Andolana originals

ಶೆಟ್ಟಿಹಳ್ಳಿ : ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿ ಕಳಪೆ

84 ಲಕ್ಷ ರೂ. ವೆಚ್ಚದ ಕಾಮಗಾರಿಯಲ್ಲಿ ಸಿಮೆಂಟ್‌ಗಿಂತ ಎಂ ಸ್ಯಾಂಡ್‌ ಹೆಚ್ಚು ಬಳಕೆ: ಆರೋಪ
ಮಾಮರಶಿ

ಮಳವಳ್ಳಿ: ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದಿಂದ ಪಟ್ಟಣದ ಎಸ್‌ಸಿ, ಎಸ್‌ಟಿ ಬಾಲಕರ ಹಾಸ್ಟೆಲ್‌ನವರೆಗೆ ೮೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆಪಾದಿಸಿದ್ದಾರೆ.

ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಮತ್ತು ಚರಂಡಿ ಕಾಮಗಾರಿ ಸಂಬಂಧ ಶಾಸಕರಾದ ಪಿ. ಎಂ. ನರೇಂದ್ರಸ್ವಾಮಿ ಅವರು ಹೆಚ್ಚಿನ ಕಾಳಜಿ ವಹಿಸಿ ೨೦೨೨-೨೩ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸಲು ಹಂಚಿಕೆಯಾದ ಅನುದಾನದಲ್ಲಿ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರು. ಆರಂಭದಲ್ಲಿ ತಡವಾದರೂ ನಂತರ ಬಿರುಸಿನಿಂದ ಸಾಗಿರುವ ಕಾಮಗಾರಿಯ ಗುಣಮಟ್ಟ ಕಳಪೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸಾವಿರಾರು ಜನರ ಸಂಚಾರ:ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಜನರು, ಶಾಲಾ ಕಾಲೇಜು ಮಕ್ಕಳು ಸಂಚರಿಸುತ್ತಾರೆ. ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅಳವಡಿಸಿಕೊಂಡು ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಮಾಡಬೇಕಿದೆ.

ಸಿಮೆಂಟ್ ರಸ್ತೆ ಕಾಮಗಾರಿ ಎಂ ಸ್ಯಾಂಡ್‌ಮಯ! : ಈ ರಸ್ತೆ ಸಿಮೆಂಟ್ ರಸ್ತೆಯಾಗಿದ್ದು ಎಲ್ಲವೂ ಎಂ. ಸ್ಯಾಂಡ್ ಮಯವಾಗಿದೆ, ಇದರಲ್ಲಿ ಎಷ್ಟು ಸಿಮೆಂಟ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ. ಸೇತುವೆ ಕಾಮಗಾರಿಯಲ್ಲೂ ಬರಿ ಎಂ. ಸ್ಯಾಂಡ್ ಹೆಚ್ಚಾಗಿ ಬಳಸಿ ರುವುದರಿಂದ ಎಲ್ಲವೂ ಎಂ ಸ್ಯಾಂಡ್‌ಮಯ ಎನ್ನಬಹುದು.

ಗುಣಮಟ್ಟದ ಕಾಮಗಾರಿ ಮಾಡಲು ಒತ್ತಾಯ: ದಿನನಿತ್ಯ ಸಾವಿರಾರು ಜನರು, ಶಾಲಾ ಕಾಲೇಜು ಮಕ್ಕಳು, ವಾಹನಗಳ ಸಂಚರಿಸುವುದರಿಂದ ಈ ರಸ್ತೆ ಗುಟ್ಟಮಟ್ಟದ ಕಾಮಗಾರಿ ಆಗಬೇಕು, ಸುರಕ್ಷತೆ ನಿಯಮಗಳನ್ನು ಅಳವಡಿಸಿಕೊಂಡು ಶಾಶ್ವತ ಗುಣಮಟ್ಟದಿಂದ ಕಾಮಗಾರಿ ನಡೆಸುಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಸೇತುವೆ ಅಗಲೀಕರಣಕ್ಕೆ ಸಮಾಜ ಸೇವಕರ ನೆರವು: ೮೪ ಲಕ್ಷ ಯೋಜನಾ ವೆಚ್ಚದ ಕಾಂಕ್ರಿಟ್ ರಸ್ತೆಗೆ ಅಡ್ಡಲಾಗಿ ಹೋಗಿರುವ ಹಳೆಯ ಸೇತುವೆ ವಿಸ್ತರಿಸಲು ಸಮಾಜ ಸೇವಕ ರಾಮಕೃಷ್ಣ ಅವರು ಸ್ವತಃ ೩ ಲಕ್ಷ ಹಣ ನೀಡಿ ಸೇತುವೆ ಅಗಲೀಕರಣಕ್ಕೆ ಮುಂದಾಗಿದ್ದಾರೆ.

೮೪ ಲಕ್ಷ ರೂ. ಯೋಜನಾ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ರಸ್ತೆಯ ಮಧ್ಯೆ ಅಡ್ಡಲಾಗಿರುವ ಸೇತುವೆ ವಿಸ್ತರಣೆಗೆ ಸ್ಥಳೀಯ ಸಮಾಜ ಸೇವಕ ರಾಮಕೃಷ್ಣ ಅವರು ನೆರವು ನೀಡಿದ್ದಾರೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಿರ್ವಹಿಸುತ್ತಿದ್ದಾರೆ. -ಎಸ್. ಕೆ. ಮನೋಹರ್ ಅರಸ್, ಉಪಾಧ್ಯಕ್ಷರು, ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ.

ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಬಳಸುತ್ತಿರುವ ಸಿಮೆಂಟ್ ಕಳಪೆಯಾಗಿದೆ. ಈ ಬಗ್ಗೆ ಈ ರಸ್ತೆಯ ಯೋಜನಾ ವೆಚ್ಚದ ವಿವರವನ್ನು ಕೇಳಿದರೂ ಈವರೆಗೂ ನೀಡಿಲ್ಲ. ಸುರಕ್ಷತಾ ನಿಯಮಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಕಾಮಗಾರಿ ನಡೆಸದಿದ್ದರೆ ಪ್ರತಿಭಟನೆ ನಡೆಸುತ್ತೇನೆ. –ಶಂಕರ ಮೂರ್ತಿ, ಸಮಾಜ ಸೇವಕರು, ಶೆಟ್ಟಹಳ್ಳಿ.

 

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

4 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

8 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

24 hours ago