Andolana originals

ಶೆಟ್ಟಿಹಳ್ಳಿ : ಕಾಂಕ್ರಿಟ್ ರಸ್ತೆ, ಚರಂಡಿ ಕಾಮಗಾರಿ ಕಳಪೆ

84 ಲಕ್ಷ ರೂ. ವೆಚ್ಚದ ಕಾಮಗಾರಿಯಲ್ಲಿ ಸಿಮೆಂಟ್‌ಗಿಂತ ಎಂ ಸ್ಯಾಂಡ್‌ ಹೆಚ್ಚು ಬಳಕೆ: ಆರೋಪ
ಮಾಮರಶಿ

ಮಳವಳ್ಳಿ: ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದಿಂದ ಪಟ್ಟಣದ ಎಸ್‌ಸಿ, ಎಸ್‌ಟಿ ಬಾಲಕರ ಹಾಸ್ಟೆಲ್‌ನವರೆಗೆ ೮೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆಪಾದಿಸಿದ್ದಾರೆ.

ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಮತ್ತು ಚರಂಡಿ ಕಾಮಗಾರಿ ಸಂಬಂಧ ಶಾಸಕರಾದ ಪಿ. ಎಂ. ನರೇಂದ್ರಸ್ವಾಮಿ ಅವರು ಹೆಚ್ಚಿನ ಕಾಳಜಿ ವಹಿಸಿ ೨೦೨೨-೨೩ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಗ್ರಾಮೀಣ ರಸ್ತೆ ಅಭಿವೃದ್ಧಿಪಡಿಸಲು ಹಂಚಿಕೆಯಾದ ಅನುದಾನದಲ್ಲಿ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರು. ಆರಂಭದಲ್ಲಿ ತಡವಾದರೂ ನಂತರ ಬಿರುಸಿನಿಂದ ಸಾಗಿರುವ ಕಾಮಗಾರಿಯ ಗುಣಮಟ್ಟ ಕಳಪೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸಾವಿರಾರು ಜನರ ಸಂಚಾರ:ಈ ರಸ್ತೆಯಲ್ಲಿ ದಿನನಿತ್ಯ ಸಾವಿರಾರು ಜನರು, ಶಾಲಾ ಕಾಲೇಜು ಮಕ್ಕಳು ಸಂಚರಿಸುತ್ತಾರೆ. ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಅಳವಡಿಸಿಕೊಂಡು ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ಮಾಡಬೇಕಿದೆ.

ಸಿಮೆಂಟ್ ರಸ್ತೆ ಕಾಮಗಾರಿ ಎಂ ಸ್ಯಾಂಡ್‌ಮಯ! : ಈ ರಸ್ತೆ ಸಿಮೆಂಟ್ ರಸ್ತೆಯಾಗಿದ್ದು ಎಲ್ಲವೂ ಎಂ. ಸ್ಯಾಂಡ್ ಮಯವಾಗಿದೆ, ಇದರಲ್ಲಿ ಎಷ್ಟು ಸಿಮೆಂಟ್ ಮಿಶ್ರಣವಾಗಿದೆ ಎಂಬುದು ತಿಳಿದಿಲ್ಲ. ಸೇತುವೆ ಕಾಮಗಾರಿಯಲ್ಲೂ ಬರಿ ಎಂ. ಸ್ಯಾಂಡ್ ಹೆಚ್ಚಾಗಿ ಬಳಸಿ ರುವುದರಿಂದ ಎಲ್ಲವೂ ಎಂ ಸ್ಯಾಂಡ್‌ಮಯ ಎನ್ನಬಹುದು.

ಗುಣಮಟ್ಟದ ಕಾಮಗಾರಿ ಮಾಡಲು ಒತ್ತಾಯ: ದಿನನಿತ್ಯ ಸಾವಿರಾರು ಜನರು, ಶಾಲಾ ಕಾಲೇಜು ಮಕ್ಕಳು, ವಾಹನಗಳ ಸಂಚರಿಸುವುದರಿಂದ ಈ ರಸ್ತೆ ಗುಟ್ಟಮಟ್ಟದ ಕಾಮಗಾರಿ ಆಗಬೇಕು, ಸುರಕ್ಷತೆ ನಿಯಮಗಳನ್ನು ಅಳವಡಿಸಿಕೊಂಡು ಶಾಶ್ವತ ಗುಣಮಟ್ಟದಿಂದ ಕಾಮಗಾರಿ ನಡೆಸುಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಸೇತುವೆ ಅಗಲೀಕರಣಕ್ಕೆ ಸಮಾಜ ಸೇವಕರ ನೆರವು: ೮೪ ಲಕ್ಷ ಯೋಜನಾ ವೆಚ್ಚದ ಕಾಂಕ್ರಿಟ್ ರಸ್ತೆಗೆ ಅಡ್ಡಲಾಗಿ ಹೋಗಿರುವ ಹಳೆಯ ಸೇತುವೆ ವಿಸ್ತರಿಸಲು ಸಮಾಜ ಸೇವಕ ರಾಮಕೃಷ್ಣ ಅವರು ಸ್ವತಃ ೩ ಲಕ್ಷ ಹಣ ನೀಡಿ ಸೇತುವೆ ಅಗಲೀಕರಣಕ್ಕೆ ಮುಂದಾಗಿದ್ದಾರೆ.

೮೪ ಲಕ್ಷ ರೂ. ಯೋಜನಾ ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ. ರಸ್ತೆಯ ಮಧ್ಯೆ ಅಡ್ಡಲಾಗಿರುವ ಸೇತುವೆ ವಿಸ್ತರಣೆಗೆ ಸ್ಥಳೀಯ ಸಮಾಜ ಸೇವಕ ರಾಮಕೃಷ್ಣ ಅವರು ನೆರವು ನೀಡಿದ್ದಾರೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಿರ್ವಹಿಸುತ್ತಿದ್ದಾರೆ. -ಎಸ್. ಕೆ. ಮನೋಹರ್ ಅರಸ್, ಉಪಾಧ್ಯಕ್ಷರು, ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿ.

ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಬಳಸುತ್ತಿರುವ ಸಿಮೆಂಟ್ ಕಳಪೆಯಾಗಿದೆ. ಈ ಬಗ್ಗೆ ಈ ರಸ್ತೆಯ ಯೋಜನಾ ವೆಚ್ಚದ ವಿವರವನ್ನು ಕೇಳಿದರೂ ಈವರೆಗೂ ನೀಡಿಲ್ಲ. ಸುರಕ್ಷತಾ ನಿಯಮಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಕಾಮಗಾರಿ ನಡೆಸದಿದ್ದರೆ ಪ್ರತಿಭಟನೆ ನಡೆಸುತ್ತೇನೆ. –ಶಂಕರ ಮೂರ್ತಿ, ಸಮಾಜ ಸೇವಕರು, ಶೆಟ್ಟಹಳ್ಳಿ.

 

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago