ಇರುವ ಚರಂಡಿಯನ್ನು ೬ ತಿಂಗಳಿಂದಲೂ ಸ್ವಚ್ಛಗೊಳಿಸಿಲ್ಲ.
ಚರಂಡಿಯಲ್ಲಿ ಕೊಳಚೆ ಹೂಳು ತುಂಬಿಕೊಂಡಿದೆ. ಚರಂಡಿ ಒಳಗೆ ಮತ್ತು ಎಡ, ಬಲ ಬದಿಗಳಲ್ಲಿ ಪಾರ್ಥೇನಿಯಂ ಹಾಗೂ ಇತರೆ ಕಳೆ ಗಿಡಗಳು ಮಂಡಿಯುದ್ದ ಬೆಳೆದು ನಿಂತಿವೆ. ಪರಿಣಾಮ ಕೊಳಚೆ ನೀರು ಸರಾಗವಾಗಿ ಮುಂದೆ ಹರಿಯದೆ ಸಂಗ್ರಹಗೊಂಡು ಶಾಲೆಯ ಆವರಣದತ್ತ ಹರಿಯತೊಡಗಿದೆ.
ಶಾಲೆಯ ವಿದ್ಯಾರ್ಥಿಗಳು ಆವರಣದಲ್ಲಿ ಬೆಳಿಗ್ಗೆ ಪ್ರಾರ್ಥನೆ ಮಾಡುತ್ತಾರೆ. ನಂತರ ಗ್ರೂಪ್ ಸ್ಟಡಿಯಲ್ಲಿ ಪಾಲ್ಗೊಳ್ಳುತ್ತಾರೆ. ಸಂಜೆ ಆಟೋಟಗಳಲ್ಲಿ ತೊಡಗುತ್ತಾರೆ. ಚರಂಡಿಯ ಕೊಳಚೆ ನೀರಿನ ದುರ್ವಾಸನೆ ಸಹಿಸಿಕೊಳ್ಳ ಬೇಕಿದೆ. ಶಾಲೆಯ ಆವರಣದತ್ತಲೇ ನೀರು ನುಗ್ಗುತ್ತಿದೆ.
ಚರಂಡಿ ಸ್ವಚ್ಛಗೊಳ್ಳದ ಕಾರಣ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಬೆಳಗಿನ ಸಮಯವೇ ವಿದ್ಯಾರ್ಥಿಗಳಿಗೆ ಸೊಳ್ಳೆಗಳು ಕಚ್ಚುತ್ತಿವೆ. ಮುಂಗಾರು ಮಳೆಗಾಲವಾಗಿದ್ದು ಹೆಚ್ಚು ಗಾಳಿ ಬೀಸುತ್ತಿರುವುದರಿಂದ ಕೊಳಚೆಯ ದುರ್ವಾಸನೆ ತರಗತಿಗಳಿಗೂ ಹರಡಿದೆ. ಬೊಮ್ಮಲಾಪುರ ಗ್ರಾಮ ಪಂಚಾಯಿತಿ ಕೇಂದ್ರವೂ ಹೌದು. ಗೌತಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಬೊಮ್ಮಲಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಶಿಯಾ ಅವರಿಗೆ ಜೂನ್ ೧೭ ಮತ್ತು ಜುಲೈ ೮ರಂದು ೨ ಬಾರಿ ಚರಂಡಿಯನ್ನು ಸ್ವಚ್ಛ ಮಾಡಿಸಿಕೊಡಿ ಎಂದು ಮನವಿ ಸಲ್ಲಿಸಿ, ಕೋರಿದ್ದಾರೆ.
ಚರಂಡಿಯ ಹೂಳು ತೆಗೆಸಿ ಶುಚಿಗೊಳಿಸದೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಪಿಡಿಒಗೆ ಮನವಿ ಸಲ್ಲಿಸಿ ಒಂದು ತಿಂಗಳಾಗಿದೆ. ಆದರೂ ಅವರು ನಿರ್ಲಕ್ಷ ತಾಳಿದ್ಧಾರೆ. ಶಾಲೆಯ ವಿದ್ಯಾರ್ಥಿಗಳ ಹಿತ ಹಾಗೂ ಗ್ರಾಮದ ನೈರ್ಮಲ್ಯಕ್ಕೆ ಗ್ರಾಪಂ ಆದ್ಯತೆ ನೀಡುತ್ತಿಲ್ಲ ಎಂದು ಪೋಷಕರು ಹಾಗೂ ಶಾಲೆಯ ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನೂ ಸ್ವಲ್ಪ ದಿನ ಕಾಯ್ದು ನೋಡುತ್ತೇವೆ. ಚರಂಡಿಯನ್ನು ಶುಚಿಗೊಳಿಸದಿದ್ದರೆ ಜಿಪಂ ಸಿಇಒ ಮೋನಾ ರೋತ್ ಮತ್ತು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
” ಬೊಮ್ಮಲಾಪುರ ಹಾಗೂ ಸುತ್ತಮುತ್ತ ಇತ್ತೀಚೆಗೆ ಮಳೆಯಾಗುತ್ತಿದೆ. ಇದರಿಂದಾಗಿ ಚರಂಡಿ ಸ್ವಚ್ಛತೆಗಾರರು ಕೆಲಸಕ್ಕೆ ಬರುತ್ತಿಲ್ಲ. ಆದ್ದರಿಂದ ವಿಳಂಬವಾಗಿದೆ. ವಿನಾಕಾರಣ ನಿರ್ಲಕ್ಷ ಮಾಡುತ್ತಿಲ್ಲ. ಇನ್ನು ೩-೪ ದಿನಗಳಲ್ಲಿ ಶುಚಿಗೊಳಿಸಲಾಗುವುದು.”
-ರಶಿಯಾ, ಗ್ರಾಪಂ ಅಭಿವೃದ್ಧಿ ಅಧಿಕಾರಿ, ಬೊಮ್ಮಲಾಪುರ.
” ನಮ್ಮ ಶಾಲೆಯ ಬಳಿ ಹಾದುಹೋಗಿರುವ ಚರಂಡಿಯನ್ನು ಶುಚಿ ಮಾಡಿಸಿಕೊಡಿ ಎಂದು ಪಿಡಿಒ ಅವರಿಗೆ ಒಂದು ತಿಂಗಳ ಹಿಂದೆಯೇ ಮನವಿ ಸಲ್ಲಿಸಿದ್ದೇನೆ. ಅವರು ಇತ್ತ ಗಮನಹರಿಸುತ್ತಿಲ್ಲ.”
-ಎಸ್.ವೀರಭದ್ರಯ್ಯ, ಮುಖ್ಯ ಶಿಕ್ಷಕರು, ಗೌತಮ ಪ್ರೌಢಶಾಲೆ.
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…