Andolana originals

ಕಾಯಕಲ್ಪಕ್ಕೆ ಕಾದಿರುವ ಶಂಭುಲಿಂಗಯ್ಯನ ಕಟ್ಟೆ ಸ್ಮಶಾನ

ಎಸ್.ಕುಮಾರ್

ಶ್ರೀರಂಗಪಟ್ಟಣದ: ಪಟ್ಟಣದಲ್ಲಿ ಸಾವಿಗೀಡಾದವರ ಅಂತ್ಯಕ್ರಿಯೆ ನೆರವೇರಿಸಲು ಇರುವ ಶಂಭುಲಿಂಗಯ್ಯನ ಕಟ್ಟೆ ಸ್ಮಶಾನ ಅವ್ಯವಸ್ಥೆಯಿಂದ ಕೂಡಿದ್ದು, ಗಬ್ಬು ನಾರುತ್ತಿದೆ. ಎಲ್ಲೆಂದರಲ್ಲಿ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಪುಂಡ ಪೋಕರಿಗಳು ಈ ಜಾಗವನ್ನು ಮೋಜು ಮಸ್ತಿಯ ತಾಣವನ್ನಾಗಿ ಮಾಡಿಕೊಂಡಿದ್ದಾರೆ. ಮದ್ಯ, ಗಾಂಜಾ ಸೇವನೆ, ಇಸ್ಪೀಟ್ ಆಡಲು ಈ ಸ್ಥಳವನ್ನು ಅಡ್ಡೆಯನ್ನಾಗಿ ಮಾಡಿ ಕೊಂಡಿದ್ದಾರೆ.

ರಂಗನಾಥ ನಗರದ ಕೆಲವು ನಿವಾಸಿಗಳು ಕಸವನ್ನು ತಂದು ಇಲ್ಲಿಯೇ ಬಿಸಾಡುತ್ತಾರೆ. ಸಿಕ್ಕ ಸಿಕ್ಕಲ್ಲಿ ಮಲ-ಮೂತ್ರ ವಿಸರ್ಜನೆ ಮಾಡಿ ಕೆಲವರು ಈ ಸ್ಥಳ ಗಬ್ಬೆದ್ದು ನಾರುವಂತೆ ಮಾಡಿದ್ದಾರೆ. ಅಂತ್ಯಕ್ರಿಯೆಗೆ ಹೊರಗಿನಿಂದ ಬರುವವರು ಹಾಗೂ ಸ್ಥಳೀಯರು ಇಲ್ಲಿ ನಿಲ್ಲಲು ಸಾಧ್ಯವಾಗದ ಪರಿಸ್ಥಿತಿ ಉದ್ಭವವಾಗಿದೆ. ಮೂಗು ಮುಚ್ಚಿಕೊಂಡು ಅಂತ್ಯಕ್ರಿಯೆಯಲ್ಲಿ ಭಾಗಿ ಗಳಾಗಬೇಕಾದ ಮುಜುಗರದ ವಾತಾವರಣ ಸೃಷ್ಟಿಯಾಗಿದೆ.

ಅಂತ್ಯಕ್ರಿಯೆಗೆ ಬರು ವವರು ವಿಶ್ರಾಂತಿ ಪಡೆಯಲು ಕೂರುವ ಸ್ಥಳಗಳ ಚಾವಣಿ ಕಳಚಿ ಬೀಳುವ ಹಂತ ತಲುಪಿವೆ. ಚಾವಣಿಯ ಶೀಟುಗಳು ಒಡೆದು ಚೂರಾಗಿದ್ದು, ಮಳೆ ಬಂದರೆ ನಿಲ್ಲಲು ಸಾಧ್ಯವಾಗದ ಪರಿಸ್ಥಿತಿ ಇದೆ. ಹೀಗಾಗಿ ಜನರು ಪ್ರಾಣ ಭಯದಿಂದ ಇಲ್ಲಿ ನಿಲ್ಲಲು ಹಿಂಜರಿಯುತ್ತಿದ್ದಾರೆ. ಪುಂಡು ಪೋಕರಿಗಳು ಸ್ಮಶಾನದಲ್ಲಿ ಮಧ್ಯಪಾನ ಮಾಡಿ, ಮದ್ಯದ ಬಾಟಲಿಗಳನ್ನು ಹೊಡೆದು ಹಾಕುವುದರಿಂದ ಜನರು ಸಂಚರಿಸುವ ದಾರಿಯಲ್ಲಿ ಗಾಜಿನ ಚೂರುಗಳು ಚೆಲ್ಲಿಕೊಂಡಿದ್ದು ಇಲ್ಲಿ ಸಂಚರಿಸಲೂ ಆಗುತ್ತಿಲ್ಲ, ಅಲ್ಲದೆ, ಎಲ್ಲೆಂದರಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿದ್ದು, ಅಂತ್ಯಕ್ರಿಯೆ ನೆರವೇರಿಸಲೂ ಕಷ್ಟವಾಗುತ್ತಿದೆ.

ಇಲ್ಲಿನ ಅವಸ್ಥೆಯನ್ನು ಕಂಡೂ ಕಾಣದಂತಿರುವ ಪುರಸಭೆ ಅಽಕಾರಿಗಳು ಹಾಗೂ ಜನ ಪ್ರತಿನಿಧಿಗಳು ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಸ್ಮಶಾನವನ್ನು ಅಭಿವೃದ್ಧಿಪಡಿಸಬೇಕೆಂದು ಪಟ್ಟಣದ ನಾಗರಿಕರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

11 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

12 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

12 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

12 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

13 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

13 hours ago