Andolana originals

ಶೆಟ್ಟಿಹಳ್ಳಿ : ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿ ಕಳಪೆ

84 ಲಕ್ಷ ರೂ. ವೆಚ್ಚದ ಕಾಮಗಾರಿಯಲ್ಲಿ ಸಿಮೆಂಟ್‌ಗಿಂತ ಎಂ ಸ್ಯಾಂಡ್‌ ಹೆಚ್ಚು ಬಳಕೆ: ಆರೋಪ
ಮಾಮರಶಿ

ಮಳವಳ್ಳಿ: ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದಿಂದ ಪಟ್ಟಣದ ಎಸ್‌ಸಿ, ಎಸ್‌ಟಿ ಬಾಲಕರ ಹಾಸ್ಟೆಲ್‌ನವರೆಗೆ ೮೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆಪಾದಿಸಿದ್ದಾರೆ.

ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಮತ್ತು ಚರಂಡಿ ಕಾಮಗಾರಿ ಸಂಬಂಧ ಶಾಸಕರಾದ ಪಿ. ಎಂ. ನರೇಂದ್ರಸ್ವಾಮಿ ಅವರು ಹೆಚ್ಚಿನ ಕಾಳಜಿ ವಹಿಸಿ ೨೦೨೨-೨೩ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸಲು ಹಂಚಿಕೆಯಾದ ಅನುದಾನದಲ್ಲಿ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರು. ಆರಂಭದಲ್ಲಿ ತಡವಾದರೂ ನಂತರ ಬಿರುಸಿನಿಂದ ಸಾಗಿರುವ ಕಾಮಗಾರಿಯ ಗುಣಮಟ್ಟ ಕಳಪೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸಾವಿರಾರು ಜನರ ಸಂಚಾರ:ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಜನರು, ಶಾಲಾ ಕಾಲೇಜು ಮಕ್ಕಳು ಸಂಚರಿಸುತ್ತಾರೆ. ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅಳವಡಿಸಿಕೊಂಡು ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಮಾಡಬೇಕಿದೆ.

ಸಿಮೆಂಟ್ ರಸ್ತೆ ಕಾಮಗಾರಿ ಎಂ ಸ್ಯಾಂಡ್‌ಮಯ! : ಈ ರಸ್ತೆ ಸಿಮೆಂಟ್ ರಸ್ತೆಯಾಗಿದ್ದು ಎಲ್ಲವೂ ಎಂ. ಸ್ಯಾಂಡ್ ಮಯವಾಗಿದೆ, ಇದರಲ್ಲಿ ಎಷ್ಟು ಸಿಮೆಂಟ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ. ಸೇತುವೆ ಕಾಮಗಾರಿಯಲ್ಲೂ ಬರಿ ಎಂ. ಸ್ಯಾಂಡ್ ಹೆಚ್ಚಾಗಿ ಬಳಸಿ ರುವುದರಿಂದ ಎಲ್ಲವೂ ಎಂ ಸ್ಯಾಂಡ್‌ಮಯ ಎನ್ನಬಹುದು.

ಗುಣಮಟ್ಟದ ಕಾಮಗಾರಿ ಮಾಡಲು ಒತ್ತಾಯ: ದಿನನಿತ್ಯ ಸಾವಿರಾರು ಜನರು, ಶಾಲಾ ಕಾಲೇಜು ಮಕ್ಕಳು, ವಾಹನಗಳ ಸಂಚರಿಸುವುದರಿಂದ ಈ ರಸ್ತೆ ಗುಟ್ಟಮಟ್ಟದ ಕಾಮಗಾರಿ ಆಗಬೇಕು, ಸುರಕ್ಷತೆ ನಿಯಮಗಳನ್ನು ಅಳವಡಿಸಿಕೊಂಡು ಶಾಶ್ವತ ಗುಣಮಟ್ಟದಿಂದ ಕಾಮಗಾರಿ ನಡೆಸುಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಸೇತುವೆ ಅಗಲೀಕರಣಕ್ಕೆ ಸಮಾಜ ಸೇವಕರ ನೆರವು: ೮೪ ಲಕ್ಷ ಯೋಜನಾ ವೆಚ್ಚದ ಕಾಂಕ್ರಿಟ್ ರಸ್ತೆಗೆ ಅಡ್ಡಲಾಗಿ ಹೋಗಿರುವ ಹಳೆಯ ಸೇತುವೆ ವಿಸ್ತರಿಸಲು ಸಮಾಜ ಸೇವಕ ರಾಮಕೃಷ್ಣ ಅವರು ಸ್ವತಃ ೩ ಲಕ್ಷ ಹಣ ನೀಡಿ ಸೇತುವೆ ಅಗಲೀಕರಣಕ್ಕೆ ಮುಂದಾಗಿದ್ದಾರೆ.

೮೪ ಲಕ್ಷ ರೂ. ಯೋಜನಾ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ರಸ್ತೆಯ ಮಧ್ಯೆ ಅಡ್ಡಲಾಗಿರುವ ಸೇತುವೆ ವಿಸ್ತರಣೆಗೆ ಸ್ಥಳೀಯ ಸಮಾಜ ಸೇವಕ ರಾಮಕೃಷ್ಣ ಅವರು ನೆರವು ನೀಡಿದ್ದಾರೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಿರ್ವಹಿಸುತ್ತಿದ್ದಾರೆ. -ಎಸ್. ಕೆ. ಮನೋಹರ್ ಅರಸ್, ಉಪಾಧ್ಯಕ್ಷರು, ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ.

ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಬಳಸುತ್ತಿರುವ ಸಿಮೆಂಟ್ ಕಳಪೆಯಾಗಿದೆ. ಈ ಬಗ್ಗೆ ಈ ರಸ್ತೆಯ ಯೋಜನಾ ವೆಚ್ಚದ ವಿವರವನ್ನು ಕೇಳಿದರೂ ಈವರೆಗೂ ನೀಡಿಲ್ಲ. ಸುರಕ್ಷತಾ ನಿಯಮಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಕಾಮಗಾರಿ ನಡೆಸದಿದ್ದರೆ ಪ್ರತಿಭಟನೆ ನಡೆಸುತ್ತೇನೆ. –ಶಂಕರ ಮೂರ್ತಿ, ಸಮಾಜ ಸೇವಕರು, ಶೆಟ್ಟಹಳ್ಳಿ.

 

ಆಂದೋಲನ ಡೆಸ್ಕ್

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

6 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

6 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

6 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

7 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

8 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

9 hours ago