Andolana originals

ಕಾಯಕಲ್ಪಕ್ಕೆ ಕಾದಿರುವ ಶಂಭುಲಿಂಗಯ್ಯನ ಕಟ್ಟೆ ಸ್ಮಶಾನ

ಎಸ್.ಕುಮಾರ್

ಶ್ರೀರಂಗಪಟ್ಟಣದ: ಪಟ್ಟಣದಲ್ಲಿ ಸಾವಿಗೀಡಾದವರ ಅಂತ್ಯಕ್ರಿಯೆ ನೆರವೇರಿಸಲು ಇರುವ ಶಂಭುಲಿಂಗಯ್ಯನ ಕಟ್ಟೆ ಸ್ಮಶಾನ ಅವ್ಯವಸ್ಥೆಯಿಂದ ಕೂಡಿದ್ದು, ಗಬ್ಬು ನಾರುತ್ತಿದೆ. ಎಲ್ಲೆಂದರಲ್ಲಿ ಕಸದ ರಾಶಿ ಕಣ್ಣಿಗೆ ರಾಚುತ್ತಿದೆ. ಪುಂಡ ಪೋಕರಿಗಳು ಈ ಜಾಗವನ್ನು ಮೋಜು ಮಸ್ತಿಯ ತಾಣವನ್ನಾಗಿ ಮಾಡಿಕೊಂಡಿದ್ದಾರೆ. ಮದ್ಯ, ಗಾಂಜಾ ಸೇವನೆ, ಇಸ್ಪೀಟ್ ಆಡಲು ಈ ಸ್ಥಳವನ್ನು ಅಡ್ಡೆಯನ್ನಾಗಿ ಮಾಡಿ ಕೊಂಡಿದ್ದಾರೆ.

ರಂಗನಾಥ ನಗರದ ಕೆಲವು ನಿವಾಸಿಗಳು ಕಸವನ್ನು ತಂದು ಇಲ್ಲಿಯೇ ಬಿಸಾಡುತ್ತಾರೆ. ಸಿಕ್ಕ ಸಿಕ್ಕಲ್ಲಿ ಮಲ-ಮೂತ್ರ ವಿಸರ್ಜನೆ ಮಾಡಿ ಕೆಲವರು ಈ ಸ್ಥಳ ಗಬ್ಬೆದ್ದು ನಾರುವಂತೆ ಮಾಡಿದ್ದಾರೆ. ಅಂತ್ಯಕ್ರಿಯೆಗೆ ಹೊರಗಿನಿಂದ ಬರುವವರು ಹಾಗೂ ಸ್ಥಳೀಯರು ಇಲ್ಲಿ ನಿಲ್ಲಲು ಸಾಧ್ಯವಾಗದ ಪರಿಸ್ಥಿತಿ ಉದ್ಭವವಾಗಿದೆ. ಮೂಗು ಮುಚ್ಚಿಕೊಂಡು ಅಂತ್ಯಕ್ರಿಯೆಯಲ್ಲಿ ಭಾಗಿ ಗಳಾಗಬೇಕಾದ ಮುಜುಗರದ ವಾತಾವರಣ ಸೃಷ್ಟಿಯಾಗಿದೆ.

ಅಂತ್ಯಕ್ರಿಯೆಗೆ ಬರು ವವರು ವಿಶ್ರಾಂತಿ ಪಡೆಯಲು ಕೂರುವ ಸ್ಥಳಗಳ ಚಾವಣಿ ಕಳಚಿ ಬೀಳುವ ಹಂತ ತಲುಪಿವೆ. ಚಾವಣಿಯ ಶೀಟುಗಳು ಒಡೆದು ಚೂರಾಗಿದ್ದು, ಮಳೆ ಬಂದರೆ ನಿಲ್ಲಲು ಸಾಧ್ಯವಾಗದ ಪರಿಸ್ಥಿತಿ ಇದೆ. ಹೀಗಾಗಿ ಜನರು ಪ್ರಾಣ ಭಯದಿಂದ ಇಲ್ಲಿ ನಿಲ್ಲಲು ಹಿಂಜರಿಯುತ್ತಿದ್ದಾರೆ. ಪುಂಡು ಪೋಕರಿಗಳು ಸ್ಮಶಾನದಲ್ಲಿ ಮಧ್ಯಪಾನ ಮಾಡಿ, ಮದ್ಯದ ಬಾಟಲಿಗಳನ್ನು ಹೊಡೆದು ಹಾಕುವುದರಿಂದ ಜನರು ಸಂಚರಿಸುವ ದಾರಿಯಲ್ಲಿ ಗಾಜಿನ ಚೂರುಗಳು ಚೆಲ್ಲಿಕೊಂಡಿದ್ದು ಇಲ್ಲಿ ಸಂಚರಿಸಲೂ ಆಗುತ್ತಿಲ್ಲ, ಅಲ್ಲದೆ, ಎಲ್ಲೆಂದರಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿದ್ದು, ಅಂತ್ಯಕ್ರಿಯೆ ನೆರವೇರಿಸಲೂ ಕಷ್ಟವಾಗುತ್ತಿದೆ.

ಇಲ್ಲಿನ ಅವಸ್ಥೆಯನ್ನು ಕಂಡೂ ಕಾಣದಂತಿರುವ ಪುರಸಭೆ ಅಽಕಾರಿಗಳು ಹಾಗೂ ಜನ ಪ್ರತಿನಿಧಿಗಳು ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಸ್ಮಶಾನವನ್ನು ಅಭಿವೃದ್ಧಿಪಡಿಸಬೇಕೆಂದು ಪಟ್ಟಣದ ನಾಗರಿಕರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago