Andolana originals

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ ಉದ್ಘಾಟನೆ ಹಾಗೂ ವಿಮಾನ ಗೋಪುರ ಮತ್ತು ಕಲಶಾರೋಹಣ ಮಹೋತ್ಸವ ನಡೆಯಲಿದ್ದು, ಸಮಾರಂಭವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.

ಫೆ.೨೬ರಂದು ಗುರುವಾರ ಸಂಜೆ ೪ ಗಂಟೆಗೆ ಕಳಸ ಪೂಜೆಯ ಮೂಲಕ ಹಾಲ್ಹರವಿ, ವೀರಗಾಸೆ, ಛತ್ರಿ-ಚಾಮರ, ನಂದಿ ಧ್ವಜ, ಮಂಗಳವಾದ್ಯಗಳ ಸಮೇತ ಗಂಗೆ ತಡಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟು ದೇವಸ್ಥಾನದ ಸ್ಥಳಕ್ಕೆ ತಲುಪಲಿದೆ. ನಂತರ ವಿವಿಧ ಪೂಜೆ, ಹೋಮ-ಹವನಗಳು ನೆರವೇರಲಿವೆ.

ಫೆ.೨೭ರಂದು ಶುಕ್ರವಾರ ಮುಂಜಾನೆ ೩.೩೦ರಿಂದ ೪.೨೦ರೊಳಗೆ ಶ್ರೀ ಶಿವಲಿಂಗ ಮತ್ತು ಗಣಪತಿ ಮೂರ್ತಿಗಳ ಶಿಲಾಯಂತ್ರದ ದೇವತಾ ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಮೃತ್ಯುಂಜಯ ಹೋಮ, ದುರ್ಗಾ ಹೋಮ, ವಿಮಾನ ಗೋಪುರದ ಕಳಶಾರೋಹಣ, ಮಹಾಬಲಿ, ಮಹಾಪೂರ್ಣಾಹುತಿ, ಅಷ್ಟೋತ್ತರ, ಮಹಾಮಂಗಳಾರತಿ ನೆರವೇರಲಿದೆ. ಈ ಎಲ್ಲಾ ಪೂಜಾ ಕಾರ್ಯಕ್ರಮಗಳನ್ನು ಕಬ್ಬಹಳ್ಳಿ ಶ್ರೀ ಜಂಗಮ ಮಠದ ಶ್ರೀ ಗುರುಸಿದ್ದಸ್ವಾಮಿಗಳವರು ನೆರವೇರಿಸಲಿದ್ದಾರೆ.

ಧಾರ್ಮಿಕ ಸಭೆ: ನಂತರ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಗಳು, ದೇವನೂರು ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮಿಗಳು, ಪಡಗೂರು ಅಡವಿ ಮಠಾಧ್ಯಕ್ಷರಾದ ಶ್ರೀ ಶಿವಲಿಂಗೇಂದ್ರ ಸ್ವಾಮಿಗಳು, ಸೋಮಹಳ್ಳಿಯ ವೀರಸಿಂಹಾಸನ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಸ್ವಾಮಿಗಳು, ವಿರಕ್ತ ಮಠದ ತೋಂಟದಾರ್ಯ ಸ್ವಾಮಿಗಳು, ಶ್ರೀ ಚನ್ನಬಸವಸ್ವಾಮಿಗಳು, ಶ್ರೀ ಸರ್ಪಭೂಷಣ ಸ್ವಾಮಿಗಳು, ಮತ್ತಿತರ ಸ್ಥಳೀಯ ಮಠಾಧೀಶರು ಭಾಗಿಯಾಗಲಿದ್ದಾರೆ.

” ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಾಸಕರಾದ ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಇತರರು ಭಾಗಿಯಾಗಲಿದ್ದಾರೆ”

 

 

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

54 mins ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

3 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

3 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago