Andolana originals

ಮನ್ಮುಲ್ ಅಧ್ಯಕ್ಷರಾಗಿ ಶಿವಕುಮಾರ್?

ಬಿ.ಟಿ.ಮೋಹನ್ ಕುಮಾರ್

ಮಾಜಿ ಎಂಎಲ್‌ಸಿ ಎನ್.ಅಪ್ಪಾಜಿಗೌಡರನ್ನು ಕೆಎಂಎಫ್ ನಿರ್ದೇಶಕರನ್ನಾಗಿ ನೇಮಕ

ಮಾಡುವ ಸಂಭವ; ಇಬ್ಬರಿಗೂ ಅಧಿಕಾರ ಹಂಚಿಕೆ ಮಾಡುವ ಸಾಧ್ಯತೆಯೂ ಉಂಟು

ಮಂಡ್ಯ: ಜಿ ಹಾಲು ಉತ್ಪಾದಕರ ಒಕ್ಕೂಟದ ವರಿಷ್ಠರ ಚುನಾವಣೆ ಮೇ ೨೦ರಂದು ನಿಗದಿಯಾಗಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಮಂಡ್ಯ ತಾಲ್ಲೂಕಿನ ಯು.ಸಿ.ಶಿವಕುಮಾರ್ (ಶಿವಪ್ಪ) ಮತ್ತು ಮಾಜಿ ಎಂಎಲ್‌ಸಿ ನಾಗಮಂಗಲ ತಾಲ್ಲೂಕಿನ ಎನ್. ಅಪ್ಪಾಜಿಗೌಡ ನಡುವೆ ಮೇಲ್ನೋಟಕ್ಕೆ ಪೈಪೋಟಿ ಇದೆಯಾದರೂ ಯು.ಸಿ. ಶಿವಕುಮಾರ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಶಿವಕುಮಾರ್ ಅವರು ಸತತ ೩ನೇ ಬಾರಿಗೆ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆಯಾಗಿರುವುದರಿಂದ ಕಾಂಗ್ರೆಸ್ ವರಿಷ್ಠರು ಅವರಿಗೆ ಮೊದಲ ಆದ್ಯತೆ ನೀಡಲಿದ್ದಾರೆ ಎನ್ನಲಾಗುತ್ತಿದ್ದು ಎನ್. ಅಪ್ಪಾಜಿಗೌಡ ಅವ ರನ್ನು ಕರ್ನಾಟಕ ಹಾಲು ಮಹಾ ಮಂಡಳದ ನಿರ್ದೇಶಕರನ್ನಾಗಿ ನೇಮಕ ಮಾಡಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ. ಯು.ಸಿ.ಶಿವಕುಮಾರ್ ಅವರು ಮೂರನೇ ಬಾರಿ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆಯಾಗಿದ್ದರೆ, ಎನ್. ಅಪ್ಪಾಜಿಗೌಡ ಅವರು ಇದೇ ಮೊದಲ ಬಾರಿಗೆ ಆಯ್ಕೆ ಯಾಗಿzರೆ. ಜಾತ್ಯತೀತ ಜನತಾ ದಳದಿಂದ ಒಮ್ಮೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಚಲುವರಾಯಸ್ವಾಮಿ ಕೃಪಾಕಟಾಕ್ಷ ಯಾರಿಗೆ?: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಜಾ.ದಳದಿಂದ ಎನ್.ಅಪ್ಪಾಜಿಗೌಡ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆ ಯಾಗಲು ಕಾರಣರಾಗಿದ್ದಾರೆ. ಈಗ ಅಧ್ಯಕ್ಷರ ಆಯ್ಕೆ ತಲೆ ನೋವಾಗಿ ಪರಿಣಮಿಸಿದೆ.

ಚಲುವರಾಯಸ್ವಾಮಿ ಅವರಿಗೆ ಎನ್. ಅಪ್ಪಾಜಿಗೌಡರನ್ನು ಅಧ್ಯಕ್ಷರನ್ನಾಗಿ ಮಾಡುವ ಆಸೆ ಇದ್ದರೂ ೩ ಬಾರಿ ಗೆದ್ದಿರುವ ಯು.ಸಿ.ಶಿವಕುಮಾರ್ ಅವರನ್ನು ಕೈಬಿಡುವುದಕ್ಕೂ ಆಗುತ್ತಿಲ್ಲ. ಇಬ್ಬರಿಗೂ ಸಮಾಧಾನ ವಾಗುವ ರೀತಿಯಲ್ಲಿ ಅಧಿಕಾರ ಹಂಚಿಕೆ ಮಾಡಿದರೂ ಮಾಡಬಹುದು. ಅದರಲ್ಲಿ ಮೊದಲ ಅವಧಿಗೆ ಅಧ್ಯಕ್ಷರಾಗುವ ವರು ಯಾರೆಂಬ ಬಗ್ಗೆ ಕುತೂಹಲ ಮೂಡಿದೆ.

ನಿರ್ದೇಶಕರ ವಿವರ: ಮಂಡ್ಯ ತಾಲ್ಲೂ ಕಿನ ಮೂರು ಸ್ಥಾನಗಳಿಗೆ ಬಿ.ಆರ್. ರಾಮಚಂದ್ರ, ಎಂ.ಎಸ್.ರಘುನಂದನ್ -ಜಾ.ದಳ, ಯು.ಸಿ.ಶಿವಕುಮಾರ್ – ಕಾಂಗ್ರೆಸ್, ಮದ್ದೂರು ತಾಲ್ಲೂಕಿನ ಎರಡು ಸ್ಥಾನಗಳಿಗೆ ಎಸ್.ಪಿ.ಸ್ವಾಮಿ -ಬಿಜೆಪಿ, ಹರೀಶ್‌ಬಾಬು – ಕಾಂಗ್ರೆಸ್, ಕೆ.ಆರ್.ಪೇಟೆಯ ಎರಡು ಸ್ಥಾನಗಳಿಗೆ ಡಾಲು ರವಿ, ಎಂ.ಬಿ.ಹರೀಶ್, ನಾಗ ಮಂಗಲದ ಎರಡು ಸ್ಥಾನಗಳಿಗೆ ಎನ್.ಅಪ್ಪಾಜಿಗೌಡ, ಲಕ್ಷ್ಮಿನಾರಾಯಣ (ಕಾಂಗ್ರೆಸ್), ಮಳವಳ್ಳಿ ಒಂದು ಸ್ಥಾನಕ್ಕೆ ಕೃಷ್ಣೇಗೌಡ (ಕಾಂಗ್ರೆಸ್), ಪಾಂಡವಪುರ ತಾಲ್ಲೂಕಿನ ಒಂದು ಸ್ಥಾನಕ್ಕೆ ಸಿ.ಶಿವಕುಮಾರ್ (ಜಾ.ದಳ) ಹಾಗೂ ಶ್ರೀರಂಗಪಟ್ಟಣದ ಒಂದು ಸ್ಥಾನಕ್ಕೆ ಬಿ.ಬೊರೇಗೌಡ (ಕಾಂಗ್ರೆಸ್) ಆಯ್ಕೆಯಾಗಿದ್ದಾರೆ.

೧೭ ಮಂದಿ ಮತದಾರರು: ಮನ್ ಮುಲ್ ಅಧ್ಯಕ್ಷ- ಉಪಾಧ್ಯಕ್ಷರ ಚುನಾ ವಣೆಯಲ್ಲಿ ಒಟ್ಟು ೧೭ ಮಂದಿಗೆ ಮತದಾನ ಮಾಡುವ ಅವಕಾಶವಿದೆ. ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘ ಗಳಿಂದ ಚುನಾಯಿತರಾದ ೧೨ ಮಂದಿ ನಿರ್ದೇಶಕರು, ತಲಾ ಒಬ್ಬೊಬ್ಬರಂತೆ ಸರ್ಕಾರದ ನಾಮನಿರ್ದೇ ಶಿತ ಸದಸ್ಯರು, ಮಂಡ್ಯ ಸಹಕಾರ ಸಂಘಗಳ ಉಪನಿಬಂಧಕರು, ಕರ್ನಾ ಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳದ ಪ್ರತಿನಿಧಿ, ಮಂಡ್ಯ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕರು, ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳದ ಪ್ರತಿನಿಧಿ ಸೇರಿ ೧೭ ಮಂದಿ ಮತ ಚಲಾ ಯಿಸುವ ಹಕ್ಕನ್ನು ಹೊಂದಿದ್ದಾರೆ.

ವರಿಷ್ಠರ ತೀರ್ಮಾನಕ್ಕೆ ಬದ್ಧ

” ಮನ್‌ಮುಲ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಸಂಬಂಧ ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಗುರುವಾರ ಸಭೆ ನಡೆಯಲಿದೆ. ಶಿವಕುಮಾರ್ ಹಾಗೂ ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು, ಇದನ್ನು ವರಿಷ್ಠರ ಗಮನಕ್ಕೆ ತಂದಿದ್ದೇವೆ. ಅಂತಿಮವಾಗಿ ವರಿಷ್ಠರು ಏನೇ ತೀರ್ಮಾನ ತೆಗೆದುಕೊಂಡರೂ ನಾನು ಅದಕ್ಕೆ ಬದ್ಧನಾಗಿರುತ್ತೇನೆ.”

– ಎನ್.ಅಪ್ಪಾಜಿಗೌಡ, ಮಾಜಿ ಎಂಎಲ್‌ಸಿ

ನ್ಯಾಯ ಸಿಗುವ ವಿಶ್ವಾಸ

” ಸತತ ೩ನೇ ಬಾರಿ ಮನ್‌ಮುಲ್ ನಿರ್ದೇಶಕನಾಗಿ ಆಯ್ಕೆಯಾಗಿದ್ದು, ಗೆದ್ದವರೆಲ್ಲರೂ ಅಧ್ಯಕ್ಷರಾಗಬೇಕೆಂದು ಆಸೆಪಡು ವುದು ಸಹಜ. ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿ ದ್ದೇನೆ. ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ವರಿಷ್ಠರ ತೀರ್ಮಾನ. ಸಚಿವ ಚಲುವರಾಯ ಸ್ವಾಮಿ ಅವರು ನ್ಯಾಯ ಒದಗಿಸುತ್ತಾರೆ ಎಂಬ ನಂಬಿಕೆ ನನಗಿದೆ.”

– ಯು.ಸಿ. ಶಿವಕುಮಾರ್, ನಿರ್ದೇಶಕರು, ಮನ್‌ಮುಲ್

ಆಂದೋಲನ ಡೆಸ್ಕ್

Recent Posts

ಭಾಷಣ ಓದದೇ ತೆರಳಿದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌: ಕಾಂಗ್ರೆಸ್‌ ನಾಯಕರಿಂದ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಕೇವಲ ಎರಡನೇ ಮಾತಿನಲ್ಲಿ…

5 mins ago

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್ ಡೇ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…

53 mins ago

ರಾಜ್ಯಪಾಲರು-ಸರ್ಕಾರದ ಸಂಘರ್ಷದ ನಡುವೆಯೇ ವಿಧಾನಸೌಧದಲ್ಲಿ ಅಧಿವೇಶನ: ಪೊಲೀಸರಿಂದ ಭದ್ರತೆ

ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…

1 hour ago

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

4 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

4 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

4 hours ago