Andolana originals

ಫೆ.26, 27ಕ್ಕೆ ಕಡಬೂರಿನಲ್ಲಿ ಶಿವ, ಗಣೇಶ ದೇವಸ್ಥಾನ ಲೋಕಾರ್ಪಣೆ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ ಉದ್ಘಾಟನೆ ಹಾಗೂ ವಿಮಾನ ಗೋಪುರ ಮತ್ತು ಕಲಶಾರೋಹಣ ಮಹೋತ್ಸವ ನಡೆಯಲಿದ್ದು, ಸಮಾರಂಭವನ್ನು ವಿಜೃಂಭಣೆಯಿಂದ ಹಮ್ಮಿಕೊಳ್ಳಲಾಗಿದೆ.

ಫೆ.೨೬ರಂದು ಗುರುವಾರ ಸಂಜೆ ೪ ಗಂಟೆಗೆ ಕಳಸ ಪೂಜೆಯ ಮೂಲಕ ಹಾಲ್ಹರವಿ, ವೀರಗಾಸೆ, ಛತ್ರಿ-ಚಾಮರ, ನಂದಿ ಧ್ವಜ, ಮಂಗಳವಾದ್ಯಗಳ ಸಮೇತ ಗಂಗೆ ತಡಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟು ದೇವಸ್ಥಾನದ ಸ್ಥಳಕ್ಕೆ ತಲುಪಲಿದೆ. ನಂತರ ವಿವಿಧ ಪೂಜೆ, ಹೋಮ-ಹವನಗಳು ನೆರವೇರಲಿವೆ.

ಫೆ.೨೭ರಂದು ಶುಕ್ರವಾರ ಮುಂಜಾನೆ ೩.೩೦ರಿಂದ ೪.೨೦ರೊಳಗೆ ಶ್ರೀ ಶಿವಲಿಂಗ ಮತ್ತು ಗಣಪತಿ ಮೂರ್ತಿಗಳ ಶಿಲಾಯಂತ್ರದ ದೇವತಾ ಪ್ರಾಣ ಪ್ರತಿಷ್ಠಾಪನೆ, ರುದ್ರಾಭಿಷೇಕ, ಮೃತ್ಯುಂಜಯ ಹೋಮ, ದುರ್ಗಾ ಹೋಮ, ವಿಮಾನ ಗೋಪುರದ ಕಳಶಾರೋಹಣ, ಮಹಾಬಲಿ, ಮಹಾಪೂರ್ಣಾಹುತಿ, ಅಷ್ಟೋತ್ತರ, ಮಹಾಮಂಗಳಾರತಿ ನೆರವೇರಲಿದೆ. ಈ ಎಲ್ಲಾ ಪೂಜಾ ಕಾರ್ಯಕ್ರಮಗಳನ್ನು ಕಬ್ಬಹಳ್ಳಿ ಶ್ರೀ ಜಂಗಮ ಮಠದ ಶ್ರೀ ಗುರುಸಿದ್ದಸ್ವಾಮಿಗಳವರು ನೆರವೇರಿಸಲಿದ್ದಾರೆ.

ಧಾರ್ಮಿಕ ಸಭೆ: ನಂತರ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಗಳು, ದೇವನೂರು ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮಿಗಳು, ಪಡಗೂರು ಅಡವಿ ಮಠಾಧ್ಯಕ್ಷರಾದ ಶ್ರೀ ಶಿವಲಿಂಗೇಂದ್ರ ಸ್ವಾಮಿಗಳು, ಸೋಮಹಳ್ಳಿಯ ವೀರಸಿಂಹಾಸನ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಸ್ವಾಮಿಗಳು, ವಿರಕ್ತ ಮಠದ ತೋಂಟದಾರ್ಯ ಸ್ವಾಮಿಗಳು, ಶ್ರೀ ಚನ್ನಬಸವಸ್ವಾಮಿಗಳು, ಶ್ರೀ ಸರ್ಪಭೂಷಣ ಸ್ವಾಮಿಗಳು, ಮತ್ತಿತರ ಸ್ಥಳೀಯ ಮಠಾಧೀಶರು ಭಾಗಿಯಾಗಲಿದ್ದಾರೆ.

” ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಶಾಸಕರಾದ ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಇತರರು ಭಾಗಿಯಾಗಲಿದ್ದಾರೆ”

 

 

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

5 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

6 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

7 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

8 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

8 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

9 hours ago